ಹೊಸಪೇಟೆ:
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಸಿನವರಿಗೆ ಬಾಬರ್ ಮೇಲೆ ಬಲು ಪ್ರೀತಿ ಇದೆ. ಹಿಂದೂಗಳ ಆರಾಧ್ಯ ದೈವ ರಾಮನ ಮೇಲೆ ಪ್ರೀತಿ ಇಲ್ಲ. ಶ್ರೀರಾಮ ಮಂದಿರ ಧ್ವಂಸ ಮಾಡಿದ ಬಾಬರ್ನ ಸಮಾಧಿಗೆ ಕಾಂಗ್ರೆಸ್ನವರು ಭೇಟಿ ನೀಡುತ್ತಾರೆ. ಆದರೆ, ಶ್ರೀರಾಮಮಂದಿರ ಉದ್ಘಾಟನೆಗೆ ಬರುತ್ತಿಲ್ಲ. ಇವರು ಯಾವತ್ತಿದ್ದರೂ ಡೋಂಗಿ ಜಾತ್ಯತೀತವಾದಿಗಳು. ಜಾತ್ಯತೀತತೆಯ ಮೇಲೆ ರಾಜಕಾರಣ ಮಾಡುತ್ತಾ ಈಗ ಶ್ರೀರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಉಳಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೊಘಲ್ ದೊರೆ ಬಾಬರ್ನ ಮೇಲೆ ಪ್ರೀತಿ ಇರುವುದರಿಂದಲೇ 1952ರ ಸೆಪ್ಟೆಂಬರ್ನಲ್ಲಿ ಪಂಡಿತ ಜವಾಹರ್ ಲಾಲ್ ನೆಹರು ಬಾಬರ್ ಸಮಾಧಿಗೆ ಭೇಟಿ ನೀಡಿದ್ದರು. ಬಳಿಕ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ಹಾಗೂ ರಾಹುಲ್ ಗಾಂಧಿ ಅವರು ಬಾಬರ್ ಸಮಾಧಿಗೆ ಭೇಟಿ ನೀಡಿದ್ದರು ಎಂದು ಕುಟುಕಿದರು.ಶ್ರೀರಾಮಮಂದಿರ ನಿರ್ಮಾಣಕ್ಕಾಗಿ 500 ವರ್ಷಗಳ ಸುದೀರ್ಘ ಹೋರಾಟದ ಇತಿಹಾಸ ಇದೆ. ಸೋಮನಾಥ ದೇವಾಲಯದ ಉದ್ಘಾಟನೆ ವೇಳೆಯೂ ಕಾಂಗ್ರೆಸ್ ಬಹಿಷ್ಕಾರ ಮಾಡಿತ್ತು. ಈಗ ಶ್ರೀರಾಮಮಂದಿರ ಉದ್ಘಾಟನೆ ವೇಳೆಯೂ ಇದೇ ನಿಲುವು ತಾಳಿದೆ. ಕಾಂಗ್ರೆಸ್ ನಾಯಕರು ಡೋಂಗಿ ಜಾತ್ಯತೀತ ರಾಜಕಾರಣ ಮಾಡುತ್ತಾ ಬರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲೋಕಸಭೆ, ರಾಜ್ಯಸಭೆಗೆ ಸಂಸದರು ಗೈರಾಗುವುದನ್ನು ಕಂಡಿದ್ದೇವೆ. ಆದರೆ, ಅಯೋಧ್ಯೆ ಶ್ರೀರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಒಂದು ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್ ಗೈರಾಗುತ್ತಿರುವುದು ಶೋಭೆ ತರುವ ವಿಷಯವಲ್ಲ. ದೇಶದಲ್ಲಿ ರಾಮಜಪವನ್ನು ವಿರೋಧ ಮಾಡುತ್ತಿರುವುದು ಸರಿಯಲ್ಲ. ಪಿ.ವಿ. ನರಸಿಂಹರಾವ್ ಅವರ ಅವಧಿಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಚಾಲನೆ ನೀಡಲಾಗಿತ್ತು ಎಂಬುದು ಸುಳ್ಳು. ಆಗ ಕರಸೇವಕರ ಮೇಲೆ ದೇಶಾದ್ಯಂತ ಪ್ರಕರಣ ದಾಖಲಿಸಲಾಗಿತ್ತು. ಈಗ ರಾಜ್ಯದಲ್ಲೂ ಕರಸೇವಕರನ್ನು ಬಂಧನ ಮಾಡಲಾಗುತ್ತಿದೆ. ಇಂತಹ ದ್ವೇಷದ ರಾಜಕಾರಣ, ಒಳ್ಳೆಯದಲ್ಲ. ಮುಂದಿನ ದಿನಗಳಲ್ಲಿ ರಾಜ್ಯದ ಜನರು ತಕ್ಕಪಾಠ ಕಲಿಸುತ್ತಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲಿನಿಂದಲೂ ನಾಸ್ತಿಕರು. ಅವರು ದೇವರನ್ನು ನಂಬಲ್ಲ. ಅಲ್ಲಲ್ಲಿ, ಆಗಾಗ ಸಾರ್ವಜನಿಕವಾಗಿ ದೇವಸ್ಥಾನಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಹಾಗಾಗಿ ಮುಜರಾಯಿ ಇಲಾಖೆ ಜನವರಿ 22ರಂದು ರಾಜ್ಯ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಹೊರಡಿಸಿರುವ ಆದೇಶ ತಮಗೆ ಗೊತ್ತಿಲ್ಲ ಎಂದಿರುತ್ತಾರೆ.
ಮುಖಂಡರಾದ ಕಾಸಟ್ಟಿ ಉಮಾಪತಿ, ಸಾಲಿಸಿದ್ದಯ್ಯಸ್ವಾಮಿ, ದೇವರಮನಿ ಶ್ರೀನಿವಾಸ್, ನಗರಸಭೆ ಸದಸ್ಯರಾದ ತಾರಿಹಳ್ಳಿ ಜಂಬುನಾಥ, ಹನುಮಂತಪ್ಪ ಬುಜ್ಜಿ ಮತ್ತಿತರರಿದ್ದರು.ರೆಡ್ಡಿ ಕುಟುಂಬದ ಬಗ್ಗೆ ಅಪಾರ ಗೌರವವಿದೆ: ಶ್ರೀರಾಮುಲು
ರೆಡ್ಡಿಯವರಿಗೆ ಜನ್ಮದಿನದ ಶುಭಾಶಯ ಕೋರುವೆ. ಜನಾರ್ದನ ರೆಡ್ಡಿಯವರಿಗೆ ಒಳ್ಳೆಯದಾಗಲಿ. ಅವರು ಬಿಜೆಪಿಗೆ ಮರಳಿದರೆ ನನ್ನ ಅಭ್ಯಂತರವೇನಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.