ಕನ್ನಡಪ್ರಭ ವಾರ್ತೆ ಪಾವಗಡ
ತಾಲೂಕು ಆಡಳಿತ ವತಿಯಿಂದ ಶುಕ್ರವಾರ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ರಾಜ್ಯದ ಪ್ರಕೃತಿ ಸೊಬಗು ನೋಡುವುದೇ ಒಂದು ಸಂಭ್ರಮ. ಕರ್ನಾಟಕ ಅತ್ಯಂತ ಸುಂದರ ಮತ್ತು ರಮಣೀಯ ಪ್ರದೇಶವಾಗಿದೆ. ಕನ್ನಡ ನಾಡನ್ನು ಶ್ರೀಮಂತಗೊಳಿಸಿದ ರಾಜ ಮಹಾರಾಜರು, ಹಿರಿಯ ಚಲನಚಿತ್ರ ನಟರು ಹಾಗೂ ಜ್ಞಾನಪೀಠ ಪ್ರಶಸ್ತಿ ಪಡೆದ ಖ್ಯಾತ ಕವಿಗಳು ಜನಿಸಿದ್ದ ನಾಡಲ್ಲಿ ಜನಿಸಿದ ನಾವು ಅತ್ಯಂತ ಪುಣ್ಯವಂತರು ಎಂದರು.
ನಮ್ಮ ರಾಜ್ಯದಲ್ಲಿ ದೊಡ್ಡ ದೊಡ್ಡ ಕಂಪನಿಗಳಿವೆ. ಇಂತಹ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಹೆಚ್ಚಿನ ಪ್ರಾಶಸ್ಯ ನೀಡಬೇಕು. ಈ ಬಗ್ಗೆ ಸರ್ಕಾರದ ಜತೆ ಚರ್ಚಿಸುವುದಾಗಿ ಹೇಳಿದರು.ವಿರೋಧ ಪಕ್ಷಗಳು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರದಲ್ಲಿ ನಿರತವಾಗಿದ್ದು, ಗ್ಯಾರಂಟಿಗಳು ನಿಲ್ಲಲ್ಲ ಎಂದು ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟಪಡಿಸಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ವಿಪಕ್ಷದವರ ಅಪಪ್ರಚಾರಕ್ಕೆ ಕಿವಿಗೊಡಬೇಡಿ ಎಂದು ಮನವಿ ಮಾಡಿದರು.ಪುರಸಭೆ ಅಧ್ಯಕ್ಷ ಪಿ.ಎಚ್.ರಾಜೇಶ್ ಮಾತನಾಡಿ, ಕನ್ನಡ ಉಳಿಸಿ ಬೆಳೆಸುವತ್ತ ನಮ್ಮೆಲ್ಲರ ಪ್ರಯತ್ನವಿರಬೇಕು. ನಮ್ಮ ಮೊದಲ ಆದ್ಯತೆ ಕನ್ನಡಕ್ಕೆ ಎಂದ ಅವರು, ನಾನು ಭಾಷಣಕಾರನಲ್ಲ, ಕೆಲಸಗಾರ. ಪುರಸಭೆಯ ಇತಿಮಿತಿಯಲ್ಲಿ ಸಾರ್ವಜನಿಕರ ಕೆಲಸಕ್ಕೆ ಸದಾ ಬದ್ಧರಿರುವುದಾಗಿ ಹೇಳಿ 69ನೇ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದರು.
ಪತ್ರಿಕಾರಂಗದಿಂದ ಸಂತೋಷ್ಕುಮಾರ್, ರಾಮಕೃಷ್ಣನಾಯಕ್, ಮೀನಗುಂಟೆನಹಳ್ಳಿ ಎಂ.ಕೆ.ನರಸಿಂಹಪ್ಪ, ಕ್ರೀಡಾಕ್ಷೇತ್ರದಿಂದ ನಂದೀಶ್ನಾಯ್ಕ್ ಹಾಗೂ ಪಾಳೇಗಾರ ಲೋಕೇಶ್, ಸಮಾಜ ಸೇವೆಯಿಂದ ಷಾ ಬಾಬು (ಷರೀಫ್) ಡಿಎಸ್ಎಸ್ ಜಿಲ್ಲಾ ಸಂಘಟನೆ ಸಂಚಾಲಕ ಸಿ.ಕೆ.ತಿಪ್ಪೇಸ್ವಾಮಿ,ಎಸ್ಡಿಎಂಸಿ ಅಧ್ಯಕ್ಷ ಪ್ರಕಾಶ್, ಜಾನಪದ ಕ್ಷೇತ್ರದಿಂದ ವೀರ್ಲಗೊಂದಿಯ ಹನುಮಕ್ಕ ಸೇರಿದಂತೆ ತಾಲೂಕಿನ 30 ಜನ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದ ಸಾಧಕರಿಗೆ ಹಾಗೂ ಕನ್ನಡ ಭಾಷೆಯಲ್ಲಿ ಅತೀಹೆಚ್ಚು ಅಂಕ ಗಳಿಸಿದ ತಾಲೂಕಿನ ಕೋಡಿಗೇನಹಳ್ಳಿಯ ಬಿಸಿಎಂ ಮುರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಮತ್ತು ಶಿಕ್ಷಕರನ್ನು ತಾಲೂಕು ಆಡಳಿತದಿಂದ ಸನ್ಮಾನಿಸಿ ಗೌರವಿಸಲಾಯಿತು.