ಕನ್ನಡಪ್ರಭ ವಾರ್ತೆ ಭದ್ರಾವತಿ
ಅಲ್ಲದೆ ರೈಸ್ಮಿಲ್ನಲ್ಲಿ ಕೆಲಸ ಮಾಡುವ ಕಾರ್ಮಿಕರ ಸುಮಾರು 7-8 ದ್ವಿಚಕ್ರ ವಾಹನಗಳು ಸಹ ಸಂಪೂರ್ಣವಾಗಿ ಜಖಂಗೊಂಡಿವೆ. ರೈಸ್ ಮಿಲ್ ಮೇಲ್ಛಾವಣಿ, ಯಂತ್ರೋಪಕರಣಗಳು, ವಿದ್ಯುತ್ ಪರಿವರ್ತಕ ಹಾಗು ಕಟ್ಟಡ ಬಹುತೇಕ ಹಾನಿಯಾಗಿದ್ದು, ಕೋಟ್ಯಾಂತರ ರು. ನಷ್ಟ ಸಂಭವಿಸಿದೆ. ಅರ್ಧ ಕಿ.ಮೀ ದೂರದ ಆರ್ಸಿಸಿ ಮನೆಯ ಮೇಲೆ ಬಿದ್ದ ಕಬ್ಬಿಣ ಭಾರಿ ಗಾತ್ರದ ತುಂಡು: ಬಾಯ್ಲರ್ ಸ್ಪೋಟದಿಂದ ಕಬ್ಬಿಣದ ಭಾರಿ ಗಾತ್ರದ ತುಂಡು ಸುಮಾರು ಅರ್ಧ ಕಿ.ಮೀ. ಅನ್ವರ್ ಕಾಲೋನಿ, ಇಂದಿರಾನಗರದಲ್ಲಿರುವ ಆರ್ಸಿಸಿ ಮನೆಯೊಂದರ ಮೇಲೆ ಬಿದ್ದಿದ್ದು, ಇದರಿಂದ ಆರ್ಸಿಸಿ ಮೇಲ್ಛಾವಣಿ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆಯಿಂದ ಸ್ಥಳೀಯರು ಹೆಚ್ಚಿನ ಭಯಭೀತರಾಗಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಸುಮಾರು 9 ಗಂಟೆ ಕಾರ್ಯಾಚರಣೆ: ಸ್ಥಳೀಯ ಅಗ್ನಿಶಾಮಕ ದಳ ಸಿಬ್ಬಂದಿ ಮಾಹಿತಿ ತಿಳಿದ ತಕ್ಷಣ ಸುಮಾರು 7 ಗಂಟೆ ಸಮಯಕ್ಕೆ ಘಟನಾ ಸ್ಥಳಕ್ಕೆ ತೆರಳಿದ್ದು, ಆರಂಭದಲ್ಲಿ ಬಾಯ್ಲರ್ ಸ್ಪೋಟದಿಂದ ಉಂಟಾದ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಉಳಿದ ಕಾರ್ಯಾಚರಣೆ ಬೆಳಗಿನ ಜಾವ ಸುಮಾರು 3.30ರ ವರೆಗೂ ಕೈಗೊಂಡಿದ್ದು, ಈ ಘಟನೆಯಲ್ಲಿ ಸುಮಾರು 8 ಜನ ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಒಂದು ಅಗ್ನಿಶಾಮಕ ವಾಹನ ಕಾರ್ಯಾಚರಣೆಗೆ ಬಳಸಲಾಗಿದ್ದು, ಶಿವಮೊಗ್ಗ ಹಾಗು ಸ್ಥಳೀಯ ಅಗ್ನಿಶಾಮಕ ಠಾಣಾಧಿಕಾರಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಮಾಲೀಕರ ವಿರುದ್ಧ ಪ್ರಕರಣ ದಾಖಲು:
ಗಣೇಶ್ ರೈಸ್ ಮಿಲ್ ಮಾಲೀಕರಾದ ಗಿರಿರಾಜ್ ಶೆಟ್ಟಿ ಹಾಗು ದೀಪಕ್ ಶೆಟ್ಟಿ ವಿರುದ್ಧ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೆ ವಿವಿಧ ಇಲಾಖೆಗಳ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡಿದ್ದಾರೆ.