ಅನಾರೋಗ್ಯದಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವ ಪತ್ತೆ

KannadaprabhaNewsNetwork |  
Published : May 29, 2025, 01:04 AM IST
28ಎಚ್ಎಸ್ಎನ್14 : ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆಯಾದ ಸ್ಥಳ ಮಹಜರು ನಡೆಸಿದ ಪೊಲೀಸರು. | Kannada Prabha

ಸಾರಾಂಶ

ಜೋಡಿಗುಬ್ಬಿ ಮೀಸಲು ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜೋಡಿಗುಬ್ಬಿ ಗ್ರಾಮದ ನಿವಾಸಿ ರಾಜೇಗೌಡ ಬಿನ್ ಸುಬ್ಬೇಗೌಡ(64) ಸಾವನ್ನಪ್ಪಿದ ವ್ಯಕ್ತಿ. ಇವರು ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, 2 ತಿಂಗಳಿಂದ ಕಾಣೆಯಾಗಿದ್ದರು. ಕುಟುಂಬದವರು ಸಂಬಂಧಿಕರ ಮನೆ ಎಲ್ಲೆಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಈ ಕುರಿತು ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯವನ್ನು ಸುತ್ತುತ್ತಿದ್ದ ವೇಳೆ ಮರದ ಬಳಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ.

ಕನ್ನಡಪ್ರಭ ವಾರ್ತೆ ಅರಕಲಗೂಡು

ಜೋಡಿಗುಬ್ಬಿ ಮೀಸಲು ಅರಣ್ಯ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಜೋಡಿಗುಬ್ಬಿ ಗ್ರಾಮದ ನಿವಾಸಿ ರಾಜೇಗೌಡ ಬಿನ್ ಸುಬ್ಬೇಗೌಡ(64) ಸಾವನ್ನಪ್ಪಿದ ವ್ಯಕ್ತಿ. ಇವರು ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, 2 ತಿಂಗಳಿಂದ ಕಾಣೆಯಾಗಿದ್ದರು. ಕುಟುಂಬದವರು ಸಂಬಂಧಿಕರ ಮನೆ ಎಲ್ಲೆಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಈ ಕುರಿತು ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯವನ್ನು ಸುತ್ತುತ್ತಿದ್ದ ವೇಳೆ ಮರದ ಬಳಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಕೂಡಲೇ ಅರಕಲಗೂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಅಷ್ಟರಲ್ಲಾಗಲೇ ಕುಟುಂಬದವರು ವಿಷಯ ತಿಳಿದು ಸ್ಥಳಕ್ಕಾಗಮಿಸಿ ಮೃತದೇಹವನ್ನು ಪತ್ತೆಹಚ್ಚಿದ್ದು, ಇವರು ಕಾಣೆಯಾಗಿರುವ ಬಗ್ಗೆ ಹಳ್ಳಿಮೈಸೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದೆವು ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಠಿಣ ಪರಿಶ್ರಮದಿಂದ ಉತ್ತಮ ಫಲಿತಾಂಶ ಸಾಧ್ಯ
ಔರಾದ್ ತಾಲೂಕು ಅದ್ಧೂರಿ ಕಸಾಪ ಸಮ್ಮೇಳನ