ವಿಶೇಷ ಕಾರ್ಯಕ್ರಮಗಳು - ಬೆಕ್ಕಿನ ಕಲ್ಮಠದಿಂದ ಅಮ್ಮಿರ್ ಹಮ್ಮದ್ ವೃತ್ತ, ಗೋಪಿವೃತ್ತ, ಲಕ್ಷ್ಮೀ ಟಾಕೀಸ್ ವೃತ್ತ ಮಾರ್ಗವಾಗಿ ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣವರೆಗೆ ಅದ್ಧೂರಿ ಮೆರವಣಿಗೆ
- ಜಿಲ್ಲೆಯ ಹಿರಿಯರ ಮನೆಗೆ ಭೇಟಿ ನೀಡಿ, ಆಶೀರ್ವಾದ ಪಡೆಯಲಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ
- ನ.30ರಂದು ಶಿಕಾರಿಪುರದಲ್ಲಿ 20 ಸಾವಿರ ಜನ ಸೇರಿಸಿ ಬಹಿರಂಗ ಸಭೆ, ನೂತನ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅಭಿನಂದನಾ ಸಮಾರಂಭ- - - ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅಂದು ಬೆಳಗ್ಗೆ 10.30 ಗಂಟೆಗೆ ಬೆಕ್ಕಿನ ಕಲ್ಮಠದಿಂದ ಅಮ್ಮಿರ್ ಹಮ್ಮದ್ ವೃತ್ತ, ಗೋಪಿವೃತ್ತ, ಜೈಲ್ ಸರ್ಕಲ್, ಲಕ್ಷ್ಮೀ ಟಾಕೀಸ್ ವೃತ್ತ ಮಾರ್ಗವಾಗಿ ಪಿಇಎಸ್ ಕಾಲೇಜಿನ ಪ್ರೇರಣಾ ಸಭಾಂಗಣದವರೆಗೆ ಅದ್ಧೂರಿ ಮೆರವಣಿಗೆ ನಡೆಯಲಿದೆ. ಬಿ.ವೈ.ವಿಜಯೇಂದ್ರ ತೆರೆದ ವಾಹನದ ಜೊತೆಗೆ ಸುಮಾರು 2 ಸಾವಿರ ಬೈಕ್ಗಳ ರ್ಯಾಲಿ ಮೂಲಕ ಕಾರ್ಯಕರ್ತರೊಂದಿಗೆ ಮೆರವಣಿಗೆಯಲ್ಲಿ ಆಗಮಿಸಲಿದ್ದಾರೆ. ಬಳಿಕ ಬೃಹತ್ ಅಭಿನಂದನಾ ಸಮಾರಂಭ ನಡೆಯಲಿದೆ ಎಂದು ತಿಳಿಸಿದರು.
ಈ ಸಮಾರಂಭದಲ್ಲಿ 6 ರಿಂದ 7 ಸಾವಿರ ಜನರ ಸೇರುವ ನಿರೀಕ್ಷೆ ಇದೆ. ಕಾರ್ಯಕ್ರಮ ಬಳಿಕ ರಾಜ್ಯಾಧ್ಯಕ್ಷರು ಜಿಲ್ಲೆಯ ಹಿರಿಯರ ಮನೆಗೆ ಭೇಟಿ ನೀಡಿ, ಆಶೀರ್ವಾದ ಪಡೆಯಲಿದ್ದಾರೆ. ವಿಶೇಷವಾಗಿ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಲಿದ್ದಾರೆ. ಜೊತೆಗೆ ಬೂತ್ ಅಧ್ಯಕ್ಷರ ಮನೆಗೆ ಭೇಟಿ ನೀಡಲಿದ್ದಾರೆ. ಸಂಘಟನೆಯ ಕೆಳಸ್ತರದ ಪದಾಧಿಕಾರಿಗಳ ಜೊತೆಗೂ ಚರ್ಚಿಸಲಿದ್ದಾರೆ. ಇಡೀ ಜಿಲ್ಲೆಯಲ್ಲಿ ಸಂಭ್ರಮ ಸಡಗರದ ವಾತಾವರಣ ನಿರ್ಮಾಣವಾಗಿದೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಆಗಮಿಸುತ್ತಿರುವ ಹಿನ್ನೆಲೆ ನಗರವನ್ನು ನವವಧುವಿನಂತೆ ಸಿಂಗರಿಸಲಾಗಿದೆ. ಜಿಲ್ಲೆಗೆ ರಾಜ್ಯಾಧ್ಯಕ್ಷ ಸ್ಥಾನ ಸಿಕ್ಕಿದ್ದು ಈ ಸಂಭ್ರಮಕ್ಕೆ ಎಲ್ಲರಿಗೂ ಪ್ರೇರಣೆ ನೀಡಿದಂತಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ತು ಸದಸ್ಯರಾದ ಡಿ.ಎಸ್. ಅರುಣ್, ಎಸ್.ರುದ್ರೇಗೌಡ, ಮಾಜಿ ಶಾಸಕ ಕೆ.ಬಿ. ಅಶೋಕ್ ನಾಯಕ್, ಮುಖಂಡರಾದ ಎಸ್. ದತ್ತಾತ್ರಿ, ಶಿವರಾಜ್, ಶ್ರೀನಾಥ್, ರತ್ನಾಕರ್ ಶೆಣೈ, ಅಣ್ಣಪ್ಪ ಮತ್ತಿತರರು ಇದ್ದರು.