ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಇದೇ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳಿಂದ ಬೆಂಗಳೂರು ನಗರಕ್ಕೆ ಕೆಲಸದ ನಿಮಿತ್ತ ಆಗಮಿಸುವ ಮಹಿಳೆಯರಿಗೆ ಭದ್ರತೆ ನೀಡಲು ಸಮಾಜದ ದಾನಿಗಳ ಸಹಕಾರದೊಂದಿಗೆ ವರ್ಕಿಂಗ್ ವುಮೆನ್ಸ್ ಹಾಸ್ಟೆಲ್ ಯೋಜನೆಗೆ ಹಾಗೂ ಸಮಾಜದ ಮಹಿಳಾ ಸಬಲೀಕರಣಕ್ಕಾಗಿ ಆಚರದ ಶರಣೆ ಅಕ್ಕಮ್ಮ ಟ್ರಸ್ಟ್ಗೆ ಚಾಲನೆ ನೀಡಲಾಗುವುದು ಎಂದರು.
ರಾಜ್ಯ ಮಟ್ಟದ ಈಡಿಗ, ಬಿಲ್ಲವ, ನಾಮಧಾರಿ, ದೀವರು, ತೀಯಾ ಸಮಾಜದ 25 ಒಳಪಂಗಡಗಳ ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿ ರಹಿತ ಸಾಲವನ್ನು ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಮಾವೇಶದಲ್ಲಿ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.ಸಮಾರಂಭದ ಸಾನಿಧ್ಯವನ್ನು ಆರ್ಯ ಈಡಿಗ ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಗೌರಿಗದ್ದೆ ಯ ಅವಧೂತ ಆಶ್ರಮದ ಶ್ರೀ ವಿಜಯ ಗುರೂಜೀ, ಶ್ರೀಕ್ಷೇತ್ರ ಸಿಗಂಧೂರಿನ ಧರ್ಮಾಧಿಕಾರಿ ಶ್ರೀ ಡಾ.ರಾಮಪ್ಪ ವಹಿಸಲಿದ್ದು, ಮಾಜಿ ಸಚಿವ ಹಾಗೂ ಶಾಸಕ ವಿ.ಸುನಿಲ್ಕುಮಾರ್ ಉದ್ಘಾಟಿಸುವರು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಭೀಮಣ್ಣ ನಾಯ್ಕ, ಜಗದೈವ ಗುತ್ತೆದಾರ್, ಹೆಚ್.ಆರ್.ಗವಿಯಪ್ಪ ಧಣಿ, ಉಮಾನಾಥ್ ಕೋಟ್ಯಾನ್, ಮಾಜಿ ಶಾಸಕ ಸುನೀಲ್ ಬಿ.ನಾಯ್ಕ ಸೇರಿದಂತೆ ಸಮಾಜದ ವಿವಿಧ ಸಂಘಟನೆಗಳ ಮುಖಂಡರು ಆಗಮಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರೇಣುಕಾ, ಜಯಲಕ್ಷ್ಮೀ, ಪ್ರತಿಮಾ, ಸವಿತಾ, ವಿಶ್ವನಾಥ್, ಲೋಕೇಶ್, ಬಸವರಾಜ್ ಇನ್ನಿತರರು ಉಪಸ್ಥಿತರಿದ್ದರು.