ಜಿಲ್ಲಾ ಬಿಜೆಪಿ ಮುಖಂಡರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹುಟ್ಟುಹಬ್ಬ

KannadaprabhaNewsNetwork |  
Published : Nov 06, 2024, 12:32 AM IST
5ಕೆಎಂಎನ್ ಡಿ11 | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡಲು ಶಕ್ತಿ, ಆರೋಗ್ಯ, ಆಯಸ್ಸು ನೀಡುವಂತೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ರಸ್ತೆ ಅಂಚಿನಲ್ಲಿ ಸಸಿಗಳನ್ನು ನೆಡುತ್ತಿದ್ದೇವೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರ ಹುಟ್ಟುಹಬ್ಬದ ಪ್ರಯುಕ್ತ ನಗರದ ಸೇವಾಕಿರಣ ವೃದ್ಧಾಶ್ರಮದಲ್ಲಿ ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ನೇತೃತ್ವದಲ್ಲಿ ಆಶ್ರಮ ವೃದ್ಧರಿಗೆ ಸಿಹಿ ಮತ್ತು ಪೌಷ್ಟಿಕಾಹಾರ ವಿತರಣೆ ಮಾಡಲಾಯಿತು.

ಬಳಿಕ ಮಾತನಾಡಿದ ಎಚ್.ಆರ್.ಅರವಿಂದ್, ಹಿರಿಯ ನಾಗರಿಕರ ಆಶೀರ್ವಾದದಿಂದ ಜಿಲ್ಲೆಯ ಸುಪುತ್ರ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡಿದರು. ಜನಪರ ಯೋಜನೆಗಳನ್ನು ಜಾರಿ ಮಾಡಿದ್ದನ್ನು ಎಂದೂ ಮರೆಯಲಾರೆವು ಎಂದರು.

ಅವರ ಪುತ್ರ ನಮ್ಮ ನಾಯಕ ಬಿ.ಎಸ್.ವಿಜಯೇಂದ್ರ ಅವರು ತಂದೆ ಹಾದಿಯಲ್ಲಿ ಸಾಗಲಿ, ಜನಾಶೀರ್ವಾದದಿಂದ ರಾಜಕೀಯ ಭವಿಷ್ಯ ಉಜ್ವಲವಾಗಿ, ಮುಖ್ಯಮಂತ್ರಿ ಸ್ಥಾನ ಲಭಿಸಲಿ, ಯುವಜನತೆ ಹೊಸ ಬದಲಾವಣೆಗೆ ಮುಂದಾಗಿದ್ದಾರೆ ಎಂದು ನುಡಿದರು.

ಮುಂದಿನ ದಿನಗಳಲ್ಲಿ ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ವಿಜಯೇಂದ್ರ ಅವರು ಕೊಡುಗೆ ನೀಡಲಿದ್ದಾರೆ ಎಂಬ ಆಶಾಭಾವನೆ ನಮ್ಮದಾಗಿದೆ. ಅವರು ರಾಜಕೀಯ ಶಕ್ತಿಯಾಗಿ ಬಹು ಎತ್ತರಕ್ಕೆ ಬೆಳೆಯಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಬಿಜೆಪಿ ಒಬಿಸಿ ಘಟಕ ಅಧ್ಯಕ್ಷ ನರಸಿಂಹಾಚಾರ್, ಹೊಸಹಳ್ಳಿ ಶಿವು, ಎಂ.ಲೋಕೇಶ್, ಸಿದ್ದರಾಜುಗೌಡ, ಫುಟ್‌ಬಾಲ್ ಮಂಜು, ಪ್ರಸನ್ನ, ನಂದೀಶ್, ಯೋಗೇಶ್ ಮತ್ತಿತರರಿದ್ದರು.

ದೇವಾಲಯದಲ್ಲಿ ಪೂಜೆ, ಸ್ವಚ್ಛತೆ ಅಭಿಯಾನ:ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬದ ಅಂಗವಾಗಿ ನಗರದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ಜಿಲ್ಲಾ ಬಿಜೆಪಿ ಒಬಿಸಿ ಘಟಕದಿಂದ ದೇವಾಲಯ ಸ್ವಚ್ಚತೆ, ವಿಶೇಷ ಪೂಜೆ ಹಾಗೂ ಸಸಿ ನೆಡುವ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಬಿಜೆಪಿ ಒಬಿಸಿ ಘಟಕ ಅಧ್ಯಕ್ಷ ನರಸಿಂಹಚಾರ್ ಮಾತನಾಡಿ, ರಾಜ್ಯದಲ್ಲಿ ಯುವಸಮುದಾಯ ಹೆಚ್ಚು ಬಿಜೆಪಿಯತ್ತ ಒಲವು ತೊರಿದ್ದಾರೆ. ಆನ್‌ಲೈನ್ ಮೂಲಕ ಸದಸ್ಯತ್ವ ನೋಂದಣಿಯಲ್ಲಿ ಬಹುಪಾಲು ಯುವಕರೇ ಇದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರರ ದಕ್ಷತೆ ಮತ್ತು ಕಾರ್ಯವೈಖರಿ, ರೈತಪರ ಹೋರಾಟಗಳಿಗೆ ಯುವಕರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ ಎಂದರು.

ಮುಂದಿನ ದಿನಗಳಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡಲು ಶಕ್ತಿ, ಆರೋಗ್ಯ, ಆಯಸ್ಸು ನೀಡುವಂತೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ರಸ್ತೆ ಅಂಚಿನಲ್ಲಿ ಸಸಿಗಳನ್ನು ನೆಡುತ್ತಿದ್ದೇವೆ ಎಂದು ತಿಳಿಸಿದರು.ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿವೇಕ್, ನಗರಾಧ್ಯಕ್ಷ ವಸಂತ್‌ಕುಮಾರ್, ಆರ್.ವಾಸು, ಆನಂದ್, ನಗರಸಭಾ ಮಾಜಿ ಸದಸ್ಯರಾದ ಪ್ರಸನ್ನ, ಶಿವಕುಮಾರ್‌ಕೆಂಪಯ್ಯ, ಲಕ್ಷ್ಮಣ್‌ಗೌಡ, ಯೋಗೇಶ್, ನಂದೀಶ್ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೂ.1ಕ್ಕೆ ಕನಕಗಿರಿಯಲ್ಲಿ ಕೋರ್ಟ್ ಆರಂಭಕ್ಕೆ ಸೂಚನೆ
ಹಾವೇರಿ ವಿವಿಯಲ್ಲಿ ಅಧ್ಯಯನ ಪೀಠ ಆರಂಭಕ್ಕೆ ಅವಕಾಶ-ಕುಲಪತಿ ಡಾ. ಸುರೇಶ