ಶಶಿಕಾಂತ ಮೆಂಡೆಗಾರ
ಇಷ್ಟು ದಿನ ಬೀಗ ಹಾಕಿದ್ದ ಮನೆಗಳನ್ನು ಮಾತ್ರ ಕದಿಯುತ್ತದ್ದ ಕಳ್ಳರಿ ಇದೀಗ ರಾಜಾರೋಷವಾಗಿ ಮನೆಗಳಿಗೆ ನುಗ್ಗಿ ಮನೆಯವರಿಗೆ ಮಾರಕಾಸ್ತ್ರಗಳನ್ನು ತೋರಿಸಿ ದರೋಡೆ ಮಾಡುತ್ತಿದ್ದಾರೆ. ಜಿಲ್ಲೆಯಲ್ಲಿ ಪರರಾಜ್ಯದ ಗ್ಯಾಂಗೊಂದು ಸಕ್ರಿಯವಾಗಿದ್ದು, ಜನರ ನಿದ್ದೆ ಗೆಡಿಸಿದೆ. ಮುಖಕ್ಕೆ ಮಂಕಿ ಕ್ಯಾಪ್ ಹಾಕಿಕೊಂಡು ಬರುವ ಮುಸುಕುಧಾರಿಗಳು ಒಂದೇ ದಿನ ನಾಲ್ಕು ಕಡೆಗಳಲ್ಲಿ ದರೋಡೆ ಹಾಗೂ ಒಂದೇ ವಾರದಲ್ಲಿ ಮೂರು ಬೇರೆ ಬೇರೆ ದರೋಡೆ ಕೃತ್ಯಗಳನ್ನು ಎಸಗಿದ್ದಾರೆ. ಹೀಗೆಯೇ ಜಿಲ್ಲಾದ್ಯಂತ ವಿವಿಧೆಡೆ ಕಳ್ಳತನ ಕೃತ್ಯಗಳನ್ನು ಎಸಗಿದ್ದು, ಬುಧವಾರ ರಾತ್ರಿ ನಡೆದ ಘಟನೆಯೊಂದು ನಗರವನ್ನೇ ಬೆಚ್ಚಿ ಬೀಳುವಂತೆ ಮಾಡಿದೆ.
ಮಾಲಿಕನನ್ನು ಮನೆ ಮೇಲಿಂದ ತಳ್ಳಿದ ದುರುಳರು:ಬುಧವಾರ ತಡರಾತ್ರಿ ಜೈನಾಪುರ ಬಡಾವಣೆಗೆ ನುಗ್ಗಿದ ಐವರು ಮುಸುಕುಧಾರಿಗಳ ತಂಡ ಅಲ್ಲಿನ ಮನೆಯೊಂದರ ಮೊದಲ ಮಹಡಿಯಲ್ಲಿ ಬಾಡಿಗೆ ಮನೆಯಲ್ಲಿರುವ ಸಂತೋಷ ಕನ್ನಾಳ ಎಂಬುವವರ ಮನೆಯ ಬಾಗಿಲನ್ನು ಮುರಿದು ಒಳಗೆ ನುಗ್ಗಿದ್ಧಾರೆ. ಈ ವೇಳೆ ವಿರೋಧ ವ್ಯಕ್ತಪಡಿಸಿದ ಸಂತೋಷನಿಗೆ ಚಾಕು ಚುಚ್ಚಿ, ಮನೆಯ ಮೊದಲ ಮಹಡಿಯಿಂದ ಕೆಳಗೆ ನೂಕಿದ್ದಾರೆ. ಮನೆಯಲ್ಲಿದ್ದ ಆತನ ಪತ್ನಿಯ ಮೇಲೆಯೂ ಹಲ್ಲೆ ನಡೆಸಿ, ಆಕೆಯ ಕೊರಳಲ್ಲಿದ್ದ 15 ಗ್ರಾಂ ಚಿನ್ನದ ಸರ ಕಸಿದುಕೊಂಡು ಪರಾರಿಯಾಗಿದ್ದಾರೆ. ಮಹಡಿ ಮೇಲಿನಿಂದ ಬಿದ್ದು ಹಾಗೂ ತೀವ್ರ ಹಲ್ಲೆಗೊಳಗಾದ ಸಂತೋಷ ಕನ್ನಾಳ ಇದೀಗ ಜಿಲ್ಲಾಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಗರದ ಜನರಲ್ಲಿ ಹೆಚ್ಚಿದ ಆತಂಕ:
ಒಂದೇ ರಾತ್ರಿ ನಾಲ್ಕು ಕಡೆ ದರೋಡೆ
2) ಬಳಿಕ ಇದೇ ಏರಿಯಾದ ಹರೀಶ ದೇಶಪಾಂಡೆ ಅವರ ಮನೆಬಾಗಿಲು ಮುರಿದು ಚಾಕು ತೋರಿಸಿ ಹೆದರಿಸಿದ್ದು, ₹ 59 ಸಾವಿರ ಮೌಲ್ಯದ 12 ಗ್ರಾಂ ಚಿನ್ನಾಭರಣ ದರೋಡೆ ಮಾಡಿದ್ದಾರೆ. ಗಾಂಧಿಚೌಕ್ ಠಾಣೆಯಲ್ಲಿ ದೂರು ಈ ಬಗ್ಗೆ ದಾಖಲಾಗಿದ್ದು, ಎರಡೂ ಮನೆಗಳು ಸೇರಿ ಒಟ್ಟು 3.84 ಲಕ್ಷ ದೋಚಿದ್ದಾರೆ.
4) ಕಳೇದ ಡಿ.9ರಂದು ತಾಲೂಕಿನ ಹಿಟ್ನಳ್ಳಿ ಗ್ರಾಮದ ಯಶವಂತ ಗಾಯಕವಾಡ ಹಾಗೂ ಗೋದಾವರಿ ಬಿರಾದಾರ ಮನೆಗಳಿಂದ ಚಿನ್ನಾಭರಣ, ಬೆಳ್ಳಿ ಆಭರಣ, ಹಣ, ಮೊಬೈಲ್ ಸೇರಿ ಒಟ್ಟು 8.52 ಲಕ್ಷ ಮೌಲ್ಯದ ಸ್ವತ್ತು ದರೋಡೆ ಮಾಡಿದ್ಧಾರೆ.
ಕಳೆದ ರಾತ್ರಿ 1 ಗಂಟೆಗೆ ನಾವು ಮೊದಲ ಮಹಡಿಯ ಮನೆಯಲ್ಲಿ ಮಲಗಿದ್ದ ವೇಳೆ ಬಾಗಿಲು ಮುರಿದು ಮನೆಗೆ ನುಗ್ಗಿದ ಮುಸುಕುಧಾರಿ ದರೋಡೆಕೋರರು, ನನ್ನ ಪತಿಯ ಬೆನ್ನಿಗೆ ಹಾಗೂ ಎದೆಗೆ ಚಾಕು ಚುಚ್ಚಿ ಅವರನ್ನು ಮನೆ ಮೇಲಿಂದ ಕೆಳಕ್ಕೆ ನೂಕಿದರು. ಬಳಿಕ ನನಗೆ ಚಾಕು ತೋರಿಸಿ ಕೊರಳಲ್ಲಿದ್ದ ಒಂದೂವರೆ ತೊಲೆ ತಾಳಿಚೈನ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಕೋಟ್
ಹೊರಗಿನಿಂದ ಬಂದ ಗುಂಪೊಂದು ಈ ರೀತಿ ದರೋಡೆ ಮಾಡುತ್ತಿರುವ ಮಾಹಿತಿ ಬಂದಿದೆ. ಕಳೆದ ಒಂದು ವಾರದಲ್ಲಿ 3ನೇ ಪ್ರಕರಣ ಇದಾಗಿದೆ. ಈಗಾಗಲೇ ಪೊಲೀಸ್ ಅಧಿಕಾರಿಗಳ ತಂಡವನ್ನು ರಚನೆ ಮಾಡಲಾಗಿದೆ. ಒಂದು ವಾರದಿಂದಲೇ ನಮ್ಮವರು ಪ್ರಕರಣ ಬೇಧಿಸಲು ಯತ್ನಿಸುತ್ತಿದ್ದು, ಶೀಘ್ರದಲ್ಲೇ ಆರೋಪಿಗಳ ಹೆಡೆಮುರಿ ಕಟ್ಟಲಾಗುವುದು.ಲಕ್ಷ್ಮಣ ನಿಂಬರಗಿ, ವಿಜಯಪುರ ಎಸ್ಪಿ