12ರಿಂದ ಬಂಟ್ವಾಳ ಶ್ರೀ ವೆಂಕಟರಮಣ ದೇವಳ ಬ್ರಹ್ಮ ರಥೋತ್ಸವ

KannadaprabhaNewsNetwork |  
Published : Mar 09, 2024, 01:30 AM IST
ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಮಾ.12-17 ರ ವರೆಗೆ ಬ್ರಹ್ಮ ರಥೋತ್ಸವ (2024) ಕಾರ್ಯಕ್ರಮ | Kannada Prabha

ಸಾರಾಂಶ

ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ 200 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜೃಂಭಣೆಯ ಉತ್ಸವಾದಿ ಕಾರ್ಯಕ್ರಮಗಳು ಮಾ.12ರಿಂದ್ರ್ಚ್ 17ರ ವರೆಗೆ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರರಾದ ಅಶೋಕ್ ಶೆಣೈ ಹೇಳಿದರು.

ಕನ್ನಡಪ್ರಭ ವಾರ್ತೆ ಬಂಟ್ವಾಳ

ಗೌಡ ಸಾರಸ್ವತ ಬ್ರಾಹ್ಮಣ ವೃಂದದವರ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ 200 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜೃಂಭಣೆಯ ಉತ್ಸವಾದಿ ಕಾರ್ಯಕ್ರಮಗಳು ಮಾ.12ರಿಂದ್ರ್ಚ್ 17ರ ವರೆಗೆ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರರಾದ ಅಶೋಕ್ ಶೆಣೈ ಹೇಳಿದರು.ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕಾರ್ಯಕ್ರಮಗಳಿಗೆ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಮಾ.10ರಂದು ಆಗಮಿಸಿ 17ರ ವರೆಗೆ ಬಂಟ್ವಾಳದಲ್ಲಿ ಉಪಸ್ಥಿತರಿರುವರು. ಶ್ರೀಗಳ ಆಜ್ಞಾನುಸಾರ ಕಾರ್ಯಕ್ರಮಗಳು ನಡೆಯಲಿವೆ. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಎಲ್ಲ ಕಾರ್ಯಕ್ರಮಗಳಲ್ಲಿ ಸಹಭಾಗಿಗಳಾಗಿ ಶ್ರೀಹರಿಗುರುಕೃಪೆಗೆ ಪಾತ್ರರಾಗಬೇಕು ಎಂದವರು ವಿನಂತಿಸಿದರು.

* 16ರಂದು ಬ್ರಹ್ಮರಥೋತ್ಸವ:

ಮಾ.16ರಂದು 200ನೇ ವರ್ಷಾಚರಣೆಯ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ 4.30ಕ್ಕೆ ಯಜ್ಞಾರತಿ, ಪೂರ್ಣಾಹುತಿ ಬಲಿ ಬಳಿಕ ಸಂಜೆ 5.30ಕ್ಕೆ ಬ್ರಹ್ಮರಥಾರೋಹಣ, ಸಮಾರಾಧನೆ, ರಾತ್ರಿ 1 ಗಂಟೆಗೆ ಬ್ರಹ್ಮರಥೋತ್ಸವ ನಡೆಯಲಿದೆ. ಮಾ.17ರಂದು ಶ್ರೀಗಳಿಂದ ಸಭಾ ಕಾರ್ಯಕ್ರಮ ಪ್ರವಚನ ನಡೆಯಲಿದೆ. ಅವಭೃತೋತ್ಸವ ಕಾರ್ಯಕ್ರಮಗಳು ಅಂದು ನಡೆಯಲಿವೆ. ದೇವಳ ವತಿಯಿಂದ ನಡೆಯುತ್ತಿರುವ ಶಾಲೆಗೆ ಎರಡು ಬಸ್‌ಗಳನ್ನು ಈ ಸಂದರ್ಭ ಕೊಡುಗೆಯಾಗಿ ನೀಡಲಾಗುವುದು. ರಥೋತ್ಸವ ಕಾರ್ಯಕ್ರಮದ ಅಂಗವಾಗಿ ವಿಶೇಷವಾಗಿ ಪಟ್ಟದ ದೇವರಿಗೆ 50 ಪವನ್ ಚಿನ್ನ ಹಾಗೂ ಉತ್ಸವ ಮೂರ್ತಿಗೆ 50 ಪವನ್ ಚಿನ್ನ, ಕಾಶಿಮಠಕ್ಕೆ ಚಿನ್ನದ ಸರ ಹಾಗೂ ಬ್ರಹ್ಮರಥಕ್ಕೆ 10 ಕೆ.ಜಿ. ಬೆಳ್ಳಿಯ ಪ್ರಭಾವಳಿ ನೀಡಲಾಗುತ್ತದೆ.ಶೈಕ್ಷಣಿಕವಾಗಿಯೂ ಅನೇಕ ಕೊಡುಗೆಗಳನ್ನು ಕ್ಷೇತ್ರದ ವತಿಯಿಂದ ನೀಡುತ್ತಿದ್ದು, ಈಗಾಗಲೇ ಪ್ರಾಥಮಿಕ ಹಾಗೂ ಹೈಸ್ಕೂಲ್ ವರೆಗೆ ಶಿಕ್ಷಣ ನೀಡಲಾಗುತ್ತಿದೆ. ಮುಂದಿನ ಅವಧಿಯಲ್ಲಿ ಪಿ.ಯು. ಕಾಲೇಜು ಆರಂಭಿಸಲಿದ್ದೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮೊಕ್ತೇಸರರಾದ ಭಾಮಿ ನಾಗೇಂದ್ರನಾಥ ಶೆಣೈ, ಬಿ.ಸುರೇಶ್ ಬಾಳಿಗಾ, ಪ್ರಮುಖರಾದ ವಸಂತ ಪ್ರಭು, ಶಿವಾನಂದ ಬಾಳಿಗಾ, ಬಸ್ತಿ ಮಾಧವ ಶೆಣೈ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ