ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯ ಬೇವಿನಹಳ್ಳಿ, ಕಕ್ಕಬೇವಿನಹಳ್ಳಿ, ಅಮರಾಪುರ, ಟಿ.ಬೂದಿಹಾಳು, ಗೋಡೆಹಾಳು ಮತ್ತು ಅಸುಂಡಿ ಗ್ರಾಮಗಳಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಈ.ತುಕಾರಾಂ ಪರವಾಗಿ ಮತಯಾಚನೆ ನಡೆಸಿದರು.ಈ ವೇಳೆ ಸಚಿವ ನಾಗೇಂದ್ರ ಮಾತನಾಡಿ, ಕಾಂಗ್ರೆಸ್ ಸರ್ಕಾರ ಶೋಷಿತರ ಹಾಗೂ ಬಡವರ ಪರ ಇರುವ ಸರ್ಕಾರ. ಕಳೆದ ವಿಧಾನಸಭೆ ಚುನಾವಣೆ ವೇಳೆ ಹೇಳಿದಂತೆ ಭಾಗ್ಯಗಳನ್ನ ನಾಡಿನ ಜನತೆಗೆ ನೀಡುವ ಮೂಲಕ ನುಡಿದಂತೆ ನಡೆದುಕೊಂಡಿದ್ದೇವೆ. ನೀವು ತುಕಾರಾಂ ಅವರಿಗೆ ಮತ ನೀಡುವ ಮೂಲಕ ಗೆಲ್ಲಿಸಿ ಕಳಿಸಿದರೆ, ಈ ಭಾಗದ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಮೂಲಕ ಧ್ವನಿಯಾಗುತ್ತಾರೆ ಎಂದರು.
ಕಾಂಗ್ರೆಸ್ ಪಕ್ಷ ಕಡೆವರೆಗೂ ನಿಮ್ಮ ಜೊತೆ ನಿಮ್ಮ ಕಷ್ಟ, ಸುಖಗಳಲ್ಲಿ ಭಾಗಿಯಾಗಿ ನಿಮ್ಮೊಟ್ಟಿಗೆ ಇರುವುದಾಗಿ ಸಚಿವ ಬಿ.ನಾಗೇಂದ್ರ ತಿಳಿಸಿದರು.
ಪ್ರಚಾರ ಕಾರ್ಯಕ್ರಮದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ, ಪಕ್ಷದ ಮುಖಂಡರಾದ ಸಣ್ಣಬಸವರಾಜ್, ಮಹಾರುದ್ರಗೌಡ, ವೆಂಕಟೇಶ್ ಪ್ರಸಾದ್, ಎ.ಮಾನಯ್ಯ, ಎಚ್.ತಿಮ್ಮನಗೌಡ, ಅಸುಂಡಿ ಹೊನ್ನೂರಪ್ಪ, ಅಣ್ಣ ನಾಗರಾಜ್, ಪಿ.ಜಗನ್ನಾಥ್, ಮುದಿ ಮಲ್ಲಯ್ಯ, ಬೆಣಕಲ್ ಬಸವರಾಜ್, ನಾಗಭೂಷಣಗೌಡ ಸೇರಿದಂತೆ ಹಲವಾರು ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.