ಸಿಎಂ, ಡಿಸಿಎಂ, ಗೃಹ ಸಚಿವರ ರಾಜಿನಾಮೆಗೆ ಬಿಜೆಪಿ ಆಗ್ರಹ

KannadaprabhaNewsNetwork |  
Published : Jun 18, 2025, 12:21 AM IST
ಆರ್ ಸಿ ಬಿ ವಿಜಯೋತ್ಸವ ಸಂದರ್ಭ ಸಾವನ್ನಪ್ಪಿದ್ದ ಅಭಿಮಾನಿಗಳು: ಸಿಎಂ, ಡಿಸಿಎಂ, ಗೃಹ ಸಚಿವರ ರಾಜಿನಾಮೆಗೆ ಬಿಜೆಪಿ ಆಗ್ರಹ | Kannada Prabha

ಸಾರಾಂಶ

ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಆರ್‌ಸಿಬಿ ವಿಜಯೋತ್ಸವ ಸಂದರ್ಭ 11 ಮಂದಿ ಸಾವನ್ನಪ್ಪಿರುವ ಘಟನೆಯು ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯವಾಗಿದ್ದು, ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.

ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಈ ಸಂದರ್ಭ ಮಾತನಾಡಿದ ಮಾಜಿ ಸಚಿವ ಎಂ.ಪಿ. ಅಪ್ಪಚ್ಚುರಂಜನ್ ಅವರು, ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ವಿಜಯೋತ್ಸವ ಆಯೋಜಿಸಿತ್ತು. ಹಿರಿಯ ಪೊಲೀಸ್ ಅಧಿಕಾರಿಗಳು ಕಾನೂನು ಸುವ್ಯವಸ್ಥೆಯ ಬಗ್ಗೆ ಸರ್ಕಾರಕ್ಕೆ ಮೊದಲೇ ಮಾಹಿತಿ ನೀಡಿದ್ದರೂ ಸಹ, ಅವರ ಮಾತನ್ನು ಲೆಕ್ಕಿಸದೇ ವಿಜಯೋತ್ಸವ ಆಚರಿಸಿ 11 ಮಂದಿ ಅಮಾಯಕರ ಸಾವಿಗೆ ಸರ್ಕಾರ ಕಾರಣವಾಗಿದೆ ಎಂದು ಆರೋಪಿಸಿದರು.

ಸರ್ಕಾರವು ತನ್ನ ವೈಫಲ್ಯ ಮುಚ್ಚಿಕೊಳ್ಳಲು ನಿಷ್ಠಾವಂತ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ಅವರ ಮನೋ ಸ್ಥೈರ್ಯ ಕುಸಿಯಲು ಕಾರಣವಾಗಿದೆ. ಇದರೊಂದಿಗೆ ಇಡೀ ರಾಜ್ಯದಲ್ಲಿ ಪೊಲೀಸ್ ಇಲಾಖೆಯ ಆತ್ಮಬಲ ಕಸಿಯುವ ಯತ್ನಕ್ಕೆ ಕೈ ಹಾಕಿದೆ. ಇಂತಹ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಅಧಿಕಾರದಲ್ಲಿ ಮುಂದುವರೆಯಲು ಅರ್ಹರಲ್ಲ ಎಂದು ಅಸಮಾಧಾನ ಹೊರಹಾಕಿದರು.

ಪ್ರತಿಭಟನೆಯಲ್ಲಿ ಮಾಜಿ ಎಂ.ಎಲ್.ಸಿ. ಎಸ್.ಜಿ. ಮೇದಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಗೌತಮ್ ಗೌಡ, ಜಿಲ್ಲಾ ಕಾರ್ಯದರ್ಶಿ ಮಹೇಶ್ ಜೈನಿ, ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ್ಯ, ಪಕ್ಷದ ಮುಖಂಡರಾದ ಬಿ.ಎಸ್. ಅನಂತ್‌ಕುಮಾರ್, ಮನುಕುಮಾರ್ ರೈ, ಎನ್.ಆರ್. ಅಜೀಶ್‌ಕುಮಾರ್, ಎಸ್.ಆರ್. ಸೋಮೇಶ್, ಆರ್.ಕೆ. ಚಂದ್ರು, ಶರತ್‌ಚಂದ್ರ, ದರ್ಶನ್ ಜೋಯಪ್ಪ, ಮಚ್ಚಂಡ ಪ್ರಕಾಶ್, ನೇಗಳ್ಳೆ ಜೀವನ್, ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ವಿರೂಪಾಕ್ಷ, ಇಂದಿರಾ ಮೋಣಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ