)
ಕುಂದಗೋಳ:
ಏನಾಗಿತ್ತು?
ತಾಲೂಕಿನ ನೆಲಗುಡ್ಡ ಗ್ರಾಮದಲ್ಲಿ ಮನೆಯಲ್ಲಿ ಒಬ್ಬನೇ ಇದ್ದ ಬಾಲಕನಿಗೆ ಅಪರಿಚಿತರು ಏಕಾಏಕಿ ಒಳಗೆ ನುಗ್ಗಿ ಯಾವುದೋ ಇಂಜೆಕ್ಷನ್ ಚುಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ. ಇದರಿಂದ ಆತ ಕೆಲಕಾಲ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದನಂತೆ. ಆ ಬಳಿಕ ಪಾಲಕರು ಆತನನ್ನು ತಾಲೂಕಾಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಹುಬ್ಬಳ್ಳಿ ಕೆಎಂಸಿಆರ್ಐಗೆ ಸ್ಥಳಾಂತರಿಸಲಾಗಿತ್ತು. ಬಾಲಕನ ಆರೋಗ್ಯ ಸ್ಥಿರವಾಗಿದ್ದು, ಚೇತರಿಸಿಕೊಂಡಿದ್ದಾನೆ. ಆತನ ರಕ್ತದ ಪರೀಕ್ಷೆಗೆ ಕಳುಹಿಸಲಾಗಿದೆ. ಆದರೆ, ಯಾವ ಇಂಜೆಕ್ಷನ್ ಚುಚ್ಚಿದ್ದಾರೆ ಎಂಬುದು ತಿಳಿದು ಬಂದಿಲ್ಲವೆಂದು ಕೆಎಂಸಿಆರ್ಐನ ನಿರ್ದೇಶಕ ಡಾ. ಈಶ್ವರ ಹೊಸಮನಿ ತಿಳಿಸಿದ್ದಾರೆ.ದೂರು ಕೊಟ್ಟಿಲ್ಲ:
ಈ ನಡುವೆ ಬಾಲಕನ ಆರೋಗ್ಯ ಸ್ಥಿರವಾಗಿದೆ. ಆದರೆ, ಚುಚ್ಚುಮದ್ದು ನೀಡಿರುವ ಗುರುತು ಕಂಡು ಬಂದಿಲ್ಲ. ಆದರೂ ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾ ಕುಟುಂಬ ಕಲ್ಯಾಣ ಮತ್ತು ಆರೋಗ್ಯಾಧಿಕಾರಿ ಡಾ. ಎಸ್.ಎಂ. ಹೊನಕೇರಿ ತಿಳಿಸಿದ್ದಾರೆ.
ಈ ನಡುವೆ ಗ್ರಾಮದಲ್ಲಿ ಮನೆಯಲ್ಲಿ ಒಬ್ಬನೇ ಇದ್ದ ಬಾಲಕನಿಗೆ ಚುಚ್ಚು ಮದ್ದು ನೀಡಿ ಪರಾರಿಯಾಗಿರುವ ಪ್ರಕರಣ ಜಿಲ್ಲೆಯಲ್ಲಿ ಆತಂಕವನ್ನುಂಟು ಮಾಡಿದೆ. ಹೀಗೆ ಬಂದವರು ಯಾರು? ಯಾಕೆ ಬಾಲಕನಿಗೆ ಚುಚ್ಚುಮದ್ದು ನೀಡಿದ್ದಾರೆ. ಏನಿದರ ಉದ್ದೇಶ? ಯಾವ ಬಗೆಯ ಚುಚ್ಚುಮದ್ದು ನೀಡಿದ್ದಾರೆ ಎಂಬುದೆಲ್ಲವೂ ಪೊಲೀಸ್ ತನಿಖೆ ಬಳಿಕವೇ ಹೊರಬರಲಿದೆ.