ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು ಸಿಸಿಬಿ ತಂಡ ಮಂಗಳೂರಿಗೆ

KannadaprabhaNewsNetwork |  
Published : Mar 05, 2024, 01:32 AM ISTUpdated : Mar 05, 2024, 11:01 AM IST
೩೨ | Kannada Prabha

ಸಾರಾಂಶ

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಜೊತೆಗಿನ ಹೋಲಿಕೆ ಪರೀಕ್ಷಿಸಲು, ಬೆಂಗಳೂರು ಸ್ಫೋಟ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ತಂಡವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಪೂರಕ ಮಾಹಿತಿ ಕಲೆಹಾಕಿದೆ ಎಂದು ತಿಳಿದುಬಂದಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸ್ಫೋಟಕ್ಕೂ, ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟಕ್ಕೂ ಸಾಮ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಅಪರಾಧ ಪತ್ತೆ ದಳದ ಪೊಲೀಸರ ತಂಡ ಮಂಗಳೂರಿಗೆ ಆಗಮಿಸಿ ಪರಿಶೀಲನೆ ನಡೆಸಿದೆ.ಮಂಗಳೂರಿಗೆ ಆಗಮಿಸಿದ ತಂಡವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಪೂರಕ ಮಾಹಿತಿ ಕಲೆಹಾಕಿದೆ ಎಂದು ತಿಳಿದುಬಂದಿದೆ.

ಮಂಗಳೂರಿನ ನಾಗುರಿ ಎಂಬಲ್ಲಿ ೨೦೨೨ರ ನ.೧೯ರಂದು ಆರೋಪಿ ಮೊಹಮ್ಮದ್ ಶಾರೀಕ್ ಕುಕ್ಕರ್ ಬಾಂಬ್ ಹೊತ್ತುಕೊಂಡು ರಿಕ್ಷಾದಲ್ಲಿ ತೆರಳುತ್ತಿದ್ದಾಗ ಬಾಂಬ್ ಸ್ಫೋಟ ಸಂಭವಿಸಿ ಶಾರೀಕ್ ಹಾಗೂ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದರು. 

ಬೆಂಗಳೂರಿನಲ್ಲಿ ಕಂಡುಬಂದ ಸ್ಫೋಟಕ ವಸ್ತುವಿಗೂ ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಗೂ ಸಾಮ್ಯತೆ ಇದ್ದುದು ಪತ್ತೆಯಾಗಿರುವುದರಿಂದ ಪೊಲೀಸರ ತಂಡ ವಿವಿಧ ಮೂಲಗಳಿಂದ ಮಾಹಿತಿ ಕಲೆಹಾಕಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಕನಿಷ್ಠ ಆದಾಯ ಮಿತಿ 3 ಲಕ್ಷ ರು.ಗೆ ಏರಿಕೆ: ಮುನಿಯಪ್ಪ
ಏ.1ರಿಂದ ರಾಜ್ಯದ ರಾಷ್ಟ್ರೀಯ ಹೆದ್ದಾರಿ ಟೋಲ್‌ ಶುಲ್ಕ ಹೆಚ್ಚಳ