ಕನ್ನಡಪ್ರಭ ವಾರ್ತೆ ಬೆಂಗಳೂರು
ಚಿಕ್ಕಮಗಳೂರು ಜಿಲ್ಲೆಯ ಸ್ಫೂರ್ತಿ ಬಂಧಿತಳಾಗಿದ್ದು, ಈ ಕೃತ್ಯದಲ್ಲಿ ತಲೆಮರೆಸಿಕೊಂಡಿರುವ ಇನ್ನುಳಿದ ನಾಲ್ಕೈದು ಆರೋಪಿಗಳ ಪತ್ತೆಗೆ ಸಿಸಿಬಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಕೆಲ ದಿನಗಳ ಹಿಂದೆ ಕಷ್ಟದ ನೆರವು ಕೇಳುವ ನೆಪದಲ್ಲಿ ಸ್ವಾಮೀಜಿ ಅವರನ್ನು ಪರಿಚಯಿಸಿಕೊಂಡು ಆರೋಪಿಗಳು ಬ್ಲ್ಯಾಕ್ಮೇಲ್ ಮಾಡಿದ್ದರು ಎಂದು ದೂರಲಾಗಿದೆ.
ಕೆಲ ದಿನಗಳ ಹಿಂದೆ ತಿಪಟೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ ಎಂದು ಹೇಳಿ ನನಗೆ ಸ್ಫೂರ್ತಿ ಎಂಬಾಕೆ ಪರಿಚಯವಾದಳು. ಆಗ ನನಗೆ ಜೀವನ ನಡೆಸಲು ಆರ್ಥಿಕ ಕಷ್ಟವಿದೆ ಎಂದು ಅಲವತ್ತುಕೊಂಡು ನೆರವು ಕೋರಿದ್ದಳು. ಬಳಿಕ ಬೆಂಗಳೂರಿನಲ್ಲಿ ಮತ್ತೆ ಒಮ್ಮೆ ಭೇಟಿಯಾದಳು. ಆ ವೇಳೆ ನೀವು ಹಣ ಕೊಡದೆ ಹೋದರೆ ನಾನು ಮರ್ಯಾದೆ ಕಳೆಯುತ್ತೇನೆ ಎಂದು ಬೆದರಿಸಿ 4.5 ಲಕ್ಷ ರು.ಗೆ ಬೇಡಿಕೆ ಇಟ್ಟಳು. ಆಗ ಮರ್ಯಾದೆಗೆ ಅಂಜಿ ನಾನು ಅಷ್ಟು ಹಣ ನೀಡಿದೆ. ಆದರೆ ಮತ್ತೆ ಒಂದು ಕೋಟಿ ರು.ಗೆ ಒತ್ತಾಯಿಸಿದ್ದಳು. ಅಲ್ಲದೆ ಆಕೆಯ ಸಹಚರರು ಸಹ ಕರೆ ಮಾಡುತ್ತಿದ್ದರು ಎಂದು ಸ್ವಾಮೀಜಿ ದೂರಿನಲ್ಲಿ ವಿವರಿಸಿದ್ದಾರೆ.ಈ ಬ್ಲ್ಯಾಕ್ಮೇಲ್ ಸಹಿಸಲಾರದೆ ಜ.17 ರಂದು ಸಿಸಿಬಿ ಪೊಲೀಸ್ ಠಾಣೆಗೆ ಸ್ವಾಮೀಜಿ ದೂರು ನೀಡಿದ್ದರು. ಅದರನ್ವಯ ಆರೋಪಿಯನ್ನು ಬಂಧಿಸಲಾಗಿದ್ದು, ತಪ್ಪಿಸಿಕೊಂಡಿರುವ ಇನ್ನುಳಿದವರ ಪತ್ತೆಗೆ ಶೋಧ ಕಾರ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.