ಪೊದೆಯಲ್ಲಿ ಹೊಳೆನರಸೀಪುರದ ಯುವಕನ ದೇಹ ಪತ್ತೆ

KannadaprabhaNewsNetwork |  
Published : Oct 13, 2025, 02:00 AM IST
12ಎಚ್ಎಸ್ಎನ್7 : ಹೊಳೆನರಸೀಪುರ ತಾ. ಹಳ್ಳಿಮೈಸೂರು ಹೋಬಳಿಯ ಎಸ್.ಅಂಕನಹಳ್ಳಿ ಸಮೀಪದ ರಕ್ಷಿತ ಅರಣ್ಯ ಪ್ರದೇಶ ಸಮೀಪದ ಹೆದ್ದಾರಿ ಪಕ್ಕದಲ್ಲಿ ಮೃತದೇಹ ದೊರೆತ ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಒಳಚಿತ್ರದಲ್ಲಿ ಮೃತ ಸುದೀಪ್ ಭಾವಚಿತ್ರ. | Kannada Prabha

ಸಾರಾಂಶ

ಹೊಳೆನರಸೀಪುರ ತಾಲೂಕಿನ ಎಸ್.ಅಂಕನಹಳ್ಳಿ ಸಮೀಪದ ಹೆದ್ದಾರಿ ಪಕ್ಕದಲ್ಲಿ ದ್ವಿಚಕ್ರ ವಾಹನ ಹಾಗೂ ಯುವಕನೊಬ್ಬನ ಮೃತದೇಹವನ್ನು ಗಿಡಗಂಟಿಗಳಿಂದ ಮುಚ್ಚಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಅಪಘಾತವೋ ಎಂದು ಪೊಲೀಸರ ತನಿಖೆಯಿಂದ ಪತ್ತೆಯಾಗಬೇಕಿದೆ. ಆದರೆ ಮೃತದೇಹ ಮೇಲಿನ ಗಾಯದ ಗುರುತು ಕಂಡ ಪ್ರತ್ಯಕ್ಷದರ್ಶಿಗಳು ಇದು ಭೀಕರ ಕೊಲೆ ಎಂದು ತಿಳಿಸಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಡಿವೈಎಸ್ಪಿ ಶಾಲು, ವೃತ್ತ ನಿರೀಕ್ಷಕ ಪ್ರದೀಪ್ ಹಾಗೂ ಪಿಎಸ್ಸೈಗಳಾದ ರಮೇಶ್ ಹಾಗೂ ನವ್ಯ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಮತ್ತು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನಕ್ಕೆ ಕಳುಹಿಸಲಾಯಿತು. ಸುದೀಪ್‌ಗೆ ತಂದೆ, ತಾಯಿ, ಹಿರಿಯ ಸಹೋದರ, ಸಹೋದರಿ ಇದ್ದಾರೆ.

ಹೊಳೆನರಸೀಪುರ: ತಾಲೂಕಿನ ಎಸ್.ಅಂಕನಹಳ್ಳಿ ಸಮೀಪದ ಹೆದ್ದಾರಿ ಪಕ್ಕದಲ್ಲಿ ದ್ವಿಚಕ್ರ ವಾಹನ ಹಾಗೂ ಯುವಕನೊಬ್ಬನ ಮೃತದೇಹವನ್ನು ಗಿಡಗಂಟಿಗಳಿಂದ ಮುಚ್ಚಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆಯೋ ಅಥವಾ ಅಪಘಾತವೋ ಎಂದು ಪೊಲೀಸರ ತನಿಖೆಯಿಂದ ಪತ್ತೆಯಾಗಬೇಕಿದೆ. ಆದರೆ ಮೃತದೇಹ ಮೇಲಿನ ಗಾಯದ ಗುರುತು ಕಂಡ ಪ್ರತ್ಯಕ್ಷದರ್ಶಿಗಳು ಇದು ಭೀಕರ ಕೊಲೆ ಎಂದು ತಿಳಿಸಿದ್ದಾರೆ.

ಪಟ್ಟಣದ ಚಿಕ್ಕಅಂಬೇಡ್ಕರ್‌ನಗರದ ನಿವಾಸಿ ದಾಸಪ್ರಕಾಶ್ ಗೀತಾ ದಂಪತಿ ಪುತ್ರ ಸುದೀಪ್(೨೪) ಮೃತಪಟ್ಟಯುವಕ. ಹಳ್ಳಿಮೈಸೂರು ಹೋಬಳಿಯ ಎಸ್.ಅಂಕನಹಳ್ಳಿ ಸಮೀಪದ ರಕ್ಷಿತ ಅರಣ್ಯ ಪ್ರದೇಶ ಸಮೀಪದ ಹೆದ್ದಾರಿ ಪಕ್ಕದಲ್ಲಿ ದ್ವಿಚಕ್ರ ವಾಹನವನ್ನು ಗಿಡಗಂಟೆಗಳಿಂದ ಮುಚ್ಚಿರುವ ಸ್ಥಿತಿಯಲ್ಲಿ ಕಂಡ ಪ್ರತ್ಯಕ್ಷದರ್ಶಿಗಳು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಗಿಡಗಳನ್ನು ತೆಗೆದು ನೋಡಿದಾಗ ಯುವಕನ ಮೃತದೇಹ ಕಂಡು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ, ಡಿವೈಎಸ್ಪಿ ಶಾಲು, ವೃತ್ತ ನಿರೀಕ್ಷಕ ಪ್ರದೀಪ್ ಹಾಗೂ ಪಿಎಸ್ಸೈಗಳಾದ ರಮೇಶ್ ಹಾಗೂ ನವ್ಯ ಅವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ಮತ್ತು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಹಾಸನಕ್ಕೆ ಕಳುಹಿಸಲಾಯಿತು. ಸುದೀಪ್‌ಗೆ ತಂದೆ, ತಾಯಿ, ಹಿರಿಯ ಸಹೋದರ, ಸಹೋದರಿ ಇದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕುಸಿದ ಕರ್ನಾಟಕ ಕ್ರಿಕೆಟ್‌ ಗುಣಮಟ್ಟ - ಈ ಸಲ 7 ಟಿ20ಯಲ್ಲಿ ಗೆದ್ದಿದ್ದು ಕೇವಲ 2
ಬುರುಡೆ ಕೇಸ್‌ ಹಿಂದೆ ಅರ್ಬನ್‌ ನಕ್ಸಲ್‌ : ಬಿಜೆಪಿ