- ವಿಶ್ವ ಯೋಗ ದಿನ ಕಾರ್ಯಾಗಾಋದಲ್ಲಿ ಯೋಗತಜ್ಞ ಡಾ.ರಾಘವೇಂದ್ರ ಗುರೂಜಿ
ಕನ್ನಡಪ್ರಭ ವಾರ್ತೆ ದಾವಣಗೆರೆ
ಪ್ರಸ್ತುತ ದಿನಗಳಲ್ಲಿ ಮಂಡಿನೋವಿನ ಸಮಸ್ಯೆ ಸಣ್ಣ ವಯಸ್ಸಿನಲ್ಲಿಯೇ ಕಂಡುಬರುತ್ತಿದೆ. ದೇಹದಲ್ಲಿ ಪ್ರಮುಖವಾಗಿ ಕ್ಯಾಲ್ಸಿಯಂ, ವಿಟಮಿನ್ ''''ಡಿ'''' ಕೊರತೆ, ಅವೈಜ್ಞಾನಿಕ ಆಹಾರ ಪದ್ಧತಿ, ಅಧಿಕ ದೇಹದ ತೂಕ ಈ ಸಮಸ್ಯೆಗೆ ಕಾರಣಗಳು ಎಂದು ಯೋಗತಜ್ಞ ಡಾ.ರಾಘವೇಂದ್ರ ಗುರೂಜಿ ಹೇಳಿದರು.ಬಾಪೂಜಿ ಮಕ್ಕಳ ಆರೋಗ್ಯ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ವಿವೇಕ್ ಪೋಷಕರ ಆರೋಗ್ಯ ಕಾರ್ಯಾಗಾರದಲ್ಲಿ ''''ಬಿಟ್ಟು ಬಿಡದೇ ಕಾಡುವ ಮಂಡಿನೋವಿಗೆ ಯೋಗದಿಂದ ಪರಿಹಾರವಿದೆ'''' ವಿಷಯ ಕುರಿತು ಅವರು ಮಾಹಿತಿ ನೀಡಿದರು.
ಪರಿಹಾರಗಳೇನು?:
ಮಕ್ಕಳ ಆಸ್ಪತ್ರೆ ನಿರ್ದೇಶಕ ಡಾ. ಜಿ.ಗುರುಪ್ರಸಾದ್, ಹಿರಿಯ ಮಕ್ಕಳ ತಜ್ಞ ಡಾ.ಸುರೇಶ ಬಾಬು, ಆಸ್ಪತ್ರೆ ವ್ಯವಸ್ಥಾಪಕ ಸಿದ್ದೇಶ್ವರ ಗುಬ್ಬಿ, ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ಮೂಗನಗೌಡ ಪಾಟೀಲ್, ಬಾಪೂಜಿ ಆಸ್ಪತ್ರೆ ನಿರ್ದೇಶಕರಾದ ಡಾ.ಕುಮಾರ್, ಡಾ.ಪ್ರಶಾಂತ ಕುಮಾರಿ, ಡಾ.ಕೌಜಲಗಿ, ಡಾ.ಮೃತ್ಯುಂಜಯ, ಡಾ.ಮಧು ಪೂಜಾರ್, ಡಾ.ರೇವಪ್ಪ, ಡಾ.ನಾಗಮಣಿ ಅಗರ್ವಾಲ್, ಪೋಷಕರು, ನರ್ಸಿಂಗ್ ವಿದ್ಯಾರ್ಥಿಗಳು, ಆಸ್ಪತ್ರೆ ಸಿಬ್ಬಂದಿ ಉಪಸ್ಥಿತರಿದ್ದರು.
(ಕೋಟ್) ಮಂಡಿನೋವಿಗೆ ಸೂಕ್ತ ಯೋಗ ಚಿಕಿತ್ಸೆಗೆ ಅಯ್ಯಂಗಾರ್ ಯೋಗ ಚಿಕಿತ್ಸಾ ಪದ್ಧತಿಯಲ್ಲಿ ನುರಿತ ಯೋಗ ತಜ್ಞರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು. ಇದರಿಂದ ಮಂಡಿನೋವಿನ ಯಾವುದೇ ಸಮಸ್ಯೆಯಿದ್ದರೂ ಪರಿಪೂರ್ಣ ಗುಣಮುಖರಾಗಲು ಸಾಧ್ಯ. ಪ್ರತಿನಿತ್ಯ ಯೋಗ ಅಭ್ಯಾಸ ಮಾಡುವುದು ಅತ್ಯವಶ್ಯಕ.
- - -
-25ಕೆಡಿವಿಜಿ33: ದಾವಣಗೆರೆಯಲ್ಲಿ ನಡೆದ ಆರೋಗ್ಯ ಕಾರ್ಯಾಗಾರದಲ್ಲಿ ಯೋಗತಜ್ಞ ಡಾ.ರಾಘವೇಂದ್ರ ಗುರೂಜಿ ಅವರನ್ನು ಸನ್ಮಾನಿಸಲಾಯಿತು.