ಜನಿವಾರ ತೆಗೆಸಿ ಪರೀಕ್ಷೆ ಬರೆಸಿದ ಪ್ರಕರಣ: ಬ್ರಾಹ್ಮಣ ಸಮಾಜ ಖಂಡನೆ, ತಹಸೀಲ್ದಾರ್‌ಗೆ ಮನವಿ

KannadaprabhaNewsNetwork |  
Published : Apr 21, 2025, 12:55 AM ISTUpdated : Apr 21, 2025, 12:56 AM IST
ಜನಿವಾರ ತೆಗೆದು ಪರೀಕ್ಷೆ ಬರೆಯಲು ಕಡ್ಡಾಯ: ಬ್ರಾಹ್ಮಣ ಸಮಾಜದಿಂದ ಖಂಡನೆ,  ತಹಶೀಲ್ದಾರ್ ಅವರಿಗೆ ಮನವಿ | Kannada Prabha

ಸಾರಾಂಶ

ಸಿಇಟಿ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ತೆರಳುವಂತೆ ಹೇಳಿ ಮಾನಸಿಕ ಹಿಂಸೆ ನೀಡಿದ ಘಟನೆಯನ್ನು ಬ್ರಾಹ್ಮಣ ಸಮಾಜ ತೀವ್ರವಾಗಿ ಖಂಡಿಸಿದೆ.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ರಾಜ್ಯದ ಬೀದರ್ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ವಿದ್ಯಾರ್ಥಿಗೆ ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ತೆರಳುವಂತೆ ಹೇಳಿ ಮಾನಸಿಕ ಹಿಂಸೆ ನೀಡಿದ ಘಟನೆಯನ್ನು ಬ್ರಾಹ್ಮಣ ಸಮಾಜ ತೀವ್ರವಾಗಿ ಖಂಡಿಸಿದೆ.

ಸಿಇಟಿ ಪರೀಕ್ಷೆ ಬರೆಯಲಾಗದೆ ಭವಿಷ್ಯವನ್ನೇ ಕಳೆದುಕೊಳ್ಳುವ ಆತಂಕದಲ್ಲಿ ವಿದ್ಯಾರ್ಥಿಗಳು ಇದ್ದಾರೆ. ಇಂತಹ ಅಮಾನವೀಯ ಘಟನೆಯನ್ನು ಖಂಡಿಸಿದ ಬ್ರಾಹ್ಮಣ ಸಮಾಜ, ಅಧಿಕಾರಿಗಳ ಕ್ರಮವನ್ನು ಪ್ರಶ್ನಿಸಿ ಘೋಷಣೆಗಳನ್ನು ಕೂಗುತ್ತಾ, ಪಟ್ಟಣದ ಸೋಮೇಶ್ವರ ದೇವಾಲಯದ ಬಳಿಯಿಂದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ಮೂಲಕ ಸಾಗಿ ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬ್ರಾಹ್ಮಣ ಸಮಾಜದ ಅಧ್ಯಕ್ಷ ಎಂ.ಆರ್. ನಂದಕುಮಾರ್ , ಕಾರ್ಯದರ್ಶಿ ಶ್ರೀಕಾಂತ್ ಸೇರಿದಂತೆ ಪದಾಧಿಕಾರಿಗಳು, ಸಮಾಜದ ಪ್ರಮುಖರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2025ರಲ್ಲಿ ಬಿಯರ್‌ ಮಾರಾಟ ಭಾರೀ ಕುಸಿತ
ಜನಾಶೀರ್ವಾದದಿಂದ ದೀರ್ಘಾವಧಿ ಸಿಎಂ : ಸಿದ್ದು