ಮಹಿಳಾ ಸಾಹಿತ್ಯಕ್ಕೆ ಸಿಕ್ಕ ಮಾನ್ಯ ಬುಕರ್: ಲೇಖಕಿ ಅಕ್ಷತಾ ಹುಂಚದಕಟ್ಟೆ

KannadaprabhaNewsNetwork |  
Published : May 31, 2025, 01:19 AM IST
ಪೋಟೋ: 30ಎಸ್‌ಎಂಜಿಕೆಪಿ01ಶಿವಮೊಗ್ಗ ನಗರದ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಬುಧವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 'ಕ್ರಿಯಾಶೀಲತೆಯ ಒಳನೋಟ' ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು.  | Kannada Prabha

ಸಾರಾಂಶ

ಮಹಿಳೆಯರ ಬರಹವೆಂದರೆ ಅದು ಅಡುಗೆ ಮನೆ ಸಾಹಿತ್ಯ ಎಂದು ನಿರ್ಲಕ್ಷ್ಯ ಮಾಡುತ್ತಿದ್ದ ಕಾಲದಲ್ಲಿ ಅದೇ ಮಹಿಳಾ ಸಾಹಿತ್ಯ ವಿಶ್ವ ಮನ್ನಣೆ ತಂದುಕೊಟ್ಟಿದ್ದು ಮಹಿಳಾ ಸಾಹಿತ್ಯಕ್ಕೆ ಸಿಕ್ಕ ಮಾನ್ಯತೆ ಎಂದು ಲೇಖಕಿ ಅಕ್ಷತಾ ಹುಂಚದಕಟ್ಟೆ ಅಭಿಪ್ರಾಯಪಟ್ಟರು.

ಲೇಖಕಿ ಅಕ್ಷತಾ ಹುಂಚದಕಟ್ಟೆ ಅಭಿಪ್ರಾಯ । ‘ಕ್ರಿಯಾಶೀಲತೆ ನೋಟ’ ಸ್ಮರಣ ಸಂಚಿಕೆ ಬಿಡೆಗಡೆ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಮಹಿಳೆಯರ ಬರಹವೆಂದರೆ ಅದು ಅಡುಗೆ ಮನೆ ಸಾಹಿತ್ಯ ಎಂದು ನಿರ್ಲಕ್ಷ್ಯ ಮಾಡುತ್ತಿದ್ದ ಕಾಲದಲ್ಲಿ ಅದೇ ಮಹಿಳಾ ಸಾಹಿತ್ಯ ವಿಶ್ವ ಮನ್ನಣೆ ತಂದುಕೊಟ್ಟಿದ್ದು ಮಹಿಳಾ ಸಾಹಿತ್ಯಕ್ಕೆ ಸಿಕ್ಕ ಮಾನ್ಯತೆ ಎಂದು ಲೇಖಕಿ ಅಕ್ಷತಾ ಹುಂಚದಕಟ್ಟೆ ಅಭಿಪ್ರಾಯಪಟ್ಟರು.

ನಗರದ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತನ್ನ ಮೂರು ವರ್ಷದ ಕಾರ್ಯಚಟುವಟಿಕೆಗಳ ದಾಖಲೆಗಳಿರುವ ‘ಕ್ರಿಯಾಶೀಲತೆಯ ಒಳನೋಟ’ ಸ್ಮರಣ ಸಂಚಿಕೆ ಬಿಡುಗಡೆ ಹಾಗೂ ಬಾನು ಮುಷ್ತಾಕ್ ಅವರ ಎದೆಯ ಹಣತೆ ಕೃತಿ ಕುರಿತ ಚರ್ಚೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಕನ್ನಡದ ಲೇಖಕಿಗೆ ಬುಕರ್ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ಜಗತ್ತು ಕನ್ನಡ, ಕರ್ನಾಟಕವನ್ನು ವಿಶೇಷ ಆಸಕ್ತಿಯಿಂದ ನೋಡುವ ಕಾಲ ಬಂದಿದೆ. ಹೆಜ್ಜೆ ಮೂಡದ ಹಾದಿ ಆರು ಕಥೆಗಳಿರುವ ಸಂಕಲನವನ್ನು, ಆಂಗ್ಲ ಭಾಷೆಗೆ ಭಾಷಾಂತರ ಮಾಡಿದ ಹಾರ್ಟ್ ಲ್ಯಾಂಪ್ ಕೃತಿಗೆ ವಿಶ್ವ ಪ್ರಶಸ್ತಿ ಬಂದಿದೆ ಎಂದರು.

ಪುರಷರು ಬರೆದ ಸಾಹಿತ್ಯಕ್ಕೆ ಇರುವ ಮಾನ್ಯತೆಯಷ್ಟೆ ಹೆಣ್ಣುಮಕ್ಕಳು ಬರೆದ ಸಾಹಿತ್ಯಕ್ಕೂ ದೊರೆಯಬೇಕು. ಪ್ರತ್ಯೇಕಿಸದೆ ಒಗ್ಗಟ್ಟಿನಿಂದ ಒಳಗೊಳ್ಳುವಿಕೆಯಲ್ಲಿ ಜಗತ್ತು ಬೆಳಗಬೇಕು. ಜನಪರ ವಾದಿಗಳಿಗೆ ಮೂಲಭೂತ ವಾದಿಗಳ ಭಯ, ಆತಂಕ, ದಾಳಿ ಮಾಡುವುದು, ಬಹಿಷ್ಕಾರದ ನೋವುಂಟು ಮಾಡುವ ಸಂದರ್ಭದ ತಲ್ಲಣಗಳನ್ನು ಕುರಿತು ಬಾನು ಮುಸ್ತಾಕ್ ಅವರು ತಮ್ಮ ಕೃತಿಯಲ್ಲಿ ಕಣ್ಣಿಗೆ ಕಟ್ಟುವಂತೆ ನಿರೂಪಿಸಿದ್ದಾರೆ ಎಂಬುದನ್ನು ವಿವರಿಸಿದರು.

ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದ ಸಾಹಿತಿ ಡಾ.ಜೆ.ಕೆ.ರಮೇಶ್ ಮಾತನಾಡಿ, ಕ್ರಿಯಾಶೀಲತೆಯ ಒಳನೋಟಕ್ಕೆ ಹೊರ ನೋಟವೂ ಇದೆ. ಮಲೆನಾಡಿನ ಚಿತ್ರಣವಿಲ್ಲಿದೆ. ಜಿಲ್ಲೆಯ ನಕ್ಷೆ, ರಾಷ್ಟ್ರಕವಿಯ ಚಿತ್ರ ಎಲ್ಲವನ್ನೂ ಒಳಗೊಂಡಿದೆ. ಪರಿಷತ್ತು ಚಟುವಟಿಕೆಗಳು, ಅತಿಥಿಗಳ ಮಾತು ಸಂಘಟಿಸಿದ ನಾಲ್ಕು ಸಮ್ಮೇಳನಗಳ ಭಾಷಣಗಳ ಸಂಗ್ರಹಗಳಲ್ಲಿ ನೂರ ಇಪ್ಪತೈದು ಜನರ ಭಾಷಣಗಳ ಟಿಪ್ಪಣಿಗಳಿವೆ. ಇಲ್ಲಿ ಎಲ್ಲಾ ಬಗೆಯ ಅಭಿಪ್ರಾಯಗಳಿವೆ. ಒಳಹೊಕ್ಕು ನೋಡಿದಾಗ ಒಳನೋಟದ ಅರಿವಾಗುತ್ತದೆ ಎಂದು ವಿಶ್ಲೇಷಿಸಿದರು.

ಈ ಸಂಚಿಕೆಯಲ್ಲಿ ಕನ್ನಡ ಭಾಷೆ, ಅದರ ಸ್ವರೂಪ, ಸ್ಥಿತಿ, ಸ್ಥಾನ ಮಾನಗಳ ಕುರಿತು ಚಿಂತಿಸಿರುವ ಲೇಖನಗಳಿವೆ. ಸಾಹಿತ್ಯ ಕೃತಿಗಳು, ಅಭಿವೃಚಿ, ಓದುಗರ ದೃಷ್ಟಿ, ಓದುವ ಹಂಬಲವೇ ಕಡಿಮೆ ಆಗುತ್ತಿರುವ ವಿಚಾರವಾಗಿ, ಪುಸ್ತಕದ ಮಹತ್ವ ಕುರಿತು ಮಾತುಗಳಿವೆ. ದತ್ತಿ ಉಪನ್ಯಾಸದಲ್ಲಿ ಒಂದೇ ವಿಚಾರ ಬೇರೆ ಬೇರೆ ಮಾತುಗಳನ್ನು ದಾಖಲಿಸಲಾಗಿದೆ.ಅಸಮಾನತೆ ಅಸಹಿಷ್ಣುತೆ, ಕೋಮುವಾದ ವಿಚಾರಗಳು, ಪರಿಸರಕ್ಕೆ ಸಂಬಂಧಿಸಿದ ಲೇಖನಗಳು ಇಲ್ಲಿವೆ. ಮಡಿವಂತಿಕೆಯಿಲ್ಲದೆ ಎಲ್ಲವನ್ನೂ ಒಳಗೊಂಡಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಅಧ್ಯಕ್ಷ ಡಿ. ಮಂಜುನಾಥ ಅಧ್ಯಕ್ಷತೆ ವಹಿಸಿದ್ದರು. ಕೆ.ಎಸ್.ಮಂಜಪ್ಪ ನಿರೂಪಿಸಿದರು. ಡಾ. ವಿಜಯಾದೇವಿ, ಎಂ.ನವೀನ್ ಕುಮಾರ್, ಕೆ.ಎಸ್.ಹುಚ್ಚರಾಯಪ್ಪ, ಮಂಜುನಾಥ ಕಾಮತ್, ಎಚ್.ಎಸ್.ರಘು, ಮಹಾದೇವಿ, ಎಚ್. ತಿಮ್ಮಪ್ಪ ಭದ್ರಾವತಿ, ಎಂ.ಇ.ಜಗದೀಶ್, ಮೋಹನ್ ಕುಮಾರ್, ಡಿ.ಗಣೇಶ್ ಇತರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ