ರಕ್ತ ಚಂದನ ಕಳ್ಳ ಸಾಗಣೆ: ಇಬ್ಬರ ಬಂಧನ

KannadaprabhaNewsNetwork |  
Published : Nov 20, 2023, 12:45 AM IST
ಫೋಟೋ: 19 ಹೆಚ್‌ಎಸ್‌ಕೆ 1ಹೊಸಕೋಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಪುಷ್ಪ ಸಿನಿಮಾ ಸ್ಟೆöÊಲ್‌ನಲ್ಲಿ ರಕ್ತಚಂದ್ರ ತುಂಡುಗಳನ್ನು ಕಳವು ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಅಪಾರ ಪ್ರಮಾಣದ ರಕ್ತಚಂದನ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ. | Kannada Prabha

ಸಾರಾಂಶ

ಹೊಸಕೋಟೆ: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ರಕ್ತ ಚಂದನದ ತುಂಡುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ.

ಹೊಸಕೋಟೆ: ಪುಷ್ಪಾ ಸಿನಿಮಾ ಸ್ಟೈಲ್ ನಲ್ಲಿ ರಕ್ತ ಚಂದನದ ತುಂಡುಗಳನ್ನು ಕಳ್ಳ ಸಾಗಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಕಟ್ಟಿಗೆನಹಳ್ಳಿಯ ಸೈಯದ್ ಅಮೀರ್, ಮುನ್ನಾ ಬಂಧಿತರು. ಆರೋಪಿಗಳಿಂದ 50 ಲಕ್ಷ ಮೌಲ್ಯದ 800 ಕೆಜಿ ರಕ್ತ ಚಂದನ ಮತ್ತು ಶ್ರೀಗಂಧದ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರು ಹೊರವಲಯದ ಮೀಸಲು ಅರಣ್ಯ ಪ್ರದೇಶ ಹಾಗೂ ಆಂಧ್ರಪ್ರದೇಶದ ಗಡಿ ಪ್ರದೇಶಗಳಲ್ಲಿ ಪುಷ್ಪ ಸಿನಿಮಾ ರೀತಿ ರಕ್ತ ಚಂದನ ಕದಿಯಲು ಪ್ರಯತ್ನಿಸಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ವಾಹನಗಳಲ್ಲಿ ಮಧ್ಯರಾತ್ರಿ ತಮ್ಮ ತಂಡದೊಂದಿಗೆ ತೆರಳಿ ರಕ್ತ ಚಂದನ ಕದ್ದಿದ್ದಾರೆ. ಅರಣ್ಯ ಅಧಿಕಾರಿಗಳು ಹಾಗೂ ಚೆಕ್ ಪೋಸ್ಟ್ ಗಳಲ್ಲಿರುವ ಅಧಿಕಾರಿಗಳ ಕಣ್ತಪ್ಪಿಸಿ ಶ್ರೀಗಂಧ ಹಾಗೂ ರಕ್ತ ಚಂದನದ ವಾಸನೆ ಬರದಂತೆ ವಾಹನಗಳಲ್ಲಿ ಕೋಳಿ, ಕುರಿಗಳನ್ನು ತುಂಬಿಕೊಂಡು ಮರದ ದಿಮ್ಮಿಗಳ ಮಧ್ಯದಲ್ಲಿ ರಕ್ತ ಚಂದನ ಮತ್ತು ಶ್ರೀಗಂಧದ ತುಂಡುಗಳನ್ನು ಸಾಗಿಸುತ್ತಿದ್ದರು. ಬೆಂಗಳೂರು ಹಾಗೂ ಆಂಧ್ರಪ್ರದೇಶದ ವಿಶಾಖಪಟ್ಟಣದ ಮೂಲದ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದರು.

ಕಾರ್ಯಾಚರಣೆಯಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪುರುಷೋತ್ತಮ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್, ಇನ್ಸ್‌ ಪೆಕ್ಟರ್ ಅಶೋಕ್ ಸೇರಿದಂತೆ ಅಪರಾಧ ವಿಭಾಗದ ಎಲ್ಲಾ ಸಿಬ್ಬಂದಿಗಳನ್ನು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಅಭಿನಂದಿಸಿದ್ದಾರೆ.ಫೋಟೋ: 19 ಹೆಚ್‌ಎಸ್‌ಕೆ 1

ಹೊಸಕೋಟೆ ಪೊಲೀಸರು ರಕ್ತಚಂದನ ತುಂಡುಗಳ್ಳರನ್ನು ಬಂಧಿಸಿ ಮಾಲು ವಶಪಡಿಸಿಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ