ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಧರ್ಮಸ್ಥಳ, ಜನಜಾಗೃತಿ ಪ್ರಾದೇಶಿಕ ವಿಭಾಗ ಬೆಳ್ತಂಗಡಿ ವತಿಯಿಂದ ಧರ್ಮಸ್ಥಳದಲ್ಲಿ ಗುರುವಾರ ನಡೆದ ‘ಶೌರ್ಯ’ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣ ಸಮಿತಿಗಳ ರಾಜ್ಯ ಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಶೌರ್ಯ ತಂಡವು ರಾಜ್ಯದ 91 ತಾಲೂಕುಗಳಲ್ಲಿ 638 ಘಟಕಗಳ ಮೂಲಕ 10,640 ಆಪ್ತರಕ್ಷಕರನ್ನು ಹೊಂದಿದೆ. ಇವರೆಲ್ಲ ತ್ಯಾಗ, ಸಾಹಸಗಳ ಮೂಲಕ ಮಹೋನ್ನತ ಸೇವೆ ಸಲ್ಲಿಸುತ್ತಿದ್ದಾರೆ. ಜೀವ ಉಳಿಸುವುದು ಪುಣ್ಯದ ಕಾರ್ಯ. ತಮ್ಮ ತಾಲೂಕುಗಳಲ್ಲಿ ವಿಪತ್ತು ಎದುರಿಸಲು ತಂಡವನ್ನು ಸನ್ನದ್ಧಗೊಳಿಸಬೇಕು ಎಂದರು.ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಅನಿಲ್ ಕುಮಾರ್ ಮಾತನಾಡಿ, ದೇಶದಲ್ಲಿ ಎನ್ಡಿಆರ್ಎಫ್ ಬಳಿಕ ಅತಿ ದೊಡ್ಡ ಸೇವಾ ಪಡೆಯಿದ್ದರೆ ಅದು ಶೌರ್ಯ ತಂಡ ಎಂದರು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಸ್ ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೇತ್ರದ 638 ಘಟಕಗಳ ಮೂಲಕ 10,460 ಮಂದಿ ಸೇವೆ ನೀಡುತ್ತಿದ್ದಾರೆ. ಇವುಗಳಲ್ಲಿ 14 ಕ್ಷಿಪ್ರ ತಂಡಗಳಿವೆ. ಧರ್ಮಾಧಿಕಾರಿಯವರು 2 ಕೋಟಿ ರು. ಮೌಲ್ಯದ ರಕ್ಷಣಾ ಕಿಟ್ ಒದಗಿಸಿದ್ದಾರೆ. ಜತೆಗೆ 75 ಸಾವಿರ ರುಪಾಯಿ ಸಂಪೂರ್ಣ ಸುರಕ್ಷಾ ವಿಮೆ ನೀಡಲಾಗಿದೆ ಎಂದು ಹೇಳಿದರು.
ಪ್ರಥಮ ಚಿಕಿತ್ಸೆ (ಸಿಆರ್ಪಿ) ನಡೆಸಿದ 8 ಸ್ವಯಂ ಸೇವಕರಿಗೆ ಬಹುಮಾನ ವಿತರಿಸಲಾಯಿತು. ಶೌರ್ಯ ತಂಡದವರಿಗೆ ಸಮವಸ್ತ್ರ, ಮಾಹಿತಿ ಪುಸ್ತಕವನ್ನು ಡಾ. ಹೆಗ್ಗಡೆ ಬಿಡುಗಡೆ ಮಾಡಿದರು.