ಕನ್ನಡಪ್ರಭ ವಾರ್ತೆ ಗೌರಿಬಿದನೂರು
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥ ಶ್ರೀ ಅಶ್ವತ್ಥನಾರಾಯಣ ಸ್ವಾಮಿಯ ಸನ್ನಿಧಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಮನೆ, ಮನೆಗೆ ತ್ರಿವರ್ಣ ಧ್ವಜ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಯಾತ್ರೆಗೂ ಮುನ್ನ ವಿದುರಾಶ್ವತ್ಥ ಶ್ರೀ ಅಶ್ವತ್ಥನಾರಾಯಣಸ್ವಾಮಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿ, ನಂತರ ವೀರಸೌಧಕ್ಕೆ ನಮನ ಸಲ್ಲಿಸಿದರು.
ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ:ಆಗಸ್ಟ್ 13 ರಿಂದ ಆಗಸ್ಟ್ 15 ರವರೆಗೆ ನಾಗರಿಕರು ರಾಷ್ಟ್ರಧ್ವಜವನ್ನು ಮನೆಗೆ ತಂದು ಹೆಮ್ಮೆಯಿಂದ ಪ್ರದರ್ಶಿಸಲು ಪ್ರೇರೇಪಿಸುವುದು ಹರ್ ಘರ್ ತಿರಂಗಾ ಅಭಿಯಾನದ ಪ್ರಾಥಮಿಕ ಉದ್ದೇಶ. ನಮ್ಮ ದೇಶದ ಸಾರ್ವಭೌಮತ್ವ ಮತ್ತು ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರು ಮಾಡಿದ ತ್ಯಾಗಗಳ ಸಂಕೇತವಾಗಿ ರಾಷ್ಟ್ರಧ್ವಜದ ಮಹತ್ವವನ್ನು ಬಲಪಡಿಸುವ ಗುರಿಯನ್ನು ಈ ಅಭಿಯಾನ ಹೊಂದಿದೆ ಎಂದರು.
ಅಭಿಯಾನಕ್ಕೆ ಕೈಜೋಡಿಸಿ:
ಸಮಾರಂಭದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ವಿಶ್ವನಾಥ್, ಶಾಸಕ ಮುನಿರಾಜು, ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.
ಯಾತ್ರೆಯ ಅಂಗವಾಗಿ ಬೆಂಗಳೂರು- ಯಲಹಂಕ- ದೊಡ್ಡಬಳ್ಳಾಪುರ- ಗೌರಿಬಿದನೂರು ಹೊರವಲಯದ ಎಪಿಎಂಸಿ ಮಾರುಕಟ್ಟೆ ಸರ್ಕಲ್ ನಿಂದ ವಿದುರಾಶ್ವತ್ಥದ ವೀರಸೌಧದವರೆಗೆ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ಈ ಮಧ್ಯೆ, ನಗರ ಹೊರವಲಯದಲ್ಲಿರುವ ತಾಲೂಕು ಕಚೇರಿ ಆವರಣದಲ್ಲಿ ವಾಟದಹೊಸಹಳ್ಳಿ ಕೆರೆ ಅಚ್ಚುಕಟ್ಟುದಾರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿದ್ದು, ಇದೇ ಮಾರ್ಗವಾಗಿ ಬಂದ ವಿಜಯೇಂದ್ರ ಅವರಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಿದರು. ವಾಟದಹೊಸಹಳ್ಳಿ ಕೆರೆ ನೀರನ್ನು ಗೌರಿಬಿದನೂರು ನಗರಕ್ಕೆ ಹರಿಸದಂತೆ ಆಗ್ರಹಿಸಿದರು.