ಶ್ರೀ ಕ್ಷೇತ್ರ ನಡ್ಯೋಡಿಯಲ್ಲಿ ಬ್ರಹ್ಮಕಲಶೋತ್ಸವ ಸಂಭ್ರಮ

KannadaprabhaNewsNetwork |  
Published : Mar 01, 2025, 01:00 AM IST
32 | Kannada Prabha

ಸಾರಾಂಶ

ಮಾರ್ಪಾಡಿ-ಕಲ್ಲಬೆಟ್ಟು ನಡ್ಯೋಡಿ ಶ್ರೀ ನಾಗಬ್ರಹ್ಮ, ಶ್ರೀ ಕೊಡಮಣಿತ್ತಾಯ, ಶ್ರೀ ಕುಕ್ಕಿನಂತಾಯ, ಶ್ರೀ ಬೈದರ್ಕಳ ಹಾಗೂ ಮಾಯಂದಲೆ ದೇವಿಯ ಕ್ಷೇತ್ರದಲ್ಲಿ ನಾಲ್ಕನೇ ಬ್ರಹ್ಮಕಲಶೋತ್ಸವ ಶುಕ್ರವಾರ ನೆರವೇರಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಸುಮಾರು ನಾಲ್ಕು ಶತಮಾನಗಳ ಇತಿಹಾಸವಿರುವ ಮಾರ್ಪಾಡಿ-ಕಲ್ಲಬೆಟ್ಟು ನಡ್ಯೋಡಿ ಶ್ರೀ ನಾಗಬ್ರಹ್ಮ, ಶ್ರೀ ಕೊಡಮಣಿತ್ತಾಯ, ಶ್ರೀ ಕುಕ್ಕಿನಂತಾಯ, ಶ್ರೀ ಬೈದರ್ಕಳ ಹಾಗೂ ಮಾಯಂದಲೆ ದೇವಿಯ ಕ್ಷೇತ್ರದಲ್ಲಿ ನಾಲ್ಕನೇ ಬ್ರಹ್ಮಕಲಶೋತ್ಸವ ಶುಕ್ರವಾರ ನೆರವೇರಿತು.

ಮಾರೂರು ಖಂಡಿಗ ರಾಮದಾಸ ಆಸ್ರಣ್ಣ ಪೌರೋಹಿತ್ಯದಲ್ಲಿ ಶುಕ್ರವಾರ ಶ್ರೀ ಮಾಯಂದಲೆ ದೇವಿಯ ಮೂರ್ತಿ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ಸಹಿತ ವಿವಿಧ ಕಾರ್ಯಕ್ರಮಗಳು ನಡೆದವು. ಸಂಜೆ ದೈವದ ಗಗ್ಗರ ಸೇವೆ, ನೂತನ ರಾಜಗೋಪುರ ಲೋಕಾರ್ಪಣೆ, ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿತು. ಉತ್ಸವದ ಪ್ರಯುಕ್ತ ಮಂಗಳವಾರ ಕೋಟೆಬಾಗಿಲು ಶ್ರೀ ವೀರ ಮಾರುತಿ ದೇವಸ್ಥಾನದಿಂದ ಶ್ರೀಕ್ಷೇತ್ರ ನಡ್ಯೋಡಿಯವರೆಗೆ ಹಸಿರು ಹೊರೆಕಾಣಿಕೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ, ಬುಧವಾರ ಭಂಡಾರಕೊಟ್ಟಿಗೆ ಗುತ್ತಿನಿಂದ ಶ್ರೀ ದೈವಗಳ ಭಂಡಾರ ಹೊರಟಿತು. ಗುರುವಾರ ಬ್ರಹ್ಮಕಲಶದ ಪೂರ್ವಭಾವಿಯಾಗಿ ಮಂಡಲ ರಚನೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ದಿಲೀಪ್ ಕುಮಾರ್ ಶೆಟ್ಟಿ, ಗೌರವಾಧ್ಯಕ್ಷ ಎಂ.ಪುರುಷೋತ್ತಮ ಶೆಟ್ಟಿ, ಯುವರಾಜ್ ಜೈನ್, ಐತಪ್ಪ ಆಳ್ವ, ಉದಯ ಕುಮಾರ್ ಜೈನ್, ದಾಸಣ್ಣ ಶೆಟ್ಟಿ, ಚಿನ್ನಯ ಕೋಟ್ಯಾನ್, ಆನಂದ ಕುಮಾರ್, ಉಪಾಧ್ಯ÷ಕ್ಷರಾದ ಸುರೇಶ್ ಕೋಟ್ಯಾನ್, ವಿಶ್ವನಾಥ ಕೋಟ್ಯಾನ್, ದಿನೇಶ್ ಶೆಟ್ಟಿ, ಕಾರ್ಯದರ್ಶಿ ಪ್ರಸನ್ನ ಹೆಗ್ಡೆ, ಕೋಶಾಧಿಕಾರಿ ಸುಧೀಶ್ ಹೆಗ್ಡೆ ಸಹಿತ ಪದಾಧಿಕಾರಿಗಳು, ದೈವಸ್ಥಾನದ ಸೇವಾ ಸಮಿತಿ ಅಧ್ಯಕ್ಷ ಪ್ರದೀಪ್ ರೈ, ಕಾರ್ಯದರ್ಶಿ ಯತೀಶ್ ಕೋಟ್ಯಾನ್, ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ಶೈಲೇಶ್ ಶೆಟ್ಟಿ ಸಹಿತ ಪದಾಧಿಕಾರಿಗಳು, ಗುತ್ತು, ಬರ್ಕೆ ಹಾಗೂ ಭಕ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೋಟೆಲ್‌ಗೆ ನಿತ್ಯ 1000 ಸಿಲಿಂಡರ್‌- ಪ್ರತಿದಿನ ರಾಜ್ಯಕ್ಕೆ 44000 ವಾಣಿಜ್ಯ ಸಿಲಿಂಡರ್‌ ಬೇಕು
ಗ್ಯಾರೇಜ್‌ ಮೆಕಾನಿಕ್‌ ಕೊಲೆ ಕೇಸ್‌: 7 ಆರೋಪಿಗಳ ಸೆರೆ