ಕನ್ನಡಪ್ರಭ ವಾರ್ತೆ ಹರಿಹರ ಹೊಸಪೇಟೆಯಲ್ಲಿ ಮೇ 20ರಂದು ನಡೆಯಲಿರುವ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಸಮಾವೇಶಕ್ಕೆ ಅಧಿಕಾರಿಗಳಿಗೆ ತಾಲೂಕಿನ ಅರ್ಹರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕು. ಈ ನಿಟ್ಟಿನಲ್ಲಿ ವಿಶೇಷವಾಗಿ ಬಸ್ ಚಾಲಕ ಹಾಗೂ ನಿರ್ವಾಹಕರು ಸಹ ಗಮನಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಾಕೀತು ಮಾಡಿದರು.
ಶಾಸಕ ಬಿ.ಪಿ. ಹರೀಶ್ ಮಾತನಾಡಿ, ಅಧಿಕಾರಿಗಳು ಮೈಮರೆಯದೇ ಹೆಚ್ಚಿನ ಕಾಳಜಿಯೊಂದಿಗೆ ಫಲಾನುಭವಿಗಳನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಬೇಕು. ಸರ್ಕಾರದಲ್ಲಿ ಪ್ರಭಾವಿ ಮಂತ್ರಿಗಳಾದ ತಾವುಗಳು ನಮ್ಮ ಕ್ಷೇತ್ರದ ಅಭಿವೃದ್ಧಿಗೂ ಕೈ ಜೋಡಿಸುವಂತೆ ಮನವಿ ಮಾಡಿದರು.
ತಹಸೀಲ್ದಾರ್ ಕೆ.ಎಂ. ಗುರುಬಸವರಾಜ್ ಮಾತನಾಡಿ, ತಾಲೂಕಿನ 23 ಗ್ರಾ.ಪಂ.ಗಳಿಂದ ತಲಾ 50ರಂತೆ 1107 ಫಲಾನುಭವಿಗಳನ್ನು ಗುರುತಿಸಲಾಗಿದೆ. 22 ಬಸ್ಗಳಲ್ಲಿ ಹೊಸಪೇಟೆ ಸಮಾವೇಶಕ್ಕೆ ಕರೆದುಕೊಂಡು ಹೋಗಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ಜಿಲ್ಲಾಧಿಕಾರಿ ಸೂಚನೆಯಂತೆ ತಾಲೂಕುಮಟ್ಟದ ಅಧಿಕಾರಿಗಳನ್ನು ಪ್ರತಿ ಗ್ರಾ.ಪಂ.ಗಳಿಗೆ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಅಗತ್ಯ ಸೌಕರ್ಯ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ಈ ಸಂದರ್ಭ ತಾಪಂ ಇಒ ಎಸ್.ಪಿ. ಸುಮಲತಾ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಎನ್.ಎಚ್. ಶ್ರೀನಿವಾಸ್, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.- - -
-16ಎಚ್ಆರ್ಆರ್ 03: