ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಿ

KannadaprabhaNewsNetwork |  
Published : Jan 08, 2026, 01:15 AM IST
ಚಿಕ್ಕಮಗಳೂರಿನ ಶಾಂತಿನಗರ ಬಡಾವಣೆಯ ಪಿಎಂಶ್ರೀ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ಧ ಕಲಿಕಾ ಹಬ್ಬ ಕಾರ್ಯಕ್ರಮವನ್ನು ನ್ಯಾಯಾಧೀಶರಾದ ವಿ. ಹನುಮಂತಪ್ಪ ಅವರು ಉದ್ಘಾಟಿಸಿದರು. | Kannada Prabha

ಸಾರಾಂಶ

ವಿದ್ಯಾರ್ಥಿಗಳಿಗೆ ಆನಂದದಾಯಕ ರೀತಿಯಲ್ಲಿ ಶಿಕ್ಷಣ, ಕಲಿಕೆಯ ಕೌಶಲ್ಯಗಳನ್ನು ಪರಿಚಯಿಸಿ, ಅವರಲ್ಲಿ ಸೃಜನಶೀಲತೆ ಮತ್ತು ಸಹಯೋಗವನ್ನು ಬೆಳೆಸುವ ಶೈಕ್ಷಣಿಕ ಹಬ್ಬವೇ ಕಲಿಕಾ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ವಿ.ಹನುಮಂತಪ್ಪ ಅವರು ಹೇಳಿದರು.

ಚಿಕ್ಕಮಗಳೂರು: ವಿದ್ಯಾರ್ಥಿಗಳಿಗೆ ಆನಂದದಾಯಕ ರೀತಿಯಲ್ಲಿ ಶಿಕ್ಷಣ, ಕಲಿಕೆಯ ಕೌಶಲ್ಯಗಳನ್ನು ಪರಿಚಯಿಸಿ, ಅವರಲ್ಲಿ ಸೃಜನಶೀಲತೆ ಮತ್ತು ಸಹಯೋಗವನ್ನು ಬೆಳೆಸುವ ಶೈಕ್ಷಣಿಕ ಹಬ್ಬವೇ ಕಲಿಕಾ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್‌ ನ್ಯಾಯಾಧೀಶರಾದ ವಿ.ಹನುಮಂತಪ್ಪ ಅವರು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ, ಜಿ.ಪಂ, ತಾ.ಪಂ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಕಚೇರಿ ಸಹಯೋಗದಲ್ಲಿ ಬುಧವಾರ ಪಿಎಂಶ್ರೀ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಚಿಕ್ಕಮಗಳೂರು ನಗರ 1 ಕ್ಪಸ್ಟರ್‌ಮಟ್ಟದ ಎಫ್‌ಎಲ್‌ಎನ್‌ ಕಲಿಕಾ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳಲ್ಲಿ ವಿವಿಧ ರೀತಿಯ ಅಗಾಧ ಪ್ರತಿಭೆಗಳು ಅಡಗಿದ್ದು, ಅಗತ್ಯವಾದ ಪ್ರೋತ್ಸಾಹಿಸಿವಿರುವುದಿಲ್ಲ. ಮಕ್ಕಳಲ್ಲಿ ಕಲಿಕೆಯ ಕುತೂಹಲ, ಆಸಕ್ತಿ, ಅಭಿರುಚಿಯನ್ನು ಶಿಕ್ಷಕ ವರ್ಗ ಬೆಳೆಸಬೇಕು. ಪಠ್ಯ ವಿಷಯಗಳ ಕಲಿಕೆಯ ಜೊತೆಗೆ ಪಠ್ಯೇತರ ವಿಷಯಗಳಾದ ಸಾಹಿತ್ಯ, ಚಿತ್ರಕಲೆ ಸೇರಿದಂತೆ ಇನ್ನಿತರೆ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಬೇಕು ಎಂದರು.

ಪ್ರಸ್ತುತ ಸಮಾಜಕ್ಕೆ ಹೆಣ್ಣು ಮತ್ತು ಗಂಡು ಇಬ್ಬರ ಅವಶ್ಯಕತೆ ಇದೆ. ಕೆಲವು ಕುಟುಂಬಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆ ಗಂಡು ಮಗುವಿಗೆ ನೀಡಲಾಗುತ್ತಿದೆ. ಹೆಣ್ಣು ಮಗುವೆಂದರೆ ಅಸಡ್ಡೆ ತೋರುವ ಸನ್ನಿವೇಶವಿದೆ. ಭ್ರೂಣದಲ್ಲಿ ಗಂಡು, ಹೆಣ್ಣು ಪತ್ತೆ ಮಾಡಲು ಕಾನೂನು ವಿರುದ್ಧವಾಗಿ ಕುಟುಂಬಸ್ಥರು ಮುಂದಾಗುತ್ತಿರುವುದು ವಿಷಾಧಕರ ಸಂಗತಿ ಎಂದು ಹೇಳಿದರು.

ಹೆಣ್ಣು ಸಂತಾನ ಕಾಪಾಡುವುದು ಪ್ರತಿ ನಾಗರಿಕರ ಕರ್ತವ್ಯ. ತಾಯಿ, ಮಡದಿ ಹೆಣ್ಣೆಂಬುದು ಮನಗಾಣಬೇಕು. ಆದರೆ, ಕೆಲವು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳು ಭ್ರೂಣಲಿಂಗ ಪತ್ತೆ ಅಪರಾಧವಾದರೂ ಹೆಚ್ಚಿನ ಹಣ ಗಳಿಸುವುದಕ್ಕಾಗಿ ಭ್ರೂಣಲಿಂಗ ಪತ್ತೆಯಲ್ಲಿ ತೊಡಗಿರುವುದು ಖಂಡನೀಯ. ಜೊತೆಗೆ ಪಾಲಕರು ಹೆಣ್ಣನ್ನು ನಶಿಸಲು ಈ ರೀತಿ ಕಾರ್ಯಕ್ಕೆ ಮುಂದಾಗಬಾರದು ಎಂದರು.

ಕುಟುಂಬದಲ್ಲಿ ಹೆಣ್ಣು ಮಗು ಜನಿಸಿದರೆ ಹಿರಿಯರು ಅತಿ ಹೆಚ್ಚು ಸೊಸೆಯನ್ನೆ ನಿಂದಿಸುತ್ತಾರೆ. ಆದರೆ, ನಿಜವಾದ ಕಾರಣಕರ್ತ ಗಂಡಿಗೆ ಎಂದಿಗೂ ನಿಂದಿಸುತ್ತಿಲ್ಲ. ಅಲ್ಲದೇ ಸಮಾಜದಲ್ಲಿ ಕೆಲವು ಬೈಗುಳಗಳು ಹೆಣ್ಣಿನ ಹೆಸರಿನಲ್ಲೇ ನಡೆದು ಮಹಿಳಾ ದೌರ್ಜನ್ಯಕ್ಕೆ ಕಾರಣವಾಗುತ್ತಿದೆ. ಈ ವಿರುದ್ಧ ಎಲ್ಲರೂ ಒಂದಾಗಿ ಹೆಣ್ಣಿನ ರಕ್ಷಣೆಗೆ ಸ್ವಯಂ ಮುಂದಾಗಿ ಕರೆ ನೀಡಿದರು.

ನಗರಸಭೆ ಸದಸ್ಯ ಮುನೀರ್ ಅಹ್ಮದ್ ಮಾತನಾಡಿ, ಕಲಿಕಾ ಹಬ್ಬವು ಮಕ್ಕಳಲ್ಲಿರುವ ವಿವಿಧ ಬಗೆಯ ಪ್ರತಿಭೆಯ ಸಾಮರ್ಥ್ಯವನ್ನು ಪ್ರಸ್ತುತಪಡಿಸಲು ಅವಕಾಶ ಮಾಡಿಕೊಡುತ್ತದೆ. ಜೊತೆಗೆ ಮಕ್ಕಳಲ್ಲಿ ಆತ್ಮವಿಶ್ವಾಸ ಹೆಚ್ಚಾಗುವಂತೆ ಮಾಡುತ್ತದೆ. ಕಲಿಕಾ ಹಬ್ಬ ಚಟುವಟಿಕೆ ಆಧಾರಿತವಾಗಿದೆ. ಇದರಿಂದ ಹೊಸ ಹೊಸ ಬಗೆಯ ಪಠ್ಯೇತರ ಚಟುವಟಿಕೆಯನ್ನು ಮಗು ಕಲಿಯಲು ಸಾಧ್ಯವಾಗುತ್ತದೆ ಎಂದರು.

ನಗರ ಕ್ಪಸ್ಟರ್‌ಮಟ್ಟದ ಸಿಆರ್‌ಪಿ ರಮ್ಯಶ್ರೀ ಪ್ರಾಸ್ತಾವಿಕವಾಗಿ ಮಾತನಾಡಿ, ಕಲಿಕಾ ಹಬ್ಬವು ಮಕ್ಕಳ ಬುದ್ಧಿಶಕ್ತಿ, ಸೃಜನಶೀಲತೆ ಹಾಗೂ ಅನುಭವವನ್ನು ಹೆಚ್ಚಿನ ಸಾಧನ. ವಿವಿಧ ಶಾಲೆಗಳಿಂದ ಆಗಮಿಸಿರುವ ಮಕ್ಕಳು ತಮ್ಮ ಪ್ರತಿಭೆಯನ್ನು ವಿಸ್ತರಿಸಲು ಇದೊಂದು ಸೂಕ್ತ ವೇದಿಕೆಯಾಗಿದ್ದು, ಶಾಲೆಗಳಲ್ಲಿ ಪ್ರತಿಭೆ ಅನಾವರಣಗೊಳಿಸಿದರೆ ಮುಂದೆ ದೊಡ್ಡ ವೇದಿಕೆಗಳಲ್ಲಿ ಸ್ಪರ್ಧಿಸಲು ಧೈರ್ಯ ಬರಲಿದೆ ಎಂದರು.

ಇದೇ ವೇಳೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಶಾಲಾವೃದ್ಧಿ ಸಮಿತಿ ಅಧ್ಯಕ್ಷ ಅಜಮ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಶೃತಿ, ಸಿಡಿಎ ಸದಸ್ಯೆ ಗುಣವತಿ, ಮುಖ್ಯೋಪಾಧ್ಯಾಯ ಎಸ್.ಟಿ.ಚಂದ್ರಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಅಜ್ಜಯ್ಯ, ಕಾರ್ಯದರ್ಶಿ ರವಿ, ಮುಖ್ಯೋಪಾಧ್ಯಾಯ ಸಂಘದ ಅಧ್ಯಕ್ಷ ಶ್ರೀನಿವಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಣ್ಣಾನಾಯ್ಕ್, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಪರಮೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಾಲೆಯ ಶಿಕ್ಷಕಿ ಶಾಲಿನಿ, ಮಮತ ನಿರೂಪಿಸಿದರು. ಮುಖ್ಯೋಪಾಧ್ಯಾಯ ಎಸ್.ಟಿ.ಚಂದ್ರಯ್ಯ ಸ್ವಾಗತಿಸಿದರು. ವಸಂತ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಶಿಕ್ಷಕಿ ಮಲ್ಲಿಕಾ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿಂತಿದ್ದ ಲಾರಿಗೆ ಕ್ರೂಸರ್‌ ಡಿಕ್ಕಿ: 4 ಜನರ ಸಾವು
ಎಚ್.ಡಿಕೆಯನ್ನು ಮುಖ್ಯಮಂತ್ರಿಯಾಗಿ ನೋಡಲು ಜನತೆ ಕಾತುರ