ಶೋಷಿತರು, ಹಿಂದುಳಿದವರನ್ನು ಮುಖ್ಯವಾಹಿನಿಗೆ ತನ್ನಿ

KannadaprabhaNewsNetwork |  
Published : Nov 08, 2025, 01:30 AM IST
ಕ್ಯಾಪ್ಷನ7ಕೆಡಿವಿಜಿ43 ದಾವಣಗೆರೆಯ ಟಿ. ಎಂ. ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್  ಮಹಿಳಾ ಪ್ರದ ಕಾಲೇಜಿನಲ್ಲಿ ಮಹಿಳಾ ಸೇವಾ ಸಮಾಜದಿಂದ ಏರ್ಪಡಿಸಲಾಗಿದ್ದ ಐಎಎಸ್, ಕೆಎಎಸ್, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ಕಾರ್ಯಕ್ರಮವನ್ನು ಜಿ.ಬಿ.ವಿನಯಕುಮಾರ ಉದ್ಘಾಟಿಸಿ ಮಾತನಾಡಿದರು. | Kannada Prabha

ಸಾರಾಂಶ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶೋಷಿತರು, ಹಿಂದುಳಿದ ಮತ್ತು ಆರ್ಥಿಕವಾಗಿ ಹಿಂದುಳಿದವರ ಸಮಾಜದ ಮುಖ್ಯವಾಹಿನಿಗೆ ತರುವ ಮನಸುಗಳು ಕ್ಷೀಣವಾಗುತ್ತಿವೆ. ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದವರು ಐಎಎಸ್, ಐಪಿಎಸ್‌ನಲ್ಲಿ ಗಮನಾರ್ಹ ಸಾಧನೆ ಮಾಡುತ್ತಿಲ್ಲ. ಇದಕ್ಕೆ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಸಿಗದಿರುವುದೇ ಕಾರಣ ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ. ವಿನಯ್ ಕುಮಾರ್ ಹೇಳಿದ್ದಾರೆ.

- ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ವಿನಯಕುಮಾರ್‌

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶೋಷಿತರು, ಹಿಂದುಳಿದ ಮತ್ತು ಆರ್ಥಿಕವಾಗಿ ಹಿಂದುಳಿದವರ ಸಮಾಜದ ಮುಖ್ಯವಾಹಿನಿಗೆ ತರುವ ಮನಸುಗಳು ಕ್ಷೀಣವಾಗುತ್ತಿವೆ. ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದವರು ಐಎಎಸ್, ಐಪಿಎಸ್‌ನಲ್ಲಿ ಗಮನಾರ್ಹ ಸಾಧನೆ ಮಾಡುತ್ತಿಲ್ಲ. ಇದಕ್ಕೆ ಉತ್ಕೃಷ್ಟ ಗುಣಮಟ್ಟದ ಶಿಕ್ಷಣ ಸಿಗದಿರುವುದೇ ಕಾರಣ ಎಂದು ಇನ್ ಸೈಟ್ಸ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕ ಜಿ.ಬಿ. ವಿನಯ್ ಕುಮಾರ್ ಹೇಳಿದರು.

ನಗರದ ಜಯದೇವ ಸರ್ಕಲ್ ಸಮೀಪದ ಪ್ರವಾಸಿ ಮಂದಿರದ ಎದುರಿನ ಟಿ.ಎಂ. ಚಿನ್ನಮ್ಮ ಮಹೇಶ್ವರಯ್ಯ ಮೆಮೋರಿಯಲ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮಹಿಳಾ ಸೇವಾ ಸಮಾಜ ವತಿಯಿಂದ ಏರ್ಪಡಿಸಲಾಗಿದ್ದ ಐಎಎಸ್, ಕೆಎಎಸ್ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಅವರು ಮಾತನಾಡಿದರು.

ಸಾಹಿತ್ಯ, ಪುಸ್ತಕಗಳು ಹಾಗೂ ದಿನಪತ್ರಿಕೆ ಓದದೇ ಇದ್ದರೆ ಯಾವುದೇ ಸರ್ಕಾರಿ ಹುದ್ದೆಯಾಗಲೀ, ಐಎಎಸ್, ಐಪಿಎಸ್ ಪಾಸ್ ಆಗಲು ಸಾಧ್ಯವಿಲ್ಲ. ಕಷ್ಟಪಟ್ಟರೆ, ಶ್ರಮ ವಹಿಸಿದರೆ ಉನ್ನತ ಹುದ್ದೆಗೆ ಹೋಗಲು ಎಲ್ಲರಿಗೂ ಅವಕಾಶವಿದೆ. ನನ್ನ ಕಡೆಯಿಂದ ಆದಷ್ಟು ಸಹಕಾರ ನೀಡಲಾಗುವುದು. ನೀವು ಮನಸ್ಸು ಮಾಡಬೇಕು, ಶ್ರಮ ವಹಿಸಬೇಕು. ಎಸ್ಸಿ, ಎಸ್ಟಿ, ಒಬಿಸಿ ಸಮುದಾಯದವರು ಐಎಎಸ್, ಐಪಿಎಸ್ ಆಗುವುದು ತುಂಬಾನೇ ಕಡಿಮೆ. 600ರಿಂದ 1000 ರ್ಯಾಂಕ್ ನೊಳಗೆ ಇರುತ್ತಾರೆ. ಮುಂದುವರಿದ ವರ್ಗದವರೇ ಹೆಚ್ಚು ಐಎಎಸ್, ಐಪಿಎಸ್ ಆಗುತ್ತಾರೆ. ಇದಕ್ಕೆ ಕಾರಣ ನೂರಾರು ವರ್ಷಗಳಿಂದ ಅವರು ಪಡೆದುಕೊಂಡ ಶಿಕ್ಷಣವೇ ಕಾರಣ ಎಂದು ವಿಶ್ಲೇಷಿಸಿದರು.

ಕಾಲೇಜಿನ ಪ್ರಾಂಶುಪಾಲ ಪ್ರಸನ್ನ ರೆಡ್ಡಿ ಎಂ.ಎಚ್. ಅಧ್ಯಕ್ಷತೆ ವಹಿಸಿದ್ದರು. ಆಡಳಿತಾಧಿಕಾರಿ ಎ. ವಾಮದೇವಪ್ಪ, ನಿರ್ದೇಶಕರಾದ ನೀಲಮ್ಮ ಬೆಳ್ಳುಳ್ಳಿ, ಪಿ.ಗೌರಮ್ಮ ಹಾಗೂ ಕಾಲೇಜಿನ ಬೋಧಕ, ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.

- - -

-7ಕೆಡಿವಿಜಿ43.ಜೆಪಿಜಿ:

ಕಾರ್ಯಕ್ರಮವನ್ನು ಜಿ.ಬಿ.ವಿನಯಕುಮಾರ ಸಸಿಗೆ ನೀರೆರೆಯುವ ಮೂಳಕ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಿರಂತರ ಕೃಷಿ ಚಟುವಟಿಕೆಯಿಂದ ಕೃಷಿ ಲಾಭದಾಯಕ: ಉಮಾನಾಥ ಕೋಟ್ಯಾನ್
ನಿಟ್ಟೆಯಲ್ಲಿ ಎನ್. ವಿನಯ್ ಹೆಗ್ಡೆ ಅಂತ್ಯ ಸಂಸ್ಕಾರ