ಕನ್ನಡಪ್ರಭ ವಾರ್ತೆ ಬೀದರ್
ನೌಬಾದ್ ಹತ್ತಿರದ ಶ್ರೀ ಔದುಂಬರಲಿಂಗ ಮಲ್ಲಿನಾಥ ಆಶ್ರಮದಲ್ಲಿ ಜೈ ಭಾರತ ಮಾತಾ ಸೇವಾ ಸಮಿತಿಯಿಂದ ಹಮ್ಮಿಕೊಂಡಿದ್ದ ನೇತಾಜಿ ಸುಭಾಷಚಂದ್ರ ಬೋಸ್ ಅವರ ಜಯಂತಿ ಉತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ, ಬೋಸ್ ಅವರು ಸ್ವಾತಂತ್ರ್ಯ ಚಳುವಳಿಯ ಕಿಚ್ಚು ಹೆಚ್ಚಿಸಿ ಹೊಸ ಶಕ್ತಿ ತುಂಬಿದ್ದರು ಎಂದರು.
ಬ್ರಿಟೀಷರ ನಿದ್ದೆಗೆಡಿಸಿದ ಕ್ರಾಂತಿಕಾರಿ ಹೋರಾಟಗಾರರಲ್ಲಿ ಬೋಸ್ ಒಬ್ಬರು. ಅವರ ತತ್ವಾದರ್ಶ, ರಾಷ್ಟ್ರಪ್ರೇಮ ಇಂದಿನ ಯುವಕರಿಗೆ ಆದರ್ಶವಾಗಿವೆ. ಯುವಕರು ಬೋಸ್ ಅವರ ಜೀವನ ಚರಿತ್ರೆಯನ್ನು ಓದಿ ಪ್ರೇರಣೆ ಪಡೆಯಬೇಕು ಎಂದು ಕರೆ ನೀಡಿದರು.ಹಿರಿಯ ಪತ್ರಕರ್ತ ಸದಾನಂದ ಜೋಶಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ಪಡೆಯುವಲ್ಲಿ ಅಹಿಂಸೆ ಜತೆಗೆ ಹಿಂಸಾತ್ಮಕ ಹೋರಾಟ ಸಹ ಪ್ರಮುಖ ಪಾತ್ರ ವಹಿಸಿದೆ. ಮಹಾತ್ಮ ಗಾಂಧೀಜಿ ಅವರು ಅಹಿಂಸಾ ಮಾರ್ಗದಿಂದ ಹೋರಾಟಕ್ಕೆ ಧುಮುಕಿದರೆ, ಭಗತ್ ಸಿಂಗ್, ಚಂದ್ರಶೇಖರ ಆಜಾದ್, ಬೋಸ್ ಇತರರು ಕ್ರಾಂತಿಕಾರಿ ವಿಚಾರ ಧಾರೆಯಿಂದ ಮುಂದುವರಿದರು. ದೇಶದ ಸ್ವಾತಂತ್ರ್ಯಕ್ಕೆ ಶಾಂತಿ ಮತ್ತು ಕ್ರಾಂತಿ ಸಮ್ಮಿಲನಕ್ಕೆ ಕಾರಣವಾಯಿತು. ದೇಶದ ಹಿತಕ್ಕಾಗಿ ಅಗತ್ಯಬಿದ್ದಾಗ ಶಸ್ತ್ರವೂ ಹಿಡಿಯಬೇಕು ಎಂಬ ನಮ್ಮ ಪೂರ್ವಜರ, ಹೋರಾಟಗಾರರ ಚಿಂತನೆ ಇಂದಿಗೂ ಅನುಕರಣೀಯವಾಗಿವೆ ಎಂದು ಹೇಳಿದರು.
ಜೈ ಭಾರತ ಮಾತಾ ಸೇವಾ ಸಮಿತಿ ಸಂಸ್ಥಾಪಕರಾದ ಸದ್ಗುರು ಶ್ರೀ ಹವಾ ಮಲ್ಲಿನಾಥ ಮಹಾರಾಜರು ದೇಶಾದ್ಯಂತ ಅವಿರತವಾಗಿ ಸಂಚರಿಸುತ್ತ ಜನರಲ್ಲಿ ದೇಶಭಕ್ತಿಯನ್ನು ಜಾಗೃತಗೊಳಿಸುತ್ತಿದ್ದಾರೆ ಎಂದರು.