ಬಿಜೆಪಿ ಮತ ಕಸಿದುಕೊಳ್ಳುವ ಕ್ರಮ ಕಾನೂನುಬಾಹಿರ: ಗಣಪತಿ

KannadaprabhaNewsNetwork |  
Published : Oct 16, 2025, 02:00 AM IST
ಫೋಟೊ:೧೫ಕೆಪಿಸೊರಬ-೦೧ : ಸೊರಬ ಪಟ್ಟಣದ ಬಸ್ಟಾö್ಯಂಡ್ ವೃತ್ತದಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ದೇಶದಲ್ಲಿ ನಡೆಯುತ್ತಿರುವ ಮತಕಳ್ಳತನ ಪ್ರಕರಣ ತಡೆಯುವಂತೆ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. | Kannada Prabha

ಸಾರಾಂಶ

ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟತಂಹ ಸಂವಿಧಾನದಲ್ಲಿ ಪ್ರತಿಯೊಬ್ಬರು ಒಂದು ಮತದಾನವನ್ನು ನೀಡುವ ಮೂಲಕ ಪ್ರತಿಯೊಬ್ಬರ ಮತದಾನವು ಒಂದೇ ಆಗಿರುವುದು ಪ್ರಜಾಪ್ರಭುತ್ವದ ವೈಭವವಾಗಿದೆ. ಇದನ್ನು ಸಹಿಸದ ಬಿಜೆಪಿ ಧರ್ಮ-ಜಾತಿಯನ್ನು ಎಳೆದು ತರುವ ಮೂಲಕ ಜನರಲ್ಲಿ ಕಂದಕ ಸೃಷ್ಟಿಸುತ್ತಿದೆ ಎಂದು ತಾ.ಪಂ. ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಗಣಪತಿ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಸೊರಬ

ಮತ ಕಳ್ಳತನ ಅಘಾತಕಾರಿ ಬೆಳವಣಿಗೆಯಾಗಿದೆ. ಪ್ರತಿಯೊಬ್ಬರ ಮತವನ್ನು ಕಸಿದುಕೊಳ್ಳುವ ಕ್ರಮ ಈ ದೇಶದಲ್ಲಿ ಕಾನೂನು ಬಾಹಿರ ಕ್ರಮವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಕೊಟ್ಟತಂಹ ಸಂವಿಧಾನದಲ್ಲಿ ಪ್ರತಿಯೊಬ್ಬರು ಒಂದು ಮತದಾನವನ್ನು ನೀಡುವ ಮೂಲಕ ಪ್ರತಿಯೊಬ್ಬರ ಮತದಾನವು ಒಂದೇ ಆಗಿರುವುದು ಪ್ರಜಾಪ್ರಭುತ್ವದ ವೈಭವವಾಗಿದೆ. ಇದನ್ನು ಸಹಿಸದ ಬಿಜೆಪಿ ಧರ್ಮ-ಜಾತಿಯನ್ನು ಎಳೆದು ತರುವ ಮೂಲಕ ಜನರಲ್ಲಿ ಕಂದಕ ಸೃಷ್ಟಿಸುತ್ತಿದೆ ಎಂದು ತಾ.ಪಂ. ಮಾಜಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಗಣಪತಿ ಆರೋಪಿಸಿದರು.

ಪಟ್ಟಣದ ಬಸ್‌ ಸ್ಟ್ಯಾಂಡ್ ವೃತ್ತದಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನ ಪ್ರಕರಣ ತಡೆಯುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಷ್ಟು ಹಿಂದಿನ ಯಾವ ಸರ್ಕಾರವೂ ಮಾಡಿಲ್ಲ. ಸಿಬಿಐ, ಇ.ಡಿ. ಮತ್ತಿತರ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ನ್ಯಾಯಾಂಗ ವ್ಯವಸ್ಥೆಯನ್ನೂ ಹದಗೆಡಿಸಿದೆ. ಈಗ ಮತಕಳ್ಳತನಕ್ಕೂ ಇಳಿದು ಬಿಟ್ಟಿದೆ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾಕ್ಷಿ ಸಮೇತ ಸಾಬೀತುಪಡಿಸಿದ್ದಾರೆ. ಇನ್ನು ಮುಂದಾದರೂ ಮತದಾರರು ಜಾಗೃತರಾಗಬೇಕು ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ ಮಾತನಾಡಿ, ಮತಕಳ್ಳತನದ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಇತ್ತೀಚೆಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆಯುವ ಪ್ರಯತ್ನ, ಕೇರಳದಲ್ಲಿ ರಾಹುಲ್‌ಗಾಂಧಿಗೆ ಬೆದರಿಕೆ ಹೀಗೆ ದೇಶದಲ್ಲಿ ಭಯದ ವಾತಾವರಣವನ್ನು ಬಿಜೆಪಿ ಸೃಷ್ಠಿಸುತ್ತಿದೆ ಎಂದು ಆರೋಪಿಸಿದರು.

ಜಿಪಂ ಮಾಜಿ ಸದಸ್ಯ ತಬಲಿ ಬಂಗಾರಪ್ಪ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರದ ಸರ್ಕಾರಕ್ಕೆ ಜನಪರ ಕಾಳಜಿಯಿಲ್ಲ. ಅಭಿವೃದ್ಧಿ ಬಗ್ಗೆ ಚಿಂತೆಯಿಲ್ಲ. ಕೋಮು ಸಾಮರಸ್ಯವನ್ನು ಕದಡಿ ಧರ್ಮವನ್ನು ಒಡೆದು ಆಳುವುದೇ ಇದರ ಮುಖ್ಯ ಉದ್ದೇಶ. ಬಿಜೆಪಿ ಮತಗಳ್ಳತನ ಮಾಡಿರುವುದನ್ನು ರಾಹುಲ್ ಗಾಂಧಿ ಸಾಬೀತು ಮಾಡಿದ್ದಾರೆ. ಈ ವಿಚಾರದಲ್ಲಿ ಚುನಾವಣಾ ಆಯೋಗದ ನಿರ್ಲಕ್ಷ÷್ಯ ಸರಿಯಲ್ಲ ಎಂದ ಅವರು ತಾಲೂಕಿನ ಪ್ರತಿ ಬೂತ್‌ನಲ್ಲಿಯೂ ಮತಕಳ್ಳತನವಾಗಿರುವ ಬಗ್ಗೆ ಪಟ್ಟಿ ತಯಾರಿಸಿ, ಎಐಸಿಸಿಗೆ ಕಳುಹಿಸಲಾಗುವುದು ಎಂದರು.

ನಂತರ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಆನವಟ್ಟಿ ಬ್ಲಾಕ್ ಅಧ್ಯಕ್ಷ ಸದಾನಂದಗೌಡ, ಯುವ ಘಟಕದ ಅಧ್ಯಕ್ಷ ಪ್ರವೀಣ್‌ಕುಮಾರ್ ಶಾಂತಗೆರೆ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್, ಪುರಸಭೆ ಸದಸ್ಯರಾದ ಅಫ್ರಿನಾ ಬಾನು, ಸುಲ್ತಾನಾ ಬೇಗಂ, ಮುಖಂಡರಾದ ಪ್ರಕಾಶ್ ಹಳೆಸೊರಬ, ಶ್ರೀಕಾಂತ್ ಚಿಕ್ಕಶಕುನ, ಪ್ರಶಾಂತ್ ಮೇಸ್ತಿç, ರಾಘು ಶಿಗ್ಗಾ, ಕಲ್ಲಪ್ಪ ಚಿತ್ರಟ್ಟೆಹಳ್ಳಿ, ಬಸವೇಶ್ವರ, ಅತಿಕುರ್ ರೆಹಮಾನ್, ಕೆ.ಪಿ.ರಾಜೇಶ್, ಸೇವಾದಳದ ಶಿವಣ್ಣ ಮೊದಲಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೆಕ್ಕೆಜೋಳ ಖರೀದಿಯ ಮಿತಿ 50 ಕ್ವಿಂಟಲ್‌ಗೇರಿಕೆ
ಥಾಯ್ಲೆಂಡ್‌ನಿಂದ ರಾಜ್ಯಕ್ಕೆ ಹೆಚ್ಚು ಹೈಡ್ರೋ ಗಾಂಜಾ!