- ವಿನೋಬ ನಗರ 4ನೇ ಮುಖ್ಯ ರಸ್ತೆಯಲ್ಲಿ ತಪ್ಪದ ಕುಡುಕರ ಕಾಟ: ಅನುಪಮ
ಬಾರ್ ಸ್ಥಳಾಂತರಿಸುವಂತೆ ಅಬಕಾರಿ ಇಲಾಖೆಗೆ ನಿರಂತರ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ವಿಶೇಷವಾಗಿ ಮಕ್ಕಳು, ಹೆಣ್ಣು ಮಕ್ಕಳಿಗೆ, ಸ್ಥಳೀಯ ನಿವಾಸಿಗಳಿಗೆ ಸಮಸ್ಯೆ ಆಗಿರುವ ಬಾರ್ ಸ್ಥಳಾಂತರಿಸುವಂತೆ ಒತ್ತಾಯಿಸಿ ಜುಲೈ 19ರಂದು ನಗರದ ವಿನೋಬ ನಗರದ 3ನೇ ಮುಖ್ಯರಸ್ತೆಯ ಕೆಎಸ್ ವೈನ್ ಲ್ಯಾಂಡ್ ಎದುರು ಸ್ಥಳೀಯ ನಿವಾಸಿಗಳು ಪ್ರತಿಭಟಿಸಲಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನೋಬ ನಗರ ನಿವಾಸಿ ಅನುಮಪ ರವಿಕುಮಾರ ಅವರು, ಮದ್ಯಪಾನ ಮಾಡಿದ ವ್ಯಕ್ತಿಗಳು ರಸ್ತೆಯಲ್ಲೇ ಎಚ್ಚರವಿಲ್ಲದೇ ಬಿದ್ದಿರುತ್ತಾರೆ. ರಸ್ತೆಯ ಎರಡೂ ಕಡೆ ತೂರಾಡಿಕೊಂಡು ನಡೆಯುವುದು, ವಾಹನ ಚಾಲನೆ ಮಾಡುವುದು, ಕುಡಿದ ನಶೆಯಲ್ಲಿ ಅಕ್ಕಪಕ್ಕದಲ್ಲಿ ವಾಸದ ಮನೆಗಳ ಮುಂದೆ ಮೂತ್ರ ವಿಸರ್ಜನೆ, ವಾಂತಿ ಮುಂತಾದ ಅಸಭ್ಯತೆ ತೋರುತ್ತಿದ್ದಾರೆ ಎಂದು ದೂರಿದರು.ಈ ಎಲ್ಲದರ ಬಗ್ಗೆ ಅಬಕಾರಿ ಇಲಾಖೆ ಗಮನಕ್ಕೆ ತಂದರೂ ಬಾರ್ ಸ್ಥಳಾಂತರಕ್ಕೆ ಏಕೆ ಮುಂದಾಗಿಲ್ಲ? ಬಡಾವಣೆ ಪೊಲೀಸ್ ಠಾಣೆಯಲ್ಲಿ ಸ್ವತಃ ಮದ್ಯದಂಗಡಿ ಮಾಲೀಕರೇ ಮದ್ಯದಂಗಡಿ ಸ್ಥಳಾಂತರಿಸುವುದಾಗಿ ಲಿಖಿತ ರೂಪದಲ್ಲಿ ಪತ್ರ ನೀಡಿದ್ದರು. ಆದರೂ, ಸಹ ಅಬಕಾರಿ ಇಲಾಖೆ ಮದ್ಯದಂಗಡಿ ಸ್ಥಳಾಂತರಿಸದೇ ಪರವಾನಿಗೆ ನವೀಕರಿಸುತ್ತಿದ್ದಾರೆ. ಈ ಕಾರಣಕ್ಕೆ ವಿನೋಬ ನಗರ ಮುಖ್ಯ ರಸ್ತೆಯ ಕೆಎಸ್ ವೈನ್ ಲ್ಯಾಂಡ್ ಸ್ಥಳಾಂತರಿಸಬೇಕು. ಬೆಳಗ್ಗೆ 10.30ಕ್ಕೆ ಬಾರ್ ಮುಂಭಾಗದಲ್ಲಿ ರಸ್ತೆ ನಡೆದು, ಪ್ರತಿಭಟನೆ ನಡೆಲಾಗುವುದು ಎಂದು ತಿಳಿಸಿದರು.
- - -
- - - -17ಕೆಡಿವಿಜಿ3: