ಭದ್ರಾ ಮೇಲ್ದಂಡೆಗೆ ಉದಾಸೀನ ತೋರಿತ್ತಿರುವ ಉಭಯ ಸರ್ಕಾರ

KannadaprabhaNewsNetwork |  
Published : Jun 19, 2024, 01:00 AM IST
ಚಿತ್ರದುರ್ಗ ಎರಡನೇ ಪುಟದ ಲೀಡ್  | Kannada Prabha

ಸಾರಾಂಶ

ಚಿತ್ರದುರ್ಗದಲ್ಲಿ ಬುಧವಾರ ನಡೆದ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಸಭೆಯಲ್ಲಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಾತನಾಡಿದರು.

ಕನ್ನಡಪ್ರಭವಾರ್ತೆ ಚಿತ್ರದುರ್ಗ

ಭದ್ರಾ ಮೇಲ್ದಂಡೆ ಕಾಮಗಾರಿಗೆ ಚುರುಕಿನ ವೇಗ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಂದಿನಂತೆ ಉದಾಸೀನ ಮನೋಭಾವ ತಾಳಿದ್ದು, ಹೋರಾಟ ತೀವ್ರಗೊಳಿಸುವುದು ಅನಿವಾರ್ಯವೆಂದು ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಹೇಳಿದರು.

ಮಂಗಳವಾರ ನಡೆದ ಸಮಿತಿ ಸಭೆಯಲ್ಲಿ ಮಾತನಾಡಿ, ಲೋಕಸಭೆ ಚುನಾವಣೆ ಎದುರಾದ ಹಿನ್ನಲೆಯಲ್ಲಿ ಸಹಜವಾಗಿ ಹೋರಾಟದಿಂದ ಹಿಂದೆ ಸರಿದಿದ್ದೆವು. ಚುನಾವಣೆ ಮುಗಿದ ಬಳಿಕ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ಬಗ್ಗೆ ಪ್ರಸ್ತಾಪ ಮಾಡುತ್ತಿಲ್ಲ. ಅನುದಾನ ಬಿಡುಗಡೆಗೂ ಮುಂದಾಗಿಲ್ಲ. ಇದೇ ನಿರ್ಲಕ್ಷ್ಯ ಮುಂದುವರಿದರೆ ಯೋಜನೆ ಮುಗಿಯುವಲ್ಲಿ ಮತ್ತೊಂದು ದಶಕ ಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಕೊಟ್ಟ ಮಾತಿನಂತೆ 5,300 ಕೋಟಿ ರು. ಅನುದಾನ ಬಿಡುಗಡೆ ಮಾಡಿಲ್ಲ. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದರಲ್ಲಿಯೇ ಕಾಲ ಕಳೆಯುತ್ತಿದೆ. ನಾವು ಗ್ಯಾರಂಟಿ ಯೋಜನೆ ವಿರೋದಿಸುವುದಿಲ್ಲ, ಆದರೆ ನೀರಾವರಿ ಯೋಜನೆ ಕಾಲಮಿತಿಯಲ್ಲಿ ಮುಗಿಸುವುದು ಸರ್ಕಾರದ ಕರ್ತವ್ಯವೆಂಬುದನ್ನು ನೆನಪು ಮಾಡಿಕೊಡುತ್ತಿದ್ದೇವೆ ಎಂದರು.

ಅಬ್ಬಿನ ಹೊಳಲು ಭೂ ಸ್ವಾಧೀನ ಪ್ರಕ್ರಿಯೆ ಸಮಸ್ಯೆ ಮುಗಿದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದರು. ಆದರೆ ಕಾಲುವೆ ನಿರ್ಮಾಣದ ಕಾಮಗಾರಿ ಮುಗಿದಿದೆಯಾ ಎಂಬ ಬಗ್ಗೆ ಇದುವರೆಗೂ ಇಲಾಖೆಯಿಂದ ಸಮಜಾಯಿಷಿ ನೀಡಲಾಗಿಲ್ಲ. ಅಧಿಕಾರಿಗಳು ಕೂಡ ಭೂ ಸ್ವಾಧೀನದ ಬಗ್ಗೆ ವಾಸ್ತವಾಂಶಗಳ ಬಹಿರಂಗಗೊಳಿಸಿಲ್ಲ. ಭೂ ಸ್ವಾಧೀನವನ್ನೇ ದೊಡ್ಡ ಸಮಸ್ಯೆನ್ನಾಗಿ ಮಾಡಿ ಯೋಜನೆಯ ಮೂಲೆ ಗುಂಪಾಗಿ ಮಾಡುವ ಹುನ್ನಾರಗಳು ನಡೆಯುತ್ತಿವೆಯೇ ಎಂಬ ಬಗ್ಗೆ ಅನುಮಾ ಮೂಡಿವೆ ಎಂದರು.

ನೂತನವಾಗ ಸಂಸದರಾದ ಗೋವಿಂದ ಕಾರಜೋಳ ಅವರು ಈ ಮೊದಲು ಜಲಸಂಪನ್ಮೂಲ ಸಚಿವರಾಗಿದ್ದರು. ಅವರಿಗೆ ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಅರಿವಿದೆ. ಕೇಂದ್ರದಿಂದ 5300 ಕೋಟಿ ರು. ಅನುದಾನ ಬಿಡುಗಡೆಯಾಗಬೇಕಿದೆ. ಹಾಗಾಗಿ ಬುಧವಾರ ನೀರಾವರಿ ಅನುಷ್ಠಾನ ಸಮಿತಿಯಿಂದ ಗೋವಿಂದ ಕಾರಜೋಳ ಅವರ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದರು.

ಕೇಂದ್ರದಲ್ಲಿ ನೂತನ ಸಚಿವರಾಗಿ ಮಧ್ಯ ಕರ್ನಾಟಕ ಪ್ರತಿನಿಧಿಸುತ್ತಿರುವ ವಿ.ಸೋಮಣ್ಣ ಅವರನ್ನು ಹೋರಾಟ ಸಮಿತಿ ಸಂಪರ್ಕಿಸಲು ಮುಂದಾಗಿದೆ. ಜೂ.24 ರಿಂದ ಲೋಕಸಭೆ ಅಧಿವೇಶನ ಆರಂಭವಾಗಲಿದೆ. ಅಷ್ಟರೊಳಗೆ ಸಚಿವರ ಭೇಟಿಯಾಗಿ ಭದ್ರಾ ಮೇಲ್ದಂಡೆಗೆ ಅನುದಾನ ಬಿಡುಗಡೆಗೆ ಯತ್ನಿಸುವಂತೆ ಕೋರಲಾಗುವುದು. ಇದೇ ಪ್ರಸ್ತಾಪ ಸಂಸದ ಗೋವಿಂದ ಕಾರಜೋಳ ಅವರ ಮುಂದೆ ಮಂಡಿಸಲಾಗುವುದೆಂದರು.

ಭದ್ರಾ ಮೇಲ್ದಂಡೆಗೆ ಆಗ್ರಹಿಸಿ ಇದುವರೆಗೆ ನಾಲ್ಕು ತಾಲೂಕುಗಳ ಬಂದ್ ಮಾಡಲಾಗಿದೆ. ಶೀಘ್ರ ಮೊಳಕಾಲ್ಮೂರು ಹಾಗೂ ಹೊಸದುರ್ಗ ಬಂದ್ ಗೆ ಕರೆ ನೀಡಲಾಗುವುದು. ರಾಜ್ಯ ಸರ್ಕಾರ ಬಯಲು ಸೀಮೆ ಜನರ ತಾಳ್ಮೆ ಪರೀಕ್ಷಿಸದೆ ಭದ್ರಾ ಮೇಲ್ದಂಡೆಗೆ ಚುರುಕಿನ ವೇಗ ನೀಡಬೇಕೆಂದು ಲಿಂಗಾರೆಡ್ಡಿ ಆಗ್ರಹಿಸಿದರು.

ಈ ವೇಳೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ, ಜಿಲ್ಲಾ ಕಾರ್ಯಾಧ್ಯಕ್ಷ ಕೆ.ಸಿ.ಹೊರಕೇರಪ್ಪ, ತಾಲೂಕು ಅಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ, ಮಹಿಳಾ ಘಟಕದ ಅಧ್ಯಕ್ಷೆ ದೊಡ್ಡ ಸಿದ್ದವ್ವನಹಳ್ಳಿ ಸುಧ, ನೀರಾವರಿ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ.ಆರ್.ದಯಾನಂದ, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ಹುಣಿಸೆಕಟ್ಟ ಕಾಂತರಾಜ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ