- ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮತಯಾಚನೆ: ಜಿಲ್ಲಾಧ್ಯಕ್ಷ ಮಾಹಿತಿ - - - ಕನ್ನಡಪ್ರಭ ವಾರ್ತೆ ಹರಿಹರ
ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ ೪ ಗಂಟೆಗೆ ನಗರದ ಶಿವಮೊಗ್ಗ ರಸ್ತೆಯ ಪಕ್ಕೀರಸ್ವಾಮಿ ಮಠದ ಮುಂಭಾಗದಿಂದ ರೋಡ್ ಶೋ ಮೂಲಕ ಗಾಂಧಿ ವೃತ್ತಕ್ಕೆ ಆಗಮಿಸುವರು ಎಂದರು.
ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಮುಖಂಡರಾದ ಎಸ್.ಎಂ. ವೀರೇಶ್ ಹನಗವಾಡಿ, ರೋಡ್ ಶೋನಲ್ಲಿ ಭಾಗವಹಿಸುವರು. ತಾಲೂಕಿನ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು, ಮುಖಂಡರು ಭಾಗವಹಿಸಬೇಕೆಂದು ಮನವಿ ಮಾಡಿದರು.ದಾವಣಗೆರೆಯಲ್ಲಿ ವೈದ್ಯಕೀಯ ಲಾಬಿ ಕೊನೆಗಾಣಿಸಲು ಸಂಸದ ಜಿ.ಎಂ. ಸಿದ್ದೇಶ್ವರ ಶ್ರಮಿಸುತ್ತಿರುವುದು ಒಂದು ಕುಟುಂಬದವರಿಗೆ ನುಂಗಲಾರದ ತುತ್ತಾಗಿದೆ. ಹರಿಹರದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ, ಗ್ರಾಮಗಳಲ್ಲಿನ ಪ್ರತಿ ಮನೆಗೂ ಜಲಜೀವನ್ ಮಿಷನ್ ಯೋಜನೆಯಡಿ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿರುವುದು ಸೇರಿದಂತೆ ಹತ್ತಾರು ಅಭಿವೃದ್ಧಿ ಕೆಲಸಗಳು ನಡೆದಿವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐರಣಿ ಅಣ್ಣೇಶ್, ನಗರ ಘಟಕ ಅಧ್ಯಕ್ಷ ಅಜಿತ್ ಸಾವಂತ್, ಗ್ರಾಮಾಂತರ ಅಧ್ಯಕ್ಷ ಲಿಂಗರಾಜ್, ಜೆಡಿಎಸ್ ಯುವ ಘಟಕದ ನಗರಾಧ್ಯಕ್ಷ ಪ್ರೇಮ್ ಕುಮಾರ್ ಅಡಕಿ, ಎಚ್.ಮಂಜನಾಯ್ಕ್, ತುಳಜಪ್ಪ ಭೂತೆ, ರವಿ ರಾಯ್ಕರ್, ಸುನಿಲ್ ಕುಮಾರ್ ಇದ್ದರು.
ಹರಿಹರದಲ್ಲಿ ಬುಧವಾರ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.