ಕನ್ನಡಪ್ರಭ ವಾರ್ತೆ ಮಂಡ್ಯ
ಜಿಲ್ಲಾಡಳಿತ, ಜಿಪಂ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಯವರೆಗೆ ಪೂರಕ ಆಹಾರದೊಂದಿಗೆ ಸ್ತನ್ಯಪಾನ ಮುಂದುವರಿಸುವುದರಿಂದ ಮಗುವಿನ ಸಮಗ್ರ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎಂದರು.
ಸ್ತನ್ಯಪಾನವು ಮಗುವಿನ ಆರೋಗ್ಯ ರಕ್ಷಣೆಯ ಜೊತೆಗೆ ತಾಯಿಯ ಆರೋಗ್ಯಕ್ಕೂ ಬಹಳಷ್ಟು ಪ್ರಯೋಜನಕಾರಿ. ತಾಯಿ-ಮಗುವಿನ ನಡುವಿನ ಭಾವನಾತ್ಮಕ ಬಾಂಧವ್ಯವನ್ನು ಬಲಪಡಿಸುವುದರೊಂದಿಗೆ ಕೆಲವು ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಕಾರಿ ಎಂದರು.ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಒಟ್ಟು 14,464 ಹೆರಿಗೆಗಳು ನಡೆದಿದ್ದು, ಎಲ್ಲವೂ ಸಾಂಸ್ಥಿಕ ಹೆರಿಗೆಗಳಾಗಿವೆ. ಈ ಪೈಕಿ 14,438 ಸಜೀವ ಜನನಗಳು ದಾಖಲಾಗಿದ್ದು, ಜನಿಸಿದ ಎಲ್ಲ ಶಿಶುಗಳಿಗೆ ಮೊದಲ ಒಂದು ಗಂಟೆಯೊಳಗೆ ತಾಯಿಯ ಎದೆಹಾಲುಣಿಸುವ ಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಸಿ.ಬೆಟ್ಟಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಸಿ.ಗೀತಾಲಕ್ಷ್ಮಿ ಜಿಲ್ಲಾ ಕ್ಷಯ ರೋಗ ಹಾಗೂ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಎಂ.ಎನ್.ಆಶಾಲತಾ ಉಪಸ್ಥಿತರಿದ್ದರು.