ಚರಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ

KannadaprabhaNewsNetwork |  
Published : Feb 02, 2025, 11:46 PM IST
2ಎಚ್ಎಸ್ಎನ್17 : ಚರಂಡಿಯಲ್ಲಿ ಬಿಸಾಡಲಾದ ಮಗುವಿನ ಶವವನ್ನು ಪರಿಶೀಲಿಸಿದ ಆರೋಗ್ಯ ಇಲಾಖೆ ಸಿಬ್ಬಂದಿಗಳು. | Kannada Prabha

ಸಾರಾಂಶ

ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ಚರಂಡಿಗೆ ಬಿಸಾಡಿ ಹೋಗಿರುವ ಘಟನೆ ಭಾನುವಾರ ಮಧ್ಯಾಹ್ನ ಬೆಳಕಿಗೆ ಬಂದಿದ್ದು, ಈ ದೃಶ್ಯ ನೋಡಿದ ಮಹಿಳೆಯರು ಮಗು ಬಿಸಾಡಿದವರ ಮೇಲೆ ಹಿಡಿಶಾಪ ಹಾಕಿದರು. ಚರಂಡಿಯಲ್ಲಿ ಬಿದ್ದ ಮಗು ಕಂಡ ಜನರು ಮರುಕ ವ್ಯಕ್ತಪಡಿಸಿದರು. ಮಗುವಿನ ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಇದೇ ವೇಳೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದರು.

ಕನ್ನಡಪ್ರಭ ವಾರ್ತೆ ಹಾಸನ

ಆಗತಾನೆ ಹುಟ್ಟಿದ ನವಜಾತ ಶಿಶುವನ್ನು ಚರಂಡಿಗೆ ಬಿಸಾಡಿ ಹೋಗಿರುವ ಘಟನೆ ಭಾನುವಾರ ಮಧ್ಯಾಹ್ನ ಬೆಳಕಿಗೆ ಬಂದಿದ್ದು, ಈ ದೃಶ್ಯ ನೋಡಿದ ಮಹಿಳೆಯರು ಮಗು ಬಿಸಾಡಿದವರ ಮೇಲೆ ಹಿಡಿಶಾಪ ಹಾಕಿದರು.

ಹೇಮಾವತಿ ನಗರದ ಕಾರ್ಮೆಲ್ ಚರ್ಚ್ ಬಳಿ ಇರುವ ಚರಂಡಿ ಒಳಗೆ ಈ ನವಜಾತ ಶಿಶುವನ್ನು ಒಂದು ಕವರ್ ಒಳಗೆ ಕಟ್ಟಿ ಬಿಸಾಡಿ ಹೋಗಿದ್ದಾರೆ. ಚರಂಡಿಯಲ್ಲಿ ಬಿದ್ದ ಮಗು ಕಂಡ ಜನರು ಮರುಕ ವ್ಯಕ್ತಪಡಿಸಿದರು. ಮಗುವಿನ ಶವವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ತಕ್ಷಣ ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಇದೇ ವೇಳೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದರು.

ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಈ ಹೆಣ್ಣು ಮಗುವನ್ನು ನೋಡಲು ಸಾರ್ವಜನಿಕರು ನೂಕು ನುಗ್ಗಲಿನಲ್ಲಿ ಆಗಮಿಸಿದ್ದರು. ಇನ್ನು ಮಹಿಳೆಯರು ಈ ದೃಶ್ಯವನ್ನು ನೋಡಿ ಹಿಡಿ ಶಾಪ ಹಾಕುತ್ತಿದ್ದರು. ಯಾರೋ ಅಕ್ರಮವಾಗಿ ಪಡೆದ ಮಗುವನ್ನು ಬಿಸಾಡಿದ್ದಾರೆ. ಇಲ್ಲವೇ ಹೆಣ್ಣು ಮಗು ಹುಟ್ಟಿದೆ ಎಂದು ಸಾಕಾಲಾಗದೇ ಬಿಸಾಡಿರಬಹುದು ಎಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಲವಿನ ಊಟ ಬಡಿಸಲು ಸಿದ್ಧವಾದ ಅಕ್ಕ ಕೆಫೆ
ಚನ್ನಮ್ಮ ಮೂರ್ತಿ ಉದ್ಘಾಟನಾ ಸಮಾರಂಭಕ್ಕೆ ಬಹಿಷ್ಕಾರ