ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ಅವರು ಜಿ.ಎಂ. ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಆಯೋಜಿಸಲಾದ ಪುಸ್ತಕ ಮೇಳವನ್ನು ಶನಿವಾರ ಉದ್ಘಾಟಿಸಿ ಮಾತನಾಡಿದರು.ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್ ಮಾತನಾಡಿ, ಈಗಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸನ್ನು ಪಡೆಯಲು ಜ್ಞಾನ ಅತೀ ಅವಶ್ಯಕ. ಆದ್ದರಿಂದ ನಾವು ಪುಸ್ತಕಗಳನ್ನು ಓದುವುದರ ಜೊತೆಗೆ ಬೇರೆಯವರಲ್ಲಿಯೂ ಪುಸ್ತಕವನ್ನು ಓದುವ ಅಭ್ಯಾಸವನ್ನು ಬೆಳೆಸಬೇಕು ಎಂದರು.ಜಿ.ಎಂ. ಗ್ಲೋಬಲ್ ಸ್ಕೂಲ್ನ ಪ್ರಾಂಶುಪಾಲ ಪ್ರಣವ್ ಶೆಟ್ಟಿ ಮಾತನಾಡಿ, ಸಾಮಾಜಿಕ ಜಾಲತಾಣದದಲ್ಲಿ ಅನಗತ್ಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಯವನ್ನು ವ್ಯರ್ಥ ಮಾಡುವುದರ ಬದಲು ಪುಸ್ತಕವನ್ನು ಓದುವ ಹವ್ಯಾಸ ರೂಢಿಸಿಕೊಳ್ಳಿ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ರಕ್ಷಕ ಸಂಘ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಿ.೩೦ರ ವರೆಗೆ ಪುಸ್ತಕ ಮೇಳ ನಡೆಯಲಿದ್ದು, ಪೋಷಕರು ಪುಸ್ತಕವನ್ನು ಖರೀದಿಸಲು ಅವಕಾಶ ಮಾಡಿಕೊಡಲಾಗಿದೆ.