ಪ್ರಜ್ವಲ್ ರೇವಣ್ಣ ಬಂಧನಕ್ಕೆ ಅರಕಲಗೂಡಲ್ಲಿ ಬ್ಲಾಕ್ ಕಾಂಗ್ರೆಸ್ ಒತ್ತಾಯ

KannadaprabhaNewsNetwork |  
Published : May 06, 2024, 12:44 AM IST
ಸಂಸದ ಪ್ರಜ್ವಲ್ ರೇವಣ್ಣ  ರಾಜತಾಂತ್ರಿಕ ಪಾಸ್ಪೋರ್ಟ್ ವಜಗೊಳಿಸಿ ಅವರನ್ನು ಬಂಧಿಸಲು ಒತ್ತಾಯ | Kannada Prabha

ಸಾರಾಂಶ

ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ವಆಗೊಳಿಸಿ ಅವರನ್ನು ಬಂಧಿಸಲು ರಾಜ್ಯ ಸರ್ಕಾರಕ್ಕೆ ನೆರವಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಒತ್ತಾಯಿಸಿದರು. ಅರಕಲಗೂಡು ಪಟ್ಟಣದ ಅನಕೃ ವೃತ್ತದಲ್ಲಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ । ರಾಜತಾಂತ್ರಿಕ ಪಾಸ್‌ಪೋರ್ಟ್ ವಜಾಕ್ಕೆ ಕೇಂದ್ರಕ್ಕೆ ಆಗ್ರಹ

ಕನ್ನಡಪ್ರಭ ವಾರ್ತೆ ಅರಕಲಗೂಡು

ಕೇಂದ್ರ ಸರ್ಕಾರ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ವಆಗೊಳಿಸಿ ಅವರನ್ನು ಬಂಧಿಸಲು ರಾಜ್ಯ ಸರ್ಕಾರಕ್ಕೆ ನೆರವಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಒತ್ತಾಯಿಸಿದರು.

ಪಟ್ಟಣದ ಅನಕೃ ವೃತ್ತದಲ್ಲಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮಾತನಾಡಿ, ಸಂಸದ ಪ್ರಜ್ವಲ್ ರೇವಣ್ಣ ಅವರು ಹೆಣ್ಣುಮಕ್ಕಳ ಮೇಲೆ ನೀಚ ಕೃತ್ಯ ಎಸಗಿದ್ದು, ಅವರಿಗೆ ನ್ಯಾಯ ಕೊಡಿಸಬೇಕಿದೆ. ಹಾಗಾಗಿ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಕೇಂದ್ರ ಸರ್ಕಾರ ವಜಾಗೊಳಿಸಿದರೆ ರಾಜ್ಯಸರ್ಕಾರ ಪ್ರಜ್ವಲ್ ರೇವಣ್ಣ ಇರುವಲ್ಲಿಗೆ ಹೋಗಿ ಬಂಧಿಸಲು ಸಹಾಯವಾಗುತ್ತದೆ. ಹಾಗಾಗಿ ಕೇಂದ್ರ ಕೂಡಲೇ ನೇರವಾಗಬೇಕು ಎಂದು ಒತ್ತಾಯಿಸಿದರು.

‘ಪ್ರಜ್ವಲ್ ರೇವಣ್ಣ ಅವರೇ ಜಿಲ್ಲೆಯ ಮತದಾರರು ನಿಮಗೆ ಮತ ನೀಡಿ ಸಂಸದ ಮಾಡಿದ್ದು ಈ ನೀಚ ಕೆಲಸ ಮಾಡುವುದಕ್ಕಾ? ನೀವೇ ಬಂದು ಎಸ್ಐಟಿ ಮುಂದೆ ಶರಣಾದರೆ ಗೌರವವಾದರೂ ಉಳಿಯುತ್ತದೆ. ಇಲ್ಲವಾದರೆ ಜನರು ನಿಮ್ಮನ್ನು ತಿರಸ್ಕಾರ ಮಾಡುತ್ತಾರೆ. ಒಂದು ವೇಳೆ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ವಜಾ ಮಾಡದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ಮುಖಂಡ ದಿವಾಕರ್ ಗೌಡ, ಮತ್ತಿತರೆ ಮುಖಂಡರು, ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರೇಜ್‌ ಮೆಕಾನಿಕ್‌ ಕೊಲೆ ಕೇಸ್‌: 7 ಆರೋಪಿಗಳ ಸೆರೆ
ಪೋಟೋ ಫ್ರೇಮ್‌ನಲ್ಲಿ ಅಡಗಿಸಿಟ್ಟುಸಾಗಿಸುತ್ತಿದ್ದ 37 ಲಕ್ಷದ ಗಾಂಜಾ ಜಪ್ತಿ