ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ ದೊಡ್ಡ ಗೌರವ: ದೊಡ್ಡಯ್ಯ

KannadaprabhaNewsNetwork |  
Published : May 25, 2025, 02:06 AM IST
24ಕೆಎಂಎನ್ ಡಿ24 | Kannada Prabha

ಸಾರಾಂಶ

ತಮ್ಮ ನೇರ ನಡೆ, ನುಡಿಯೊಂದಿಗೆ ಸಾಹಿತ್ಯ ಚಳವಳಿಯಲ್ಲಿ ಬಂದಿರುವ ಬಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಇಂತಹ ಪ್ರತಿಷ್ಠಿತ ಪ್ರಶಸ್ತಿಯು ಭಾರತೀಯರಿಗೆ ಲಭಿಸಿರುವುದು ದೊಡ್ಡ ಗೌರವ. ಇದರಿಂದ ರಾಜ್ಯಕ್ಕೆ ಹಾಗೂ ಕನ್ನಡ ಸಾಹಿತ್ಯಕ್ಕೆ ಹೊಸ ಚೈತನ್ಯ ನೀಡಿದೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಹಿರಿಯ ಕಥೆಗಾರ್ತಿ ಬಾನು ಮುಷ್ತಾಕ್ ಅವರಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಲಭಿಸಿರುವುದು ದೊಡ್ಡ ಗೌರವ ಎಂದು ಡಾ.ರಾಜ್ ಕುಮಾರ್ ಕಲಾ ಸಂಘದ ಅಧ್ಯಕ್ಷ ದೊಡ್ಡಯ್ಯ ತಿಳಿಸಿದರು.

ಪಟ್ಟಣದ ಕನ್ನಡ ಭವನದಲ್ಲಿ ಬಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ತಮ್ಮ ನೇರ ನಡೆ, ನುಡಿಯೊಂದಿಗೆ ಸಾಹಿತ್ಯ ಚಳವಳಿಯಲ್ಲಿ ಬಂದಿರುವ ಬಾನು ಮುಷ್ತಾಕ್ ಅವರಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಸಿಕ್ಕಿರುವುದು ಹೆಮ್ಮೆಯ ಸಂಗತಿ. ಇಂತಹ ಪ್ರತಿಷ್ಠಿತ ಪ್ರಶಸ್ತಿಯು ಭಾರತೀಯರಿಗೆ ಲಭಿಸಿರುವುದು ದೊಡ್ಡ ಗೌರವ. ಇದರಿಂದ ರಾಜ್ಯಕ್ಕೆ ಹಾಗೂ ಕನ್ನಡ ಸಾಹಿತ್ಯಕ್ಕೆ ಹೊಸ ಚೈತನ್ಯ ನೀಡಿದೆ ಎಂದರು.

ಮೊದಲ ಭಾರತೀಯ ಅನುವಾದಕಿ ಎಂಬ ಹಿರಿಮೆಗೆ ಕನ್ನಡದವರೇ ಆದ ದೀಪಾ ಭಾಸ್ತಿ ಒಳಗಾಗಿದ್ದಾರೆ. ಭೂಕರ್ ಪ್ರಶಸ್ತಿ ಪಡೆಯುವ ವೇಳೆ ವರನಟ ಡಾ.ರಾಜ್ ಕುಮಾರ್ ಅವರ ಚಲಿಸುವ ಮೋಡಗಳು ಸಿನಿಮಾದ ಜೇನಿನ ಹೊಳೆಯೊ ಹಾಲಿನ ಮಳೆಯೊ ಹಾಡಿನ ಸಾಲುಗಳನ್ನು ಹಾಡಿರುವುದನ್ನು ಕನ್ನಡಿಗರಿಗೆ ಸಂತಸ ತಂದಿದೆ ಎಂದರು.

ಅಂತಾರಾಷ್ಟ್ರೀಯ ಜನಪದ ಕಲಾವಿದ ಮಳವಳ್ಳಿ ಮಹದೇವಸ್ವಾಮಿ ಮಾತನಾಡಿ, ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸುವಲ್ಲಿ ಬೂಕರ್ ಪ್ರಶಸ್ತಿ ಸಹಕಾರಿಯಾಗಿದೆ. ದೀಪಾ ಭಾಸ್ತಿ ಕನ್ನಡ ಭಾಷೆಯ ಸೊಗಡು ಹಾಗೂ ಮಹತ್ವವನ್ನು ಜಗತ್ತಿಗೆ ಸಾರಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಕಸಾಪ ತಾಲೂಕು ಘಟಕದ ಅಧ್ಯಕ್ಷ ಎಲ್.ಚೇತನ್ ಕುಮಾರ್ ಮಾತನಾಡಿ, ಬಾನು ಮುಷ್ತಾಕ್ ಅವರು ಬದ್ಧತೆಯಿಂದ ರಚಿಸಿರುವ ಕಥಾ ಸಂಕಲನವು ಹೊಸ ಸಾಮಾಜಿಕ ಮತ್ತು ಸಾಂಸ್ಕೃತಿಕ ವಿನ್ಯಾಸಗಳನ್ನು ಪರಿಚಯಿಸಿದೆ. ಒಬ್ಬ ಮುಸ್ಲಿಂ ಮಹಿಳೆಯಾಗಿ ನಾಡಿನಲ್ಲಿ ಉನ್ನತ ಗೌರವ ಪಡೆದಿರುವುದು ಸಂತಸ ತಂದಿದೆ ಎಂದರು.

ಕಾರ್ಯಕ್ರಮದಲ್ಲಿ ಮಾದೇಗೌಡ, ಸಿದ್ದರಾಜು, ಜಯರಾಜು, ಮಹಾಲಿಂಗು, ಶಿವಕುಮಾರ್, ಸೋಮಶೇಖರ್, ಮಹದೇವಸ್ವಾಮಿ, ಬಸವರಾಜು, ರಾಮಚಂದ್ರ, ಶಂಕರ್ ಪಾಲ್ಗೋಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಗರದ 75 ಜಂಕ್ಷನ್‌ ಅಭಿವೃದ್ಧಿಗೆ ಗ್ರಹಣ!
ಎಚ್‌ಎಎಲ್‌ ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ:ಸಚಿವ