ಹೊಸ ವಿಷಯಗಳಿಗಾಗಿ ವಿಚಾರ ಮಂಥನ ಅಗತ್ಯ: ಕೃಷ್ಣಯ್ಯ

KannadaprabhaNewsNetwork |  
Published : Mar 03, 2024, 01:35 AM IST
2ಎಚ್ಎಸ್ಎನ್16 : ಮಲೆನಾಡು ಇಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರಮಟ್ಟದ ಅವಿಷ್ಕಾರ ಮಂಥನವನ್ನು ಗಣ್ಯರು ಉದ್ಘಾಟಿಸುತ್ತಿರುವುದು. | Kannada Prabha

ಸಾರಾಂಶ

ಹೊಸ ಹೊಸ ವಿಷಯ ತಿಳಿಯಲು ಹಾಗೂ ಹೆಚ್ಚಿನ ಜ್ಞಾನ ಸಿಗಬೇಕಾದರೆ ವಿಚಾರ ಮಂಥನದಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದು ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ಡಾ. ಎ.ಜೆ. ಕೃಷ್ಣಯ್ಯ ಅಭಿಪ್ರಾಯಪಟ್ಟರು.

ಕನ್ನಡಪ್ರಭ ವಾರ್ತೆ ಹಾಸನ

ಹೊಸ ಹೊಸ ವಿಷಯ ತಿಳಿಯಲು ಹಾಗೂ ಹೆಚ್ಚಿನ ಜ್ಞಾನ ಸಿಗಬೇಕಾದರೆ ವಿಚಾರ ಮಂಥನದಂತಹ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದು ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರು ಡಾ. ಎ.ಜೆ. ಕೃಷ್ಣಯ್ಯ ಅಭಿಪ್ರಾಯಪಟ್ಟರು.

ನಗರದ ಸಾಲಗಾಮೆ ರಸ್ತೆ ಬಳಿ ಇರುವ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಐಯುಸಿಇಇ, ಈಡಬ್ಲ್ಯೂಬಿ, ಎಂಸಿಇ ಸ್ಟೂಡೆಂಟ್ಸ್ ಚಾಪಿಟರ್ ರವರ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆಯುವ ರಾಷ್ಟ್ರಮಟ್ಟದ ಅವಿಷ್ಕಾರ ಮಂಥನ್ ಎಂಬ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ಭವಿಷ್ಯವನ್ನು ಉಜ್ವಲಗೊಳಿಸಲು ರಾಷ್ಟ್ರೀಯ ಮಟ್ಟದಲ್ಲಿ ವಿಚಾರ ಮಂಥನಗಳ ಅಗತ್ಯವಿದೆ ಎಂದರು.

ಇಂದು ನಾನಾ ಕಡೆಗಳಿಂದ ೧೫ಕ್ಕೂ ಹೆಚ್ಚಿನ ಇಂಜಿನಿಯರಿಂಗ್ ಕಾಲೇಜಿನಿಂದ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಇವರಿಗೆ ಹೆಚ್ಚಿನ ಜ್ಞಾನ ಸಿಗಬೇಕಾದರೆ ಪರಿಣಿತರ ಮಾರ್ಗದರ್ಶನ ಪಡೆಯಲು ಈ ಕಾರ್ಯಕ್ರಮ ಅನುಕೂಲವಾಗಿದೆ. ಈ ಕಾರ್ಯಕ್ರಮದಿಂದ ವ್ಯಾಸಂಗಕ್ಕೆ ಹಾಗೂ ಉದ್ಯೋಗಕ್ಕೆ ಹೆಚ್ಚಿನ ಪ್ರಯೋಜನ ಪಡೆಯಬಹುದು ಎಂದು ಹೇಳಿದರು.

ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥರು, ಕಾರ್ಯಕ್ರಮದ ಆಯೋಜಕ ಡಾ. ಎಸ್. ಎಜಿಲ್ ವಣ್ಣನ್ ಮಾತನಾಡಿ, ಅವಿಷ್ಕಾರ್ ಮಂಥನ್ ಎಂಬ ಕಾರ್ಯಕ್ರಮದಲ್ಲಿ ನುರಿತ, ಅನುಭವಿ ತಜ್ಞರಿಂದ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುತ್ತಿದೆ. ಇಂದು ತಂತ್ರಜ್ಞಾನದ ಯುಗದಲ್ಲಿ ಹೆಚ್ಚು ವಿಚಾರಗಳನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಲು ಅಗತ್ಯತೆಯಿದೆ ಎಂದು ವಿವಿಧ ಇಂಜಿನೀಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಎಚ್.ಎಸ್. ನರಸಿಂಹನ್ ಮಾತನಾಡಿ, ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದ ಮಹತ್ವವನ್ನು ಅರಿತು ತಮ್ಮ ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಮಾರ್ಗದರ್ಶನ ಪಡೆಯುವುದು ಅನುಕೂಲಕರ ವಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಕಾಸ್ಟ್ ಅಕೌಂಟ್ ಕಾರ್ಯದರ್ಶಿ ಲೂಬ್ ಎನ್. ರವಿಂದ್ರನಾಥ್ ಕೌಶಿಕ್, ಕರ್ನಾಟಕ ಮತ್ತು ಫೌಂಡರ್ ಅಂಡ್ ಸಿಇಒ ಎಚ್. ಸುಂದರ್ ಮೂರ್ತಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ, ಈ ಕಾರ್ಯಕ್ರಮದ ಸಂಯೋಜಕ ಮಧುಸೂದನ್, ಕಾಲೇಜಿನ ಪ್ರಾಧ್ಯಾಪಕರು, ಎನ್.ಎಸ್.ಎಸ್. ಅಧಿಕಾರಿ ವಿಜಯ್ ಕುಮಾರ್ ತಿಲೆ, ಎಐಎಂಎಲ್ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕ ಬಾಲಾಜಿ ಪ್ರಭು ಹಾಗೂ ತರಬೇತಿ ಪಡೆಯಲು ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಹ್ಯಾಕಾಶ ಕ್ಷೇತ್ರ ಅಧ್ಯಯನದ ಬಗ್ಗೆಆಸಕ್ತಿ ಬೆಳೆಸಿಕೊಳ್ಳಿ; ಡೆವಿನ್‌ ಸಲಹೆ
ಝೂಂಬಿ ಡ್ರಗ್ಸ್ ಸೇವನೆ ಬಗ್ಗೆ ಸುಳ್ಳುಸುದ್ದಿ: ಖಾಸಗಿ ಕಂಪನಿ ಉದ್ಯೋಗಿ ಸೆರೆ