ಹಿರಿಯರ ಆಶೀರ್ವಾದವೇ ನಮಗೆ ಶ್ರೀರಕ್ಷೆ: ಬಾಳೆಯಡ ಸುಬ್ರಮಣಿ

KannadaprabhaNewsNetwork |  
Published : May 08, 2026, 02:45 AM IST
 ಒಲಂಪಿಯನ್ ಬಾಳೆಯಡ ಸುಬ್ರಮಣಿ  ಮಾತನಾಡುತ್ತಿರುವುದು. | Kannada Prabha

ಸಾರಾಂಶ

ಹಿರಿಯರು, ಪೋಷಕರನ್ನು ಕಡೆಗಣಿಸದೇ ಗೌರವದಿಂದ ಕಾಣಬೇಕು. ಹಿರಿಯರ ಆಶೀರ್ವಾದವೇ ನಮಗೆ ಶ್ರೀರಕ್ಷೆ ಎಂದು ಒಲಂಪಿಯನ್ ಬಾಳೆಯಡ ಸುಬ್ರಮಣಿ ಹೇಳಿದರು.

ಕನ್ನಡಪ್ರಭವಾರ್ತೆ ನಾಪೋಕ್ಲುಹಿರಿಯರು, ಪೋಷಕರನ್ನು ಕಡೆಗಣಿಸದೇ ಗೌರವದಿಂದ ಕಾಣಬೇಕು. ಹಿರಿಯರ ಆಶೀರ್ವಾದವೇ ನಮಗೆ ಶ್ರೀರಕ್ಷೆ ಎಂದು ಒಲಂಪಿಯನ್ ಬಾಳೆಯಡ ಸುಬ್ರಮಣಿ ಹೇಳಿದರು.ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮದ ನೇತಾಜಿ ವಿದ್ಯಾಸಂಸ್ಥೆಯ ಕ್ರೀಡಾಂಗಣದಲ್ಲಿ ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಹಾಕಿ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು .ವಿದ್ಯಾರ್ಥಿಗಳ ಜೀವನ ಅಮೂಲ್ಯವಾದದು. ಇಂತಹ ಸಮಯ ಮತ್ತೆ ಸಿಗದು. ಸಮಯದ ಸದ್ಬಳಕೆಯನ್ನು ವಿದ್ಯಾರ್ಥಿಗಳು ಮಾಡಿಕೊಳ್ಳಬೇಕಿದೆ. ಶಿಬಿರವಿದ್ದಾಗ ಮಾತ್ರ ತರಬೇತಿ ಪಡೆದುಕೊಂಡು ಮೈದಾನವನ್ನು ಬಳಕೆ ಮಾಡುವುದಲ್ಲ. ಸಮಯ ಸಿಕ್ಕಾಗಲೆಲ್ಲಾ ಆಟದ ಮೈದಾನಗಳ ಸದುಪಯೋಗ ಪಡೆದುಕೊಂಡು ಕ್ರೀಡೆಯಲ್ಲಿ ಮುಂದುವರಿಯಬೇಕು ಎಂದರು. ಶಿಕ್ಷಣ ಪೂರೈಸಿದ ನಂತರ ಉದ್ಯೋಗಕ್ಕೆ ಸೇರಿ ಹಣ ಬಂದಾಗ ಗುರು ಹಿರಿಯರನ್ನು, ಪೋಷಕರನ್ನು ಕಡೆಗಣಿಸಬಾರದು. ಹಿರಿಯರ ಆಶೀರ್ವಾದವೇ ನಮಗೆ ಶ್ರೀರಕ್ಷೆ ಎಂದರು.ಹಾಕಿ ವೀಕ್ಷಕ ವಿವರಣೆಗಾರ ಮಾಳೇಟಿರ ಶ್ರೀನಿವಾಸ್ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ನಿಂದ ದೂರವಿರಬೇಕು . ಹಿರಿಯರಿಗೆ ಗೌರವ ಕೊಡುವುದನ್ನು ಕಲಿಯಬೇಕು. ನಿತ್ಯವೂ ತರಬೇತಿ ಪಡೆದರೆ ಮಾನಸಿಕವಾಗಿ ದೈಹಿಕವಾಗಿ ಬೆಳೆಯಲು ಸಾಧ್ಯ ಎಂದರು.ನಾಲ್ನಾಡ್ ಹಾಕಿ ಕ್ಲಬ್ ವತಿಯಿಂದ ಒಂದುತಿಂಗಳ ಕಾಲ ಆಯೋಜಿಸಲಾಗಿದ್ದ ಹಾಕಿ ತರಬೇತಿ ಶಿಬಿರದಲ್ಲಿ 80ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ ಪಾಲ್ಗೊಂಡಿದ್ದ ಎಲ್ಲ ವಿದ್ಯಾರ್ಥಿಗಳಿಗೆ ಅತಿಥಿಗಳು ಪ್ರಮಾಣ ಪತ್ರ ವಿತರಿಸಿದರು. ಹಾಕಿ ಕ್ಲಬ್ ಅಧ್ಯಕ್ಷ ಕರವಂಡ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ತರಬೇತಿದಾರರಾದ ಅಂಜಪರವಂಡ ರೋಶನ್ ಮಾದಪ್ಪ, ಮುಕ್ಕಾಟಿರ ಮುತ್ತಪ್ಪ, ಅಪ್ಪಚೆಟ್ಟೋಳಂಡ ಅಯ್ಯಪ್ಪ, ಅಪ್ಪಚ್ಚಿರ ಪಳಂಗಪ್ಪ, ಕೇಟೋಳಿರ ಡಾಲಿ ಅಚ್ಚಪ್ಪ, ಹಿರಿಯರಾದ ಕೇಟೋಳಿರ ಡಾಲಿ, ಹಾಕಿಕ್ಲಬ್ ಸಂಚಾಲಕ ಮನು ಮುತ್ತಪ್ಪ ಉಪಾಧ್ಯಕ್ಷ ಕೈಬುಲಿರ ಉಮೇಶ್ , ಗೌರವ ಕಾರ್ಯದರ್ಶಿ ಚಂಗೆಟ್ಟರ ಕುಮಾರ ಸೋಮಣ್ಣ, ಕಜಾಂಚಿ ಮಚ್ಚುರ ಯದುಕುಮಾರ್, ನಿರ್ದೇಶಕರು, ಪ್ರಮುಖರು ಹಾಗೂ ಪೋಷಕರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುಳೇದಗುಡ್ಡ ಪುರಸಭೆ : ₹7.22 ಲಕ್ಷ ಉಳಿತಾಯ ಬಜೆಟ್ ಅಂಗೀಕಾರ
ನಾಗೂರು ಕೆರೆ ನಿರ್ಮಾಣವಾಗುತ್ತಾ? ಜವಳಿ ಪಾರ್ಕ್‌ ಬರುತ್ತಾ?