ರಕ್ತದಾನದಿಂದ ಖ್ಯಾತಿ ಪಡೆದಿರುವ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ವತಿಯಿಂದ 250ನೇ ರಕ್ತದಾನ ಶಿಬಿರ ‘ಹೆಗ್ಗುರುತು- 250’ ಏ.6ರಂದು ಬೆಂಗಳೂರಿನ ಡಾ.ರಾಜ್ಕುಮಾರ್ ರಸ್ತೆಯ ಶ್ರೀ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಉಡುಪಿ
ರಕ್ತದಾನದಿಂದ ಖ್ಯಾತಿ ಪಡೆದಿರುವ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ವತಿಯಿಂದ 250ನೇ ರಕ್ತದಾನ ಶಿಬಿರ ‘ಹೆಗ್ಗುರುತು- 250’ ಏ.6ರಂದು ಬೆಂಗಳೂರಿನ ಡಾ.ರಾಜ್ಕುಮಾರ್ ರಸ್ತೆಯ ಶ್ರೀ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಸತೀಶ್ ಸಾಲಿಯಾನ್ ಮಣಿಪಾಲ ತಿಳಿಸಿದ್ದಾರೆ.ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಶಿಬಿರವನ್ನು ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಅಭಯಹಸ್ತ ಬೆಂಗಳೂರು ವಲಯದ ಸಂಚಾಲಕ ರಾಘವೇಂದ್ರ ಕಾಂಚನ್ ಮರವಂತೆ ವಹಿಸುವರು. ಅಧ್ಯಕ್ಷ ಸತೀಶ್ ಸಾಲಿಯಾನ್ ಮಣಿಪಾಲ ಪ್ರಸ್ತಾವಿಕವಾಗಿ ಮಾತನಾಡಲಿದ್ದಾರೆ.ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಈವರೆಗೆ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಕಳೆದ 5 ವರ್ಷಗಳ ಅವಧಿಯಲ್ಲಿ 32 ಸಾವಿರಕ್ಕೂ ಅಧಿಕ ಯುನಿಟ್ ರಕ್ತವನ್ನು ಸಂಗ್ರಹಿಸಿ, ಸಾವಿರಾರು ಜೀವಗಳಿಗೆ ಪುನರ್ಜನ್ಮ ನೀಡಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಟ್ರಸ್ಟಿಗಳಾದ ಬಾಲಕೃಷ್ಣ ಮದ್ದೋಡಿ, ಶರತ್ ಕಾಂಚನ್, ರತ್ನಾಕರ್ ಸಾಮಂತ್, ಯತೀಶ್ ಸಾಲಿಯಾನ್ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.