ಕನ್ನಡಪ್ರಭವಾರ್ತೆ ಚನ್ನಪಟ್ಟಣ
ನಗರದ ೫ನೇ ಅಡ್ಡರಸ್ತೆಯಲ್ಲಿರುವ ಶಾಸಕರ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.೨೩ರಿಂದ ೨೫ರವರೆಗೆ ಮೂರು ದಿನಗಳ ಕಾಲ ಬೊಂಬೆನಾಡ ಗಂಗೋತ್ಸವದ ಪ್ರಯುಕ್ತ ಸಾಕಷ್ಟು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಇದರಲ್ಲಿ ತಾಲೂಕಿನ ಜನತೆ ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು ಎಂದರು.
ವೇಷ, ಭೂಷಣ ಸಹಿತ ರಂಗಗೀತೆಗಳ ಸ್ಪರ್ಧೆ, ವಾಯ್ಸ್ ಆಫ್ ಬೊಂಬೆನಾಡು, ದಂಪತಿಗಳಿಗೆ ಭಾರತೀಯ ಸಂಪ್ರದಾಯದ ಉಡುಗೆ ಪ್ರದರ್ಶನ ಸ್ಪರ್ಧೆ, ಚಲನಚಿತ್ರ ಗೀತೆಗಳ ಸಮೂಹ ನೃತ್ಯ ಸ್ಪರ್ಧೆ, ವೇಷಭೂಷಣ ಸ್ಪರ್ಧೆ, ಮ್ಯಾರಥಾನ್ , ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸುವ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳು ನಡೆದಿದ್ದವು. ಇದಲ್ಲದೇ ಕಳೆದ ಒಂದು ತಿಂಗಳನಿಂದ ಹೋಬಳಿ ಮಟ್ಟದಲ್ಲಿ ಕ್ರಿಕೆಟ್, ಕಬಡ್ಡಿ, ವಾಲಿಬಾಲ್, ಷಟಲ್ ಬ್ಯಾಡ್ಮಿಂಟನ್ ಸೇರಿದಂತೆ ಹಲವು ಪಂದ್ಯಾವಳಿಗಳು ನಡೆದಿದ್ದವು. ಇವುಗಳಲ್ಲಿ ಕ್ರೀಡಾಪಟುಗಳು ಉತ್ಸಾಹದಿಂದ ಭಾಗವಹಿಸಿದ್ದರು. ಇಲ್ಲಿ ಗೆದ್ದ ತಂಡಗಳು ಕನಕಪುರದಲ್ಲಿ ನಡೆಯುತ್ತಿರುವ ಕನಕೋತ್ಸವದಲ್ಲಿ ಭಾಗವಹಿಸಲಿವೆ ಎಂದರು.ಇವುಗಳ ಜತೆಗೆ ಸಾಧಕರ ಸಮಾವೇಶ, ದೇಹದಾರ್ಢ್ಯ ಸ್ಪರ್ಧೆ, ಎಸ್ಎಸ್ಎಲ್ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕಡೆಯ ದಿನ ಗಂಗರ ರಾಜಮನೆತನದ ಬಗ್ಗೆ ಉಪನ್ಯಾಸ ಆಯೋಜಿಸುವ ಮೂಲಕ ಗಂಗರ ಕೊಡುಗೆಯನ್ನು ಸ್ಮರಿಸಲಾಯಿತು ಎಂದರು.
ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪ್ರಮೋದ್ ಮಾತನಾಡಿ, ಮೂರು ದಿನಗಳ ಕಾಲ ನಡೆದ ಬೊಂಬೆನಾಡ ಗಂಗೋತ್ಸವ ಒಂದು ಐತಿಹಾಸಿಕ ಕಾರ್ಯಕ್ರಮವಾಗಿತ್ತು. ಕಾರ್ಯಕ್ರಮದ ಯಶಸ್ಸಿಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುನೀಲ್, ನಗರಸಭೆ ಪ್ರಭಾರ ಅಧ್ಯಕ್ಷ ಲೋಕೇಶ್, ನಗರಸಭೆ ಮಾಜಿ ಅಧ್ಯಕ್ಷ ವಾಸೀಲ್ ಅಲಿಖಾನ್, ಸದಸ್ಯರಾದ ಸತೀಶ್ ಬಾಬು, ರೇವಣ್ಣ, ಮತೀನ್, ಮುಖಂಡರಾದ ಕೋಕಿಲಾರಾಣಿ ಇತರರು ಇದ್ದರು.