ಮುಂದಿನ ದಿನಗಳಲ್ಲಿ ಎಲ್ಲ ಜಿಲ್ಲೆಗಳಲ್ಲಿಯೂ ಶಾಖೆ

KannadaprabhaNewsNetwork |  
Published : Sep 21, 2024, 02:01 AM IST
ದದದದ | Kannada Prabha

ಸಾರಾಂಶ

ರೈತರಿಗೆ, ಕೂಲಕಾರ್ಮಿಕರಿಗೆ, ಬಡವರಿಗೆ ಹಣಕಾಸಿನ ಅನುಕೂಲವಾಗ ಹಿತದೃಷ್ಟಿಯಿಂದ ಈ ಸಂಘವನ್ನು ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಹಾಗೂ ಎಲ್ಲ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಯನ್ನು ಆರಂಭಿಸುವ ಗುರಿ ಹೊಂದಿದೆ ಎಂದು ಶ್ರೀ ಎಸ್.ಆರ್.ಕೆ. ಬ್ಯಾಂಕ್ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಕನ್ನಡಪ್ರಭ ವಾರ್ತೆ ಹುನಗುಂದ

ರೈತರಿಗೆ, ಕೂಲಕಾರ್ಮಿಕರಿಗೆ, ಬಡವರಿಗೆ ಹಣಕಾಸಿನ ಅನುಕೂಲವಾಗ ಹಿತದೃಷ್ಟಿಯಿಂದ ಈ ಸಂಘವನ್ನು ಆರಂಭಿಸಲಾಗಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಹಾಗೂ ಎಲ್ಲ ಜಿಲ್ಲೆಗಳಲ್ಲಿ ಬ್ಯಾಂಕಿನ ಶಾಖೆಯನ್ನು ಆರಂಭಿಸುವ ಗುರಿ ಹೊಂದಿದೆ ಎಂದು ಶ್ರೀ ಎಸ್.ಆರ್.ಕೆ. ಬ್ಯಾಂಕ್ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.

ಪಟ್ಟಣದ ನವನಗರದ ಪುರಸಭೆಯ ಮಂಗಲ ಭವನದಲ್ಲಿ ಶುಕ್ರವಾರ ನಡೆದ ಎಸ್.ಆರ್.ಕೆ.ಸೌಹಾರ್ದ ಪತ್ತಿನ ಸಹಕಾರಿ ಸಂಘದ 2023-24ನೇ ಸಾಲಿನ 16ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬ್ಯಾಂಕ್‌ನ ಹೊಸದಾಗಿ 5 ಶಾಖೆಗಳನ್ನು ಕೂಡಲಸಂಗಮ, ಕರಡಿ, ಬಾಗಲಕೋಟೆ, ಗುಡೂರ, ಕಂದಗಲ್ಲ ಆರಂಭಿಸಲಾಗಿದೆ. ಮುಂದಿನ 5 ವರ್ಷಗಳಲ್ಲಿ ರಾಯಚೂರ, ಕೊಪ್ಪಳ, ಬೆಳಗಾವಿ, ವಿಜಯಪುರ ಜಿಲ್ಲೆಯಲ್ಲಿ ಶಾಖೆ ಆರಂಭಿಸಲಾಗುವುದು. ಇದೀಗ ಹುನಗುಂದ ಪಟ್ಟಣದಲ್ಲಿ ಪ್ರಧಾನ ಕಚೇರಿಯು ₹1 ಕೋಟಿ 50 ಲಕ್ಷ ವೆಚ್ಚದಲ್ಲಿ ಸ್ವಂತ ಕಟ್ಟಡದ ಕಾಮಗಾರಿ ಪ್ರಗತಿ ಹಂತದಲ್ಲಿವೆ. ಸಹಕಾರಿ ಕ್ಷೇತ್ರವು ಬೆಳೆಯಲು ಷೇರುದಾರ, ಠೇವಣೆದಾರರು, ಸದಸ್ಯರ ಆಶೀರ್ವಾದದಿಂದ ಬ್ಯಾಂಕ್‌ ಅಭಿವೃದ್ಧಿ ಹೊಂದಲು ಸಾಧ್ಯ. ಗ್ರಾಹಕರ ಅನುಕೂಲವಾಗಲು ರಾಷ್ಟ್ರೀಕೃತ ಬ್ಯಾಂಕಿನಂತೆ ಸಂಪೂರ್ಣ ಅನ್ಲೈನ್ ವ್ಯವಸ್ಥೆಯನ್ನು ಆರಂಭಿಸುವ ಚಿಂತನೆ ಮಾಡಲಾಗಿದೆ. ಬ್ಯಾಂಕ್‌ನ ಎಲ್ಲ ಸಿಬ್ಬಂದಿಗಳ ಪರಿಶ್ರಮದಿಂದ ಬ್ಯಾಂಕ್ ಪ್ರಗತಿ ಪಥದಲ್ಲಿ ಸಾಗುತ್ತಿದೆ ಎಂದು ತಿಳಿಸಿದರು.

ಪ್ರಧಾನ ವ್ಯವಸ್ಥಾಪಕ ಪಿ.ಎಸ್.ಭದ್ರಶೆಟ್ಟಿ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ₹6.02 ಲಕ್ಷ ನಿವ್ವಳ ಲಾಭ ಗಳಿಸಿದೆ. ದುಡಿಯುವ ಬಂಡವಾಳ ₹1181.04 ಲಕ್ಷ ಹೊಂದಿದೆ. ₹966.65 ಲಕ್ಷ ಸಾಲ ನೀಡಿದೆ. 74.24 ಲಕ್ಷ ಶೇರು ಬಂಡವಾಳ, 1043,31 ಲಕ್ಷ ಠೇವುಗಳನ್ನು ಹೊಂದಿದೆ ಎಂದು ಹೇಳಿದರು.

ಈ ವೇಳೆ ಉಪಾಧ್ಯಕ್ಷ ಯಮನಪ್ಪ ಚಲವಾದಿ, ನಿರ್ದೇಶಕರಾದ ಗಂಗಾಧರ ದೊಡಮನಿ, ಅಮರೇಶ ನಾಗೂರ, ಮುತ್ತಣ್ಣ ಕಲಗೋಡಿ, ಮಹಾಂತೇಶ ನರಗುಂದ, ಪ್ರಭು ಇದ್ದಲಗಿ, ಶಿವಪ್ಪ ಭದ್ರಶೆಟ್ಟಿ, ಮಹಾಂತೇಶ ಕಡಿವಾಲ, ನಿಂಗಪ್ಪ ಬಿದರಕುಂದಿ, ಸಂಗಮೇಶ ಹಾವರಗಿ, ಫರವೇಜ ಖಾಜಿ, ಶರಣು ಬೆಲ್ಲದ, ಜಯಶ್ರೀ ತಳವಾರ, ಅಕ್ಕಮ್ಮ ಪಾಟೀಲ, ಸಂಪನ್ಮೂಲ ಅಧಿಕಾರಿ ರಾಮಣ್ಣ ಅಂಬಿಗೇರ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಜೆಪಿ ಎಷ್ಟು ಕೇಸ್‌ ಸಿಬಿಐಗೆ ನೀಡಿದೆ? : ಸಿಎಂ
ರಾಷ್ಟ್ರಧ್ವಜ ತಯಾರಿಸ್ತಿ ದ್ದ ಕೈಗಳಲ್ಲೀಗ ಕೆಲಸವಿಲ್ಲ!