ಮರಣಾನಂತರ ನೇತ್ರದಾನದಿಂದ ದೃಷ್ಟಿಹೀನರ ಬದುಕಿಗೆ ಬೆಳಕು: ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ

KannadaprabhaNewsNetwork |  
Published : Sep 08, 2026, 03:00 AM IST
ಕೊಪ್ಪಳ ನಗರದ ಗವಿಮಠ ಆವರಣದಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕೋತ್ಸವದ ಅಂಗವಾಗಿ ನೇತ್ರದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜರುಗಿದ ಜನಜಾಗೃತಿ ಜಾಥಾಕ್ಕೆ ಗವಿಶ್ರೀ ಚಾಲನೆ ನೀಡಿದರು. | Kannada Prabha

ಸಾರಾಂಶ

ಕೊಪ್ಪಳ ನಗರದ ಗವಿಮಠ ಆವರಣದಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕೋತ್ಸವದ ಅಂಗವಾಗಿ ನೇತ್ರದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜನಜಾಗೃತಿ ಜಾಥಾ ಆಯೋಜಿಸಲಾಗಿತ್ತು.

ಕೊಪ್ಪಳ: ನೇತ್ರದಾನದಿಂದ ದೃಷ್ಟಿಹೀನರ ಬದುಕಿಗೆ ಬೆಳಕು ಕೊಡುವ ಕೆಲಸ ಆಗುತ್ತದೆ ಎಂದು ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ನಗರದ ಗವಿಮಠ ಆವರಣದಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕೋತ್ಸವದ ಅಂಗವಾಗಿ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆ, ಕೊಪ್ಪಳ ಹಾಗೂ ಶ್ರೀ ಗುರು ಮಹಿಪತೀರಾಜ್ ನೇತ್ರ ಭಂಡಾರ ಹಾಗೂ ಸಂಶೋಧನ ಪ್ರತಿಷ್ಠಾನ, ಹುಬ್ಬಳ್ಳಿ ವತಿಯಿಂದ ನೇತ್ರದಾನದ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಜರುಗಿದ ಜನಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಮರಣಾನಂತರ ನೇತ್ರದಾನ ಮಾಡುವ ಮೂಲಕ ದೃಷ್ಟಿಹೀನರ ಬದುಕಿಗೆ ಬೆಳಕು ನೀಡಬಹುದು. ನೇತ್ರದಾನದ ಬಗ್ಗೆ ಸಮಾಜದಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸತ್ತಮೇಲೂ ನಾವು ಜಗತ್ತನ್ನು ನೋಡಬೇಕು ಎಂದರೆ ಅದು ನೇತ್ರದಾನದಿಂದ ಸಾಧ್ಯ. ನೇತ್ರದಾನ ಕಾರ್ಯ ಅತ್ಯಂತ ಶ್ರೇಷ್ಠ ಎಂದರು.

ನೇತ್ರದಾನದ ಮಹತ್ವವನ್ನು ಸಾರುವ ಘೋಷಣೆಗಳನ್ನು ಕೂಗುತ್ತ ಹಾಗೂ ಜಾಗೃತಿ ಫಲಕಗಳನ್ನು ಪ್ರದರ್ಶಿಸುತ್ತ ಜಾಥಾ ಕೊಪ್ಪಳ ಗವಿಮಠ ಆವರಣದಿಂದ ಪ್ರಾರಂಭವಾಗಿ ಗಂಜ್ ಸರ್ಕಲ್ ಮುಖಾಂತರ ಹೊಸಪೇಟೆ ರಸ್ತೆಯಲ್ಲಿರುವ ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯಲ್ಲಿ ಮುಕ್ತಾಯಗೊಂಡಿತು. ಈ ಕಾರ್ಯಕ್ರಮ ನೇತ್ರದಾನ ಮಾಡುವ ಕುರಿತು ಸಾರ್ವಜನಿಕರಲ್ಲಿ ಪ್ರೇರಣೆ ನೀಡಲು ಯಶಸ್ವಿಯಾಯಿತು.

ಕೊಪ್ಪಳ ಜಿಲ್ಲಾ ಅಂಧತ್ವ ನಿವಾರಣಾ ಅಧಿಕಾರಿ ಪ್ರಕಾಶ್ ಎಚ್. ಕೊಪ್ಪಳ, ನಗರದ ಪ್ರಮುಖರಾದ ಪದಮ್ ಮೆಹತಾ, ಎಂ.ಎಂ. ಜೋಶಿ ಆಸ್ಪತ್ರೆಯ ಸಿಇಒ ಕುತುಬುದ್ದೀನ್‌ ಮುಲ್ಲಾ, ನೇತ್ರ ತಜ್ಞ ಡಾ. ವಾಗೀಶ್ ತೆಗ್ಗಿನಕೇರಿಮಠ, ಡಾ. ಗಿರಿಜಾ ಪಾಟೀಲ್, ಶಾಖೆಯ ಮುಖ್ಯಸ್ಥ ವಿಕ್ರಮ್ ಗುಡಗೇರಿ, ಮಾರ್ಕೆಟಿಂಗ್ ವ್ಯವಸ್ಥಾಪಕ ಬಸಯ್ಯ ಹಿರೇಮಠ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರಿಯೇಟಿವ್ ಗುರುದೇವೋಭವ: ಹಾಜಬ್ಬರಿಗೆ ಗೌರವ
ಭ್ರಷ್ಟರಿಂದಲೇ ಭ್ರಷ್ಟಾಚಾರದ ಆರೋಪ: ನವೀನ್ ನಾಯಕ್ ಆರೋಪ