ರಕ್ತದಾನದಿಂದ ಒಂದು ಕುಟುಂಬ ಉಳಿಸಿದ ಪುಣ್ಯ ಲಭ್ಯ: ಹಳೆಕೋಟೆ ರಮೇಶ್ ( ಫೋಟೊ ಪ್ಯಾನಲ್‌ ಗೆ ಬಳಸಿ)

KannadaprabhaNewsNetwork |  
Published : Mar 21, 2024, 01:04 AM IST
 ಮೂಡಿಗೆರೆ ಪಟ್ಣಣದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು  ಎಂಜಿಎಂ ಆಸ್ಪತ್ರೆ  ಆಡಳಿತ ವೈದ್ಯಾಧಿಕಾರಿ ಡಾ.ಪ್ರಿಯಾಂಕ ಉದ್ಘಾಟಿಸಿದರು. | Kannada Prabha

ಸಾರಾಂಶ

ರಕ್ತದಾನ ಮಾಡುವುದರಿಂದ ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳ ಜೀವ ಉಳಿಸಿದಂತಹ ಪುಣ್ಯ ಲಭಿಸುತ್ತದೆ ಎಂದು ಸಾಹಿತಿ ಹಳೆಕೋಟೆ ರಮೇಶ್ ಹೇಳಿದರು.

ಕನ್ನಡಪ್ರಭ ವಾರ್ತೆ, ಮೂಡಿಗೆರೆ

ರಕ್ತದಾನ ಮಾಡುವುದರಿಂದ ತುರ್ತು ಪರಿಸ್ಥಿತಿಯಲ್ಲಿರುವ ರೋಗಿಗಳ ಜೀವ ಉಳಿಸಿದಂತಹ ಪುಣ್ಯ ಲಭಿಸುತ್ತದೆ ಎಂದು ಸಾಹಿತಿ ಹಳೆಕೋಟೆ ರಮೇಶ್ ಹೇಳಿದರು.

ಬುಧವಾರ ಪಟ್ಟಣದ ಜೇಸಿ ಭವನದಲ್ಲಿ ಜೇಸಿ ಸಂಸ್ಥೆ, ಪತ್ರಕರ್ತರ ಸಂಘ ಹಾಗೂ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣ ತಂಡದಿಂದ ಏರ್ಪಡಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ರಕ್ತದಾನ ಶ್ರೇಷ್ಠವಾದದ್ದು. ಇದರಿಂದ ಕೇವಲ ಓರ್ವ ವ್ಯಕ್ತಿ ಜೀವ ಉಳಿಸುವುದು ಮಾತ್ರವಲ್ಲ. ಆ ವ್ಯಕ್ತಿಯ ಕುಟುಂಬವನ್ನೇ ಕಾಪಾಡಿದಂತಾಗುತ್ತದೆ. ರಕ್ತದಾನ ಶಿಬಿರಗಳು ಹೆಚ್ಚಾಗಿ ನಡೆಯಬೇಕು. ಇದರಿಂದ ರೋಗಿಗಳಿಗೆ ತುರ್ತು ಪರಿಸ್ಥಿತಿಯಲ್ಲಿ ರಕ್ತ ಹುಡುಕಾಡುವ ಪ್ರಸಂಗ ಬರುವುದಿಲ್ಲ. ಹಾಗಾಗಿ ಪ್ರತಿಯೊಬ್ಬರೂ ರಕ್ತದಾನ ಮಾಡಲು ಮುಂದಾಗಬೇಕೆಂದು ಕರೆ ನೀಡಿದರು.

ಜಿಲ್ಲಾ ರಕ್ತ ನಿಧಿ ವಿಭಾಗದ ಡಾ.ಮುರುಳಿಧರ್ ಮಾತನಾಡಿ, 18 ವರ್ಷ ಮೇಲ್ಪಟ್ಟ ಹಾಗೂ 45 ಕೆಜಿಗಿಂತ ಅಧಿಕ ತೂಕ ವಿರುವ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು. ಇದರಿಂದ ಯಾವುದೇ ಅಡ್ಡ ಪರಿಣಾಮ ಹಾಗೂ ತೊಂದರೆ ಉಂಟಾಗಲ್ಲ. ಬದಲಾಗಿ ದೇಹದ ಆರೋಗ್ಯ ಸ್ಥಿತಿ ಉತ್ತಮವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೇಸಿ ಅಧ್ಯಕ್ಷ ಸುಪ್ರಿತ್ ಕಾರ್ಬೈಲ್ ವಹಿಸಿದ್ದರು. ಎಂಜಿಎಂ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪ್ರಿಯಾಂಕ, ಎಎಸ್‌ಐ ವೆಂಕಟೇಶ್, ಪತ್ರಕರ್ತ ಅಮರ್‌ನಾಥ್, ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣ ತಂಡದ ಪ್ರವೀಣ್ ಪೂಜಾರಿ, ಸಮಾಜ ಸೇವಕ ಫಿಶ್‌ಮೋಣು, ಜೇಸಿ ಕಾರ್ಯದರ್ಶಿ ದೀಕ್ಷಿತ್, ಲೇಡಿ ಜೇಸಿ ಕಾರ್ಯದರ್ಶಿ ಶೃತಿ ದೀಕ್ಷಿತ್ ಉಪಸ್ಥಿತರಿದ್ದರು.

2ಎಂಡಿಜಿ1ಎ :

ಮೂಡಿಗೆರೆ ಪಟ್ಣಣದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಎಂಜಿಎಂ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಪ್ರಿಯಾಂಕ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕ್ಷೇತ್ರ ಘೋಷಿಸಿದ ನಿಖಿಲ್
ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಚುರುಕು