ಕನ್ನಡಪ್ರಭ ವಾರ್ತೆ ವಿಜಯಪುರ
ನಗರದ ಹೊರವಲಯದ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿ ಶಾಲೆ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸನ್ಮಾನ ಹಾಗೂ ಬೇಸಿಗೆ ಶಿಬಿರ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಡತನವೆಂಬುದು ವ್ಯಕ್ತಿಗೆ ವರವೇ ಹೊರತು ಶಾಪವಲ್ಲ. ಬಡತನವು ಶ್ರಮದ ಹಾದಿಯ ಮೂಲಕ ಯಶಸ್ಸಿನಡೆಗೆ ಕರೆದುಕೊಂಡು ಹೋಗಲು ಸಹಾಯಕಾರಿ ಆಗುತ್ತದೆ ಎಂದರು.
ವ್ಯಕ್ತಿತ್ವ ವಿಕಸನ ತರಬೇತುದಾರ ಮಹದೇವ ಬಸರಕೋಡ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಅಗಾಧ ಪ್ರತಿಭೆ ಅಡಗಿರುತ್ತದೆ. ಶಿಕ್ಷಕರು ಅದನ್ನು ಗುರುತಿಸಿ ಹೊರತರುವ ಪ್ರಯತ್ನ ಮಾಡಬೇಕು. ವಿದ್ಯಾರ್ಥಿಗಳು ಶ್ರದ್ಧೆ, ವಿನಯ, ಸಂಯಮ ಹಾಗೂ ಜೀವನದಲ್ಲಿ ಉತ್ತಮ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಮಾಜದ ಹಾಗೂ ದೇಶದ ಏಳಿಗೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಸಬೇಕು ಎಂದರು.ಶಾಲೆ ಸಂಸ್ಥಾಪಕ ಕಾರ್ಯದರ್ಶಿ ಡಾ.ಶಿವಾನಂದ ಕೆಲೂರ ಮಾತನಾಡಿ, ವಿದ್ಯಾರ್ಥಿಯ ಯಶಸ್ಸಿಗೆ ಜ್ಞಾನವೇ ಶಕ್ತಿ. ಆ ಜ್ಞಾನವನ್ನು ಸಂಪಾದನೆ ಮಾಡಬೇಕಾದರೆ ಸಂಯಮ ಬೇಕು. ಸಾಧಿಸುವ ಛಲವನ್ನು ಬೆಳಿಸಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯಗುರುಗಳಾದ ತುಳಜಾರಾಮ ಸುಕ್ತೆ, ಎಸ್.ಬಿ.ಹೆಗಳಾಡಿ, ಮಹಾದೇವಪ್ರಸಾದ ಕುಲಕರ್ಣಿ, ಶಿಕ್ಷಕಿಯರಾದ ರಮ್ಯಾ ಗಟನಟ್ಟಿ, ರುಚಿತಾ ಗಟನಟ್ಟಿ, ಸೇರಿದಂತೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.