ಕನ್ನಡಪ್ರಭ ವಾರ್ತೆ ನಾಗಮಂಗಲ
ಪಟ್ಟಣದ ಆದಿಚುಂಚನಗಿರಿ ಕಲಾ ವಾಣಿಜ್ಯ ಮತ್ತು ವಿಜ್ಞಾನ ಕಾಲೇಜಿನಲ್ಲಿ ಕಾಲೇಜಿನ ಹಿರಿಯ ವಿದ್ಯಾರ್ಥಿಯಾದ ಬೆಳ್ಳೂರಿನ ಅಂತಾರಾಷ್ಟ್ರೀಯ ಯೋಗ ಪಟು ಹಾಗೂ ಯೋಗಸೇವಾರತ್ನ ಪ್ರಶಸ್ತಿ ಪುರಸ್ಕೃತ ಕಿಶೋರ್ ಬೆಟ್ಟೇಗೌಡ ಅವರನ್ನು ಸನ್ಮಾನಿಸಿ ಮಾತನಾಡಿದರು.
ಕಾಲೇಜಿನ ಹಿರಿಯ ವಿದ್ಯಾರ್ಥಿಗಳು ಅನೇಕ ಸ್ತರಗಳಲ್ಲಿ ಸಾಧನೆಗೆ ಭಾಜನರಾಗಿದ್ದಾರೆ. ಅಂತಹ ಸಾಧಕ ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರು ಸಂಪರ್ಕ ಸಾಧಿಸಿ, ಅವರ ಸಾಧನೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದಾಗ ಉಪನ್ಯಾಸ ವೃತ್ತಿಗೆ ಪ್ರಾಮಾಣಿಕ ಸೇವೆ ಸಲ್ಲಿಸಿದಂತಾಗುತ್ತದೆ ಎಂದರು.ವಿದ್ಯಾರ್ಥಿಗಳ ಬಗೆಗೆ ಕಾಳಜಿ ವಹಿಸುವ ಹಾಗೂ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಕೆಲಸವಾಗಬೇಕು. ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ನಡುವಿನ ಬಾಂಧವ್ಯ ಆಯಾ ಕಾಲಘಟ್ಟಕ್ಕೆ ಮಾತ್ರ ಸೀಮಿತವಾಗಬಾರದು ಎಂದು ಹೇಳಿದರು.
ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಎಚ್.ಆರ್.ತ್ರಿವೇಣಿ ಮಾತನಾಡಿ, ಪ್ರಸ್ತುತ ನಶಿಸುತ್ತಿರುವ ಸಾಮಾಜಿಕ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ಉಪನ್ಯಾಸಕರ ಆದ್ಯತೆ ಪ್ರಥಮ ಸಾಲಿನದ್ದಾಗಿರಬೇಕು. ಬೋಧನಾ ಸಮಯವನ್ನು ಹೊರತುಪಡಿಸಿದ ನಂತರವೂ ವಿದ್ಯಾರ್ಥಿಗಳು ಉಪನ್ಯಾಸಕರನ್ನು ಅನುಸರಿಸುತ್ತಾರೆ. ಈ ನಿಟ್ಟಿನಲ್ಲಿ ನಾವು ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಅವರ ಬದುಕು ಹಸನಾಗಲು ಮಾರ್ಗದರ್ಶನ ನೀಡಬೇಕಿದೆ ಎಂದು ಸಲಹೆ ನೀಡಿದರು.
ಗ್ರಂಥಾಲಯ ಸಹಾಯಕ ಎನ್.ಟಿ.ವಿಜಯ್ ಕುಮಾರ್ ಯೋಗಸೇವಾರತ್ನ ಪ್ರಶಸ್ತಿ ಪುರಸ್ಕೃತ ಕಿಶೋರ್ ಬೆಟ್ಟೇಗೌಡ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಪ್ರಶಸ್ತಿ ಪುರಸ್ಕೃತ ಕಿಶೋರ್ ಬೆಟ್ಟೇಗೌಡ ತಮ್ಮ ಕಾಲೇಜು ದಿನಗಳ ಬಗೆಗಿನ ನೆನಪುಗಳನ್ನು ಮೆಲುಕು ಹಾಕುತ್ತಾ ತಮಗೆ ಮಾರ್ಗದರ್ಶನ ನೀಡಿದ ಉಪನ್ಯಾಸಕರನ್ನು ಭಾವನಾತ್ಮಕವಾಗಿ ಸ್ಮರಿಸಿಕೊಂಡರು.