ಸುಪ್ರೀಂ ಕೋರ್ಟ್ ಆದೇಶದನ್ವಯ ರಾಜ್ಯ ಸರ್ಕಾರ ಶೀಘ್ರದಲ್ಲೇ ಗೃಹ ಕಾರ್ಮಿಕರಿಗಾಗಿ ರಾಷ್ಟ್ರೀಯ ಕಾನೂನು ಜಾರಿಗೆ ತರಲು ಮುಂದಾಗಬೇಕು ಎಂದು ರಾಷ್ಟ್ರೀಯ ಗೃಹ ಕಾರ್ಮಿಕ ಮಂಡಳಿ ರಾಜ್ಯ ಘಟಕ ಒತ್ತಾಯಿಸಿದೆ.
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದನ್ವಯ ರಾಜ್ಯ ಸರ್ಕಾರ ಶೀಘ್ರದಲ್ಲೇ ಗೃಹ ಕಾರ್ಮಿಕರಿಗಾಗಿ ರಾಷ್ಟ್ರೀಯ ಕಾನೂನು ಜಾರಿಗೆ ತರಲು ಮುಂದಾಗಬೇಕು ಎಂದು ರಾಷ್ಟ್ರೀಯ ಗೃಹ ಕಾರ್ಮಿಕ ಮಂಡಳಿ ರಾಜ್ಯ ಘಟಕ ಒತ್ತಾಯಿಸಿದೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಂಡಳಿ ರಾಜ್ಯ ಘಟಕದ ಕರಿಬಸಪ್ಪ ಮಾತನಾಡಿ, ಅನಕ್ಷರಸ್ಥ ಮಹಿಳೆಯರು, ಕೊಳಚೆ ಪ್ರದೇಶದಲ್ಲಿ ವಾಸಿಸುವ ಮಹಿಳೆಯರು ಹೆಚ್ಚಾಗಿ ಗೃಹ ಕಾರ್ಮಿಕರಾಗಿದ್ದಾರೆ. ಅತ್ಯಂತ ಬಡ ಕುಟುಂಬದ ಈ ಮಹಿಳೆಯರು ತಮ್ಮ ಕುಟುಂಬದ ಬೆಳವಣಿಗೆಗಾಗಿ ಮತ್ತು ಜೀವನ ನಿರ್ವಹಣೆಗಾಗಿ ಬೇರೊಬ್ಬರ ಮನೆಗಳಲ್ಲಿ ಅಡುಗೆ ಮಾಡಿ, ಕಸಗುಡಿಸಿ, ಮುಸುರೆ ತಿಕ್ಕುವುದು ಸೇರಿ ಇನ್ನಿತರ ಕೆಲಸಗಳನ್ನು ಮಾಡುತ್ತಿದ್ದಾರೆ. ಅಂಥ ಮಹಿಳೆಯರ ರಕ್ಷಣೆಗಾಗಿ ಪ್ರತ್ಯೇಕ ಕಾನೂನು ಜಾರಿಗೆ ತರುವ ಅವಶ್ಯಕತೆ ಇದ್ದು, ಈ ಸಂಬಂಧ ರಾಷ್ಟ್ರೀಯಮಟ್ಟದ ಕಾನೂನು ತರಲು ಶಿಫಾರಸು ಮಾಡಬೇಕೆಂದು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರೀಯ ಗೃಹ ಕಾರ್ಮಿಕ ಮಂಡಳಿ ರಾಜ್ಯ ಘಟಕದ ಪದಾಧಿಕಾರಿಗಳಾದ ಸಹಾಯ್, ಶಶಿಕಲಾ, ಬಿಪಿನ್, ಜಬೀನಾ ಸೇರಿ ಇತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.