ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಕೂಡಲೇ ಹರಿಪ್ರಸಾದ್ ಅವರು ಶ್ರೀಗಳ ಕ್ಷಮೆಯಾಚನೆ ಮಾಡಬೇಕು. ಶ್ರೀಗಳ ಕುರಿತಾಗಿ ಮಾತನಾಡುವಾಗ ಎಚ್ಚರಿಕೆಯನ್ನು ವಹಿಸಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು. ಅಲ್ಲದೆ, ಇದೆ ವೇಳೆ ಹರಿಪ್ರಸಾದ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಈ ವೇಳೆ ಮಾತನಾಡಿದ ಬ್ರಾಹ್ಮಣ ತರುಣ ಸಂಘದ ಅಧ್ಯಕ್ಷ ನಾರಾಯಣ ದೇಸಾಯಿ, ಬ್ರಾಹ್ಮಣ ಸಮಾಜದ ತ್ರಿಮತಸ್ಥ ಸ್ವಾಮೀಜಿ ವಿರುದ್ಧ ಮಾತನಾಡಿದರೆ ಸಮಾಜ ಎಂದಿಗೂ ಸಹಿಸುವುದಿಲ್ಲ. ಕೂಡಲೇ ಶ್ರೀಗಳ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಉಪಾಧ್ಯಕ್ಷ ಡಾ.ಗಿರೀಶ ಮಸೂರಕರ ಮಾತನಾಡಿ, ಸಮುದಾಯದ ಕುರಿತು ಅವಹೇಳನಕಾರಿಯಾಗಿ ಮಾತನಾಡಿದರೆ ಅದನ್ನು ಎಂದಿಗೂ ಸಹಿಸುವುದಿಲ್ಲ. ಬ್ರಾಹ್ಮಣರ ಸಂಖ್ಯೆ ಕಡಿಮೆ ಇದೆ ಅನ್ನುವ ಮನೋಭಾವನೆಯಲ್ಲಿ ಈ ರೀತಿ ಮಾತನಾಡುವುದನ್ನು ಸಹಿಸುವುದಿಲ್ಲ. ಸಮಾಜ ಪರಿವರ್ತಿಸುವ ಶಕ್ತಿ ಸಮಾಜಕ್ಕಿದೆ. ಸಯಮ ಬಂದಾಗ ಉತ್ತರಿಸುತ್ತೇವೆ ಎಂದು ಖಾರವಾಗಿ ಹೇಳಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ನರಸಿಂಹ ಆಲೂರ, ಎಸ್.ಕೆ.ಕುಲಕರ್ಣಿ, ಡಿ.ಬಿ.ಕುಲಕರ್ಣಿ, ವೆಂಕಟೇಶ ದೇಶಪಾಂಡೆ, ಪ್ರದೀಪ ಪರ್ವತಿಕರ, ಎಸ್.ವಿ.ಶ್ಯಾಮ್, ಪವನ ಸೀಮಿಕೇರಿ, ವಿನಾಯಕ ದೇಸಾಯಿ, ಶುಭದಾ ದೇಶಪಾಂಡೆ, ನರಸಿಂಹ ಕಾಳಗಿ, ಕೇಶವ ಕುಲಕರ್ಣಿ, ಗಿರೀಶ ಉಡುಪಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.