ಕಾಂಗ್ರೆಸ್ ಪಕ್ಷದ ಮತೀಯ ಶಕ್ತಿಗಳ ಓಲೈಕೆಗಾಗಿ ಕಾಂಗ್ರೆಸ್ ಮುಖಂಡರು ಹಿಂದೂ ಸಮಾಜದ ಸ್ವಾಮಿಗಳ ಬಗ್ಗೆ ತಮ್ಮ ಹೀನ ಮನಸ್ಥಿತಿಯನ್ನು ಬಿ.ಕೆ. ಹರಿಪ್ರಸಾದ್ ಹೇಳಿಕೆಯ ಮೂಲಕ ಬಯಲು ಮಾಡಿದ್ದಾರೆ ಎಂದು ಯಶ್ಪಾಲ್ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಪೇಜಾವರ ಮಠಾಧೀಶರಾದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರ ವಿರುದ್ಧ ತಮ್ಮ ರಾಜಕೀಯ ತೆವಲಿಗಾಗಿ ಕಾಂಗ್ರೆಸ್ ಮುಖಂಡ ಬಿ.ಕೆ .ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಮತೀಯ ಶಕ್ತಿಗಳ ಓಲೈಕೆಗಾಗಿ ಕಾಂಗ್ರೆಸ್ ಮುಖಂಡರು ಹಿಂದೂ ಸಮಾಜದ ಸ್ವಾಮಿಗಳ ಬಗ್ಗೆ ತಮ್ಮ ಹೀನ ಮನಸ್ಥಿತಿಯನ್ನು ಬಿ.ಕೆ. ಹರಿಪ್ರಸಾದ್ ಹೇಳಿಕೆಯ ಮೂಲಕ ಬಯಲು ಮಾಡಿದ್ದಾರೆ.ಹಿಂದುತ್ವ, ರಾಷ್ಟೀಯವಾದಿ ಚಿಂತನೆಯ ಮೂಲಕ ಸಮಾಜಕ್ಕೆ ಮಾರ್ಗದರ್ಶನ ನೀಡುತ್ತಿರುವ ಪರಮ ಪೂಜ್ಯ ಶ್ರೀಗಳು ತಮ್ಮ ಗುರುಗಳಾದ ಕೀರ್ತಿಶೇಷ ಶ್ರೀ ವಿಶ್ವೇಶ ತೀರ್ಥ ಶ್ರೀಗಳ ಹಾದಿಯಲ್ಲಿ ಸಾಗುತ್ತಾ ಉತ್ತಮ ಸಮಾಜ ನಿರ್ಮಾಣಕ್ಕೆ ಮುಂದಾಗಿರುವ ಶ್ರೀಗಳ ವಿರುದ್ಧ ಹರಿಪ್ರಸಾದ್ ಹೇಳಿಕೆ ಸಮಸ್ತ ಹಿಂದೂ ಸಮಾಜಕ್ಕೆ ಮಾಡಿದ ಅಪಮಾನವಾಗಿದೆ ಎಂದವರು ಹೇಳಿದ್ದಾರೆ.ಬೇಜವಾಬ್ದಾರಿ ಹೇಳಿಕೆ ನೀಡಿರುವ ಬಿ.ಕೆ. ಹರಿಪ್ರಸಾದ್ ತಕ್ಷಣ ಕ್ಷಮೆ ಯಾಚಿಸಬೇಕು. ಕಾಂಗ್ರೆಸ್ ಮುಖಂಡರು ಈ ಹೇಳಿಕೆಯ ಬಗ್ಗೆ ತಮ್ಮ ನಿಲುವನ್ನು ಕೂಡಲೇ ಸ್ಪಷ್ಟಪಡಿಸಬೇಕು, ತಪ್ಪಿದಲ್ಲಿ ಸಮಸ್ತ ಹಿಂದೂ ಸಮಾಜ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದವರು ತಮ್ಮ ಪತ್ರಿಕೆ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.