ಧಾರವಾಡ ಪಾಲಿಕೆ ಬಗ್ಗೆ ಬಿಜೆಪಿ ದ್ವಿಮುಖ ನೀತಿ!

KannadaprabhaNewsNetwork |  
Published : Feb 25, 2025, 12:49 AM IST
ಫಅಶಣ | Kannada Prabha

ಸಾರಾಂಶ

ಹೊಸದಾಗಿ ಅಸ್ತಿತ್ವಕ್ಕೆ ಬರುತ್ತಿರುವ ಧಾರವಾಡ ಮಹಾನಗರ ಪಾಲಿಕೆ ಬಗ್ಗೆ ಬಿಜೆಪಿ ದ್ವೀಮುಖ ನೀತಿ ಅನುಸರಿಸುತ್ತಿದ್ದು, ಬಿಜೆಪಿಯ ಸ್ಥಳೀಯ ಮುಖಂಡರು ಧಾರವಾಡ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಅರವಿಂದ ಏಗನಗೌಡರ ಹೇಳಿದರು.

ಧಾರವಾಡ: ಹೊಸದಾಗಿ ಅಸ್ತಿತ್ವಕ್ಕೆ ಬರುತ್ತಿರುವ ಧಾರವಾಡ ಮಹಾನಗರ ಪಾಲಿಕೆ ಬಗ್ಗೆ ಬಿಜೆಪಿ ದ್ವೀಮುಖ ನೀತಿ ಅನುಸರಿಸುತ್ತಿದ್ದು, ಬಿಜೆಪಿಯ ಸ್ಥಳೀಯ ಮುಖಂಡರು ಧಾರವಾಡ ಜನರ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಅರವಿಂದ ಏಗನಗೌಡರ ಹೇಳಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಹು-ಧಾ ಮಹಾನಗರ ಪಾಲಿಕೆಯು ಸರ್ವಾನುಮತದಿಂದ ಠರಾವು ಮಾಡಿ, ಧಾರವಾಡ ಮಹಾನಗರ ಪಾಲಿಕೆ ಅಸ್ತಿತ್ವಕ್ಕಾಗಿ ಪ್ರಸ್ತಾವನೆ ಸಲ್ಲಿಸಿತ್ತು. ಈಗ ಬಿಜೆಪಿ ಮುಖಂಡರ ಹುನ್ನಾರದಿಂದ ಧಾರವಾಡ ಮಹಾನಗರ ಪಾಲಿಕೆ ಅಸ್ತಿತ್ವ ಬೇಡ ಎಂದು ಮೇಯರ್‌ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದು ಅವರ ವೈಯಕ್ತಿಕ ಅಭಿಪ್ರಾಯ ಇರಬಹುದು. ಆದರೆ, ಪಾಲಿಕೆ ಸದಸ್ಯರ ಅಭಿಪ್ರಾಯವಲ್ಲ. ಹೊಸದಾಗಿ ರಚನೆಯಾಗುತ್ತಿರುವ ಧಾರವಾಡ ಪಾಲಿಕೆಗೆ ಬಜೆಟ್‌ನಲ್ಲಿ ₹100 ಕೋಟಿ ತರಬೇಕೆಂಬ ಪ್ರಯತ್ನದಲ್ಲಿ ಶಾಸಕ ವಿನಯ ಕುಲಕರ್ಣಿ ಒಂದೆಡೆ ಪ್ರಯತ್ನಿಸುತ್ತಿದ್ದರೆ, ಇನ್ನೊಂದೆಡೆ ಸ್ಥಳೀಯ ಬಿಜೆಪಿ ಮುಖಂಡರು ಇಂತಹ ಪ್ರಯತ್ನಗಳ ಮೂಲಕ ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇದಕ್ಕಿಂತ ಬೇಸರ ಸಂಗತಿ ಏನೆಂದರೆ, ಮೌಜಿ ಮೇಯರ್‌ ಈರೇಶ ಅಂಚಟಗೇರಿ ಅವರ ಮೂಲಕ ಪೌರಾಡಳಿತ ನಿರ್ದೇಶನಾಲಯಕ್ಕೆ ಅಸಂಬದ್ಧ 19 ಆಕ್ಷೇಪಣೆ ಸಲ್ಲಿಸುವ ಮೂಲಕ ಬಿಜೆಪಿಯ ಹುಬ್ಬಳ್ಳಿಯ ಮುಖಂಡರು ಧಾರವಾಡ ಜನತೆಗೆ ಮೋಸ ಮಾಡುತಿದ್ದಾರೆ ಎಂದು ಆರೋಪಿಸಿದ ಏಗನಗೌಡರ, ಒಂದು ವೇಳೆ ಬಿಜೆಪಿಯ ಈ ನೀತಿಯಿಂದಾಗಿ ಧಾರವಾಡಕ್ಕೆ ಪಾಲಿಕೆ ಭಾಗ್ಯ ತಪ್ಪಿದರೆ ಅದಕ್ಕೆ ಬಿಜೆಪಿ ಮುಖಂಡರೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಷ ಬೀಜ ಬಿತ್ತಿದರು

ಪಾಲಿಕೆ ವಿರೋಧ ಪಕ್ಷದ ನಾಯಕ ರಾಜಶೇಖರ ಕಮತಿ, ಸದಸ್ಯರಾದ ಶಂಭುಗೌಡ ಸಾಲಿಮನಿ ಹಾಗೂ ಕವಿತಾ ಕಬ್ಬೇರ ಮಾತನಾಡಿ, ಧಾರವಾಡದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಧಾರವಾಡ ಪಾಲಿಕೆ ರಚಿಸಿದ್ದು, ಬಿಜೆಪಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಪ್ರತ್ಯೇಕ ಪಾಲಿಕೆಗೆ ಯಾವ ಪ್ರಯತ್ನ ಮಾಡದೇ, ನಾವೇ ಮಾಡಿರುವುದಾಗಿ ದೊಡ್ಡ ಬ್ಯಾನರ್‌ ಹಾಕಿದರು. ಈಗ ಪಾಲಿಕೆಯ ಪ್ರಕ್ರಿಯೆಗೆ ಹೆಜ್ಜೆ ಹೆಜ್ಜೆಗೂ ಅಡ್ಡಗಾಲು ಹಾಕುತ್ತಿದ್ದಾರೆ. ಸುತ್ತಲಿನ ಹಳ್ಳಿಗಳಲ್ಲಿ ವಿಷಬೀಜ ಬಿತ್ತಿ ಅವರಿಂದ ಪ್ರತಿಭಟನೆ ಮಾಡಿಸಿದರು. ಈಗ ಅನವಶ್ಯಕವಾದ ಆಕ್ಷೇಪಣೆಗಳನ್ನು ಒಂದೇ ಮಾದರಿಯಲ್ಲಿ ಸಲ್ಲಿಸಿದ್ದಾರೆ. ಈ ದ್ವಿಮುಖ ನೀತಿಯನ್ನು ಧಾರವಾಡ ಜನರು ಅರ್ಥೈಸಿಕೊಳ್ಳಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!