ಹುಬ್ಬಳ್ಳಿ: ಪಶ್ಚಿಮ ಬಂಗಾಳ, ಆಸ್ಸಾಂ ಮತ್ತು ಪುದುಚೇರಿಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳೊಂದಿಗೆ ಗೆಲವು ಸಾಧಿಸಿದ ಹಿನ್ನೆಲೆ ಸೋಮವಾರ ನಗರದ ದುರ್ಗದಬೈಲ್ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿಹಂಚಿ ವಿಜಯೋತ್ಸವ ಆಚರಿಸಿದರು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಪಂಚರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಪುದುಚೆರಿ, ಅಸ್ಸಾಂ ಬಿಜೆಪಿ ವಿಜಯಶಾಲಿಯಾಗಿ ಇತಿಹಾಸ ಬರೆದಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯ ತೃಣಮೂಲ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು. ಅಲ್ಲಿ ಮಹಿಳೆಯರು ಸುರಕ್ಷಿತವಾಗಿ ಇರಲಿಲ್ಲ. ರಾಜ್ಯದಲ್ಲಿ ಭಯಭೀತ ವಾತಾವರಣದಿಂದಾಗಿ ಅಲ್ಲಿನ ಜನರು ಬೇಸತಿದ್ದರು. ಅಸ್ಸಾಂ ರಾಜ್ಯದಲ್ಲಿ ಹೇಮಂತ್ ಬಿಸ್ವ ಶರ್ಮಾ ಕಳೆದ 2 ಅವಧಿಯಲ್ಲಿ ಉತ್ತಮ ಆಡಳಿತವನ್ನು ನೀಡಿದ್ದಾರೆ. ಅವರ ಆಡಳಿತ ವೈಖರಿ ಮೆಚ್ಚಿ ಮತದಾರರು ಮತ್ತೆ ಬಿಜೆಪಿಗೆ ಹ್ಯಾಟ್ರಿಕ್ ಮಾಡಲು ಸಮ್ಮತಿಸಿದ್ದಾರೆ. ಇನ್ನು ಪುದುಚೇರಿಯಲ್ಲಿ ಎನ್ಡಿಎ ಅಧಿಕಾರಕ್ಕೆ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮಾಜಿ ಶಾಸಕ ಅಶೋಕ ಕಾಟವೆ, ಮೇಯರ್ ಜ್ಯೋತಿ ಪಾಟೀಲ, ಉಪ ಮೇಯರ್ ಸಂತೋಷ ಚವ್ಹಾಣ, ವೆಂಕಟೇಶ ಕಾಟವೆ, ಪ್ರವೀಣ್ ಪವಾರ್, ರಾಮನಗೌಡ ಶೆಟ್ಟಿನಗೌಡ್ರ, ಮಹಿಳಾಮೋರ್ಚಾ ಅಧ್ಯಕ್ಷೆ ಅಕ್ಕಮ್ಮ ಹೆಗಡೆ, ಪ್ರಧಾನ ಕಾರ್ಯದರ್ಶಿ ಅರ್ಚನಾ ಕೆ, ಪಾಲಿಕೆ ಸದಸ್ಯರಾದ ಉಮಾ ಮುಕುಂದ, ಶಿವು ಮೆಣಸಿನಕಾಯಿ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿದ್ದರು.ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ತಕ್ಕ ಉತ್ತರ: ಶೆಟ್ಟರಹುಬ್ಬಳ್ಳಿ:
ಈ ರಾಜ್ಯಗಳ ಚುನಾವಣಾ ಫಲಿತಾಂಶವು ಕರ್ನಾಟಕದ ಮೇಲೆಯೂ ಪ್ರಭಾವ ಬೀರಲಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನೆಲಕಚ್ಚುವುದು ನಿಶ್ಚಿತವಾಗಿದೆ. ಮುಂದೆ ಕರ್ನಾಟಕದಲ್ಲೂ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದರು.