ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025 : ರಘುನಾಥ್ ಆಯ್ಕೆ

KannadaprabhaNewsNetwork |  
Published : Apr 14, 2025, 01:23 AM ISTUpdated : Apr 14, 2025, 10:40 AM IST
 ಎಸ್. ರಘುನಾಥ್

ಸಾರಾಂಶ

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025ರಲ್ಲಿ ಎಸ್. ರಘುನಾಥ್ ಚುನಾಯಿತರಾಗಿದ್ದಾರೆ.

 ಬೆಂಗಳೂರು : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷೀಯ ಚುನಾವಣೆ-2025ರಲ್ಲಿ ಎಸ್. ರಘುನಾಥ್ ಚುನಾಯಿತರಾಗಿದ್ದಾರೆ.

ಭಾನುವಾರ ಬನಶಂಕರಿ 2ನೇ ಹಂತದ ಗಾಯತ್ರಿ ಭವನದಲ್ಲಿ ನಡೆದ ಚುನಾವಣೆಯಲ್ಲಿ ಎಸ್.ರಘುನಾಥ್ 13,399 ಮತಗಳನ್ನು ಪಡೆದರೆ ಪ್ರತಿಸ್ಪರ್ಧಿ ಭಾನುಪ್ರಕಾಶ್ ಶರ್ಮ ಅವರು 11,235 ಮತಗಳನ್ನು ಪಡೆದರು. 2,164 ಮತಗಳಿಂದ ಎಸ್. ರಘುನಾಥ್ ಜಯಶೀಲರಾದರು. ಇವರು 2025-30ರ ಅವಧಿಗೆ ಅಧ್ಯಕ್ಷರಾಗಿರುತ್ತಾರೆ ಎಂದು ಚುನಾವಣಾಧಿಕಾರಿಗಳ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 66 ಸಾವಿರ ಮತದಾರರಿದ್ದು, ಬೆಂಗಳೂರು ನಗರ ಪ್ರದೇಶದಲ್ಲಿ 34 ಸಾವಿರ ಮತದಾರರು ಇದ್ದಾರೆ. ಭಾನುವಾರ ಬೆಳಗ್ಗೆ 8 ರಿಂದ 4 ಗಂಟೆಗೆವರಗೆ ಮತದಾನ ನಡೆಯಿತು. ನಂತರ ಮತ ಏಣಿಕೆ ಕಾರ್ಯ ಜರುಗಿತು. ಬೆಂಗಳೂರು ನಗರ ಪ್ರದೇಶದಲ್ಲಿ 8 ಜಿಲ್ಲಾ ಪ್ರತಿನಿಧಿ ಸ್ಥಾನಗಳಿಗೆ, ದಕ್ಷಿಣ ಜಿಲ್ಲಾ ಪ್ರತಿನಿಧಿ 4 ಸ್ಥಾನ ಹಾಗೂ ಕೇಂದ್ರ ಜಿಲ್ಲಾ ಪ್ರತಿನಿಧಿ 2 ಸ್ಥಾನ, ಉತ್ತರ ಜಿಲ್ಲಾ ಪ್ರತಿನಿಧಿ 2 ಸ್ಥಾನಕ್ಕೆ ಚುನಾವಣೆ ನಡೆಯಿತು.

ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರತಿಕ್ರಿಯಿಸಿದ ಎಸ್. ರಘುನಾಥ್, ರಾಜ್ಯದಲ್ಲಿ ಬ್ರಾಹ್ಮಣರ ಜನಸಂಖ್ಯೆ 45 ಲಕ್ಷ ಇದೆ. ನಮ್ಮಲ್ಲಿ ಆರ್ಥಿಕವಾಗಿ ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಪೌರೋಹಿತ್ಯ, ಅಡುಗೆ ಕೆಲಸ ಮಾಡುವವರು ಹಾಗೂ ಅರ್ಚಕ ವೃತ್ತಿ ಮಾಡುವವರು ಹಾಗೂ ಇನ್ನಿತರೆ ವೃತ್ತಿ ಮಾಡುವವರ ಮಕ್ಕಳ ಶಿಕ್ಷಣ, ಉದ್ಯೋಗಕ್ಕೆ ಹೆಚ್ಚಿನ ಅವಕಾಶ ಒದಗಿಸಲು ಪ್ರಯತ್ನಿಸುತ್ತೇನೆ. ಬ್ರಾಹ್ಮಣ ಸಮುದಾಯದ ಮಕ್ಕಳ ಶಿಕ್ಷಣ ಮತ್ತು ಆರ್ಥಿಕವಾಗಿ ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿ ತರಲು ಕೆಲಸ ಮಾಡುತ್ತೇನೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶೇ.11ರಷ್ಟು ಟೊಯೋಟಾ ಕಾರುಗಳು ರಾಜ್ಯದಲ್ಲೇ ಸೇಲ್‌
ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ